ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲಾಡಳಿತದಿಂದ ಹೊರ ಹೋಗಲು, ಬರಲು ಪಾಸ್‌ ವಿತರಣೆ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಮಾರ್ಚ್ 23: ಕೊರೊನಾ ಸೋಂಕು ತಡೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಅನ್ವಯ ಕೊಡಗು ಜಿಲ್ಲೆಯಿಂದ ಹೊರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಎಲ್ಲ ಚೆಕ್‌ ಪೋಸ್ಟ್‌ ಗಳಲ್ಲೂ ಕಟ್ಟುನಿಟ್ಟಿನ ತಡೆ ಹಾಕಲಾಗಿದೆ. ಅಗತ್ಯ ವಸ್ತುಗಳ ವಾಹನಗಳನ್ನು ಮಾತ್ರ ಪರಿಶೀಲನೆ ನಡೆಸಿ ಒಳಗೆ ಬಿಡಲಾಗುತ್ತಿದೆ.

ಈಗಾಗಲೇ ಸಾರಿಗೆ ಬಸ್ ಸೇವೆ ಸ್ಥಗಿತಗೊಂಡಿದ್ದು ಅಲ್ಲಲ್ಲಿ ಆಟೋಗಳ ಸಂಚಾರ ಕಂಡುಬರುತ್ತಿದೆ. ಕುಶಾಲನಗರ-ಮೈಸೂರು, ಶನಿವಾರಸಂತೆ-ಹಾಸನ, ವಿರಾಜಪೇಟೆ ಸಂಪರ್ಕ ಕಲ್ಪಿಸುವ ಕುಟ್ಟ ಮತ್ತು ಮಾಕುಟ್ಟ ಗಡಿ, ದಕ್ಷಿಣ ಕನ್ನಡ -ಮಡಿಕೇರಿ ಗಡಿ ಸಂಪಾಜೆಯಲ್ಲಿ ಬಂದ್ ಮಾಡಲಾಗಿದ್ದು, ಇನ್ನು 10 ದಿನಗಳ ಕಾಲ ವಾಹನ ಸಂಚಾರವನ್ನು ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ.

Kodagu District Administration Distributing Passes For Needed People

 ಕೊಡಗಿನಲ್ಲಿ ಮಾ.31 ರವರೆಗೆ ನಿಷೇಧಾಜ್ಞೆ ಮುಂದುವರಿಕೆ : ಡಿಸಿ ಕೊಡಗಿನಲ್ಲಿ ಮಾ.31 ರವರೆಗೆ ನಿಷೇಧಾಜ್ಞೆ ಮುಂದುವರಿಕೆ : ಡಿಸಿ

ಪಿಯುಸಿ ಪರೀಕ್ಷೆ ಮುಂದಕ್ಕೆ ಹಾಕಿರುವುದರಿಂದ ಜಿಲ್ಲೆಯ ವಿದ್ಯಾರ್ಥಿಗಳು ತಮ್ಮ ಹುಟ್ಟೂರಿಗೆ ಆಗಮಿಸಲು ಇಚ್ಛಿಸುವವರು ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ನೀಡಿ ಅನುಮತಿ ಪಡೆಯಬಹುದಾಗಿದೆ. ಚೆಕ್‌ ಪೋಸ್ಟ್‌ ಗಳಲ್ಲಿ ತುರ್ತು ಆರೋಗ್ಯ ನಿಮಿತ್ತ ಹೊರ ಹೋಗುವ ನಾಗರಿಕರಿಗೆ ಪಾಸ್‌ ಗಳನ್ನು ವಿತರಣೆ ಮಾಡಲಾಗುತ್ತಿದೆ. ಇನ್ನು ಉಳಿದಂತೆ ವಾಣಿಜ್ಯ ವಹಿವಾಟು ಸ್ಥಗಿತಗೊಂಡಿದ್ದು, ಅಗತ್ಯವಾದ ವಸ್ತುಗಳನ್ನು ಮಾರಾಟ, ಔಷಧೀಯ ಸೇವೆ, ಆಸ್ಪತ್ರೆ, ತರಕಾರಿ, ಹಾಲು ಮಾರಾಟಕ್ಕೆ ಅನುಮತಿ ನೀಡಲಾಗಿದೆ.

English summary
Kodagu district administration is distributing passes to people who are in going outside for health reason
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X