ಮಡಿಕೇರಿ ಕೋಟೆ ನವೀಕರಣ; ಕಾಮಗಾರಿ ಶೀಘ್ರವಾಗಿ ಮುಗಿಸಲು ಡಿಸಿ ಸೂಚನೆ
ಮಡಿಕೇರಿ, ಆಗಸ್ಟ್ 11; ಸ್ವಾತಂತ್ರ್ಯ ದಿನಾಚರಣೆ 2023ರ ಹಿನ್ನಲೆಯಲ್ಲಿ ಮಡಿಕೇರಿ ನಗರದ ಕೋಟೆಯಲ್ಲಿ ನಡೆಯುತ್ತಿರುವ ನವೀಕರಣ ಕಾಮಗಾರಿಯನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಪರಿಶೀಲಿಸಿದರು. ಕರ್ನಾಟಕ ಸರ್ಕಾರ ಕೋಟೆ ಅಭಿವೃದ್ಧಿಗೆ 10.76 ಕೋಟಿ ರೂ ಬಿಡುಗಡೆ ಮಾಡಿದೆ.
ಜಿಲ್ಲಾಧಿಕಾರಿಗಳು ಡಿವೈಎಸ್ಪಿ ಜಗದೀಶ್, ಸಿಪಿಐ ಅನೂಪ್ ಮಾದಪ್ಪ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿಯರ್ ವೈ. ಎಸ್. ಸಿದ್ದೇಗೌಡ, ಪಂಚಾಯತ್ ರಾಜ್ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಸುರೇಶ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್ ಮುಂತಾದವರ ಜೊತೆ ಕೋಟೆ ಕಾಮಗಾರಿ ವೀಕ್ಷಣೆ ಮಾಡಿದರು.

ನಗರದ ಕೋಟೆಯಲ್ಲಿ ಕಾಮಗಾರಿ ನಡೆಯುತ್ತಿರುವುದರಿಂದ ಯಾವ ಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ 2023ರ ವೇದಿಕೆ ನಿರ್ಮಾಣ ಮಾಡುವುದು?, ಧ್ವಜಾರೋಹಣ, ಪೊಲೀಸ್ ಕವಾಯತು ಮುಂತಾದ ಅಂಶಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಇಂಜಿನಿರ್ಗಳ ಜೊತೆ ಡಿಸಿ ಚರ್ಚಿಸಿದರು.
ಸ್ವಾತಂತ್ರ್ಯ ದಿನಾಚರಣೆ ನಡೆಯುವ ಕೋಟೆ ಆವರಣದಲ್ಲಿ ನಗರಸಭೆ ವತಿಯಿಂದ ಸ್ವಚ್ಚತಾ ಕಾರ್ಯವನ್ನು ಕೈಗೊಳ್ಳಲಾಗಿದೆ, ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮಾಚರಣೆಯಿಂದ ಆಚರಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
10.76 ಕೋಟಿ ರೂ. ಅನುದಾನ; ಕರ್ನಾಟಕ ಸರ್ಕಾರ ಮಡಿಕೇರಿ ನಗರದ ಕೋಟೆ ಅಭಿವೃದ್ಧಿಗೆ 10.76 ಕೋಟಿ ರೂ. ಬಿಡುಗಡೆ ಮಾಡಿದೆ. ಕೋಟೆ ನವೀಕರಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪುರಾತತ್ವ ಇಲಾಖೆಯ ಬಿಪಿನ್ಚಂದ್ರ ನೇಗಿ ಮಾತನಾಡಿ, "ಛಾವಣಿ ಕೆಲಸ ಪೂರ್ಣಗೊಂಡಿದ್ದು, ಪ್ಲಾಸ್ಟಿಂಗ್ ಕಾರ್ಯ ಪೂರ್ಣಗೊಳ್ಳುವ ಹಂತದಲ್ಲಿದೆ. ಪಾಲಿಶ್ ಕೆಲಸ ಜೊತೆಗೆ ಸುಣ್ಣ, ಬಣ್ಣ ಕೆಲಸ ಭರದಿಂದ ಸಾಗಿದ್ದು, ಡಿಸೆಂಬರ್ ವೇಳೆಗೆ ಕೋಟೆಯ ನವೀಕರಣ ಕಾಮಗಾರಿ ಕೆಲಸ ಪೂರ್ಣಗೊಳ್ಳಲಿದೆ" ಎಂದು ಮಾಹಿತಿ ಕೊಟ್ಟರು.
ಜಿಲ್ಲಾಧಿಕಾರಿಗಳು ಕೋಟೆಯ ನೆಲ ಮಹಡಿ ಮತ್ತು ಮೊದಲ ಮಹಡಿ ಕಾಮಗಾರಿ ವೀಕ್ಷಿಸಿದರು. ಹಾಗೆಯೇ ಕೋಟೆಯ ಸುತ್ತಮುತ್ತಲಿನ ಎಲ್ಲಾ ಕಡೆಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಪುರಾತತ್ವ ಇಲಾಖೆಯ ಸೋಮ್ಲ ನಾಯಕ್, ಸುನಿಲ್ ಕುಮಾರ್ ಕೋಟೆ ನವೀಕರಣ ಕಾಮಗಾರಿ ಕುರಿತು ವಿವರಣೆ ನೀಡಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, "ನಗರದ ಕೋಟೆಯು ಹೃದಯ ಭಾಗದಲ್ಲಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆಯನ್ನು ಮತ್ತಷ್ಟು ಅಭಿವೃದ್ಧಿಗೊಳಿಸಬೇಕು" ಎಂದು ಹೇಳಿದರು.
ಆಗಸ್ಟ್ 15ರ ಮಂಗಳವಾರ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಮಡಿಕೇರಿ ನಗರದ ಕೋಟೆ ಆವರಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಜೊತೆ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲಿಸಿದರು.
ಹೈಕೋರ್ಟ್ಗೆ ಸಹ ಅರ್ಜಿ; ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಮಡಿಕೇರಿ ನಗರದ ಕೋಟೆ ನವೀಕರಣ ಕಾರ್ಯ ಕೈಗೊಳ್ಳಲಾಗಿದೆ. ಮಳೆ ನೀರು ಸೋರಿಕೆಯಾಗಿ ಕುಸಿಯುವ ಹಂತ ತಲುಪಿದ್ದ ಕೋಟೆಯನ್ನು ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುತ್ತಿದೆ.
ಶತಮಾನಗಳ ಇತಿಹಾಸವಿರುವ ಮಡಿಕೇರಿ ಕೋಟೆ ಸರಿಯಾದ ನಿರ್ವಹಣೆ ಇಲ್ಲದೇ ಕುಸಿಯುವ ಹಂತಕ್ಕೆ ತಲುಪಿತ್ತು. ಕೋಟೆಯನ್ನು ದುರಸ್ತಿ ಮಾಡಬೇಕು ಎಂದು ಆಲೂರು ಸಿದ್ದಾಪುರ ನಿವಾಸಿ ಜೆ. ಎಸ್. ವಿರೂಪಾಕ್ಷಯ್ಯ ಕರ್ನಾಟಕ ಹೈಕೋರ್ಟ್ಗೆ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು.
ಮಡಿಕೇರಿ ಕೋಟೆ ಆವರಣ ಸುಮಾರು 16 ಎಕರೆಯನ್ನು ಒಳಗೊಂಡಿದೆ. ಕಟ್ಟಡ ಶಿಥಿಲವಾದ ಬಳಿಕ ಇಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದ ಸುಮಾರು 32 ಇಲಾಖೆಗಳು ಬೇರೆ ಕಡೆ ಸ್ಥಳಾಂತರಗೊಂಡಿದ್ದವು. ಬಳಿಕ ಕರ್ನಾಟಕ ಸರ್ಕಾರ ಕೋಟೆಯ ನವೀಕರಣಕ್ಕೆ ಹಣ ಬಿಡುಗಡೆ ಮಾಡಿತ್ತು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications