ಮಾರ್ಗಸೂಚಿ ಉಲ್ಲಂಘನೆ: ವಿರಾಜಪೇಟೆ ದಂತ ವೈದ್ಯಕೀಯ ಕಾಲೇಜು ವಿರುದ್ಧ ಮೊಕದ್ದಮೆ
ಕೊಡಗು, ಏಪ್ರಿಲ್ 27: ಕೊರೊನಾ ವೈರಸ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದ್ದರೂ, ವಿರಾಜಪೇಟೆಯ ಖಾಸಗಿ ಡೆಂಟಲ್ ಕಾಲೇಜ್ ಕೊರೊನಾ ನಿಯಮವನ್ನು ಗಾಳಿಗೆ ತೂರಿದ ಪರಿಣಾಮ ಕಾಲೇಜು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಡೆಂಟಲ್ ಕಾಲೇಜಿನಲ್ಲಿ ತರಗತಿಗಳು ನಡೆಸುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ವಿರಾಜಪೇಟೆ ತಹಶೀಲ್ದಾರ ಆರ್.ಯೋಗಾನಂದ್ ಪೊಲೀಸರೊಂದಿಗೆ ಸೋಮವಾರ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ಕಾಲೇಜಿನ ಮೇಲೆ ಏಕಾಏಕಿ ದಾಳಿ ಮಾಡಿದರು.
ಈ ವೇಳೆ ಕಾಲೇಜಿನಲ್ಲಿ ಕೋವಿಡ್ ನಿಯಮಗಳನ್ನು ಮೀರಿ ಆಂತರಿಕ ಪರೀಕ್ಷೆಗಳನ್ನು ನಡೆಸುತ್ತಿರುವುದು ಕಂಡು ಬಂತು. ದಂತ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲ್ಯಾಬ್ ತರಗತಿಗಳನ್ನು ನಡೆಸುತ್ತಿದ್ದನ್ನು ಗಮನಿಸಿದರು. ಈ ವೇಳೆ ಉಪನ್ಯಾಸಕರನ್ನು ವಿಚಾರಿಸಿದಾಗ ನಾವು ಯಾವುದೇ ತರಗತಿ ನಡೆಸುತ್ತಿರಲಿಲ್ಲ. ಸಂಶೋಧನೆಗೆ ಸಂಬಂಧಿಸಿದಂತೆ ಕೆಲಸ ಮಾಡುತ್ತಿದ್ದೆವು ಎಂದು ಸಮಾಜಾಯಿಷಿ ನೀಡಿದ್ದಾರೆ.

ಇದೇ ವೇಳೆ ತರಗತಿ ಕೊಠಡಿಗಳಿಂದ ಹೊರಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಕೇಳಿದಾಗ ವಿದ್ಯಾರ್ಥಿಗಳು ಲ್ಯಾಬ್ ತರಗತಿಯಲ್ಲಿ ಇದ್ದೆವು ಎನ್ನುವುದನ್ನು ಒಪ್ಪಿಕೊಂಡರು. ಜೊತೆಗೆ ಕಾಲೇಜು ಆವರಣದಲ್ಲಿರುವ ಹೋಟೆಲಿನಲ್ಲಿ ವಿದ್ಯಾರ್ಥಿಗಳಿಗೆ ಅಲ್ಲಿಯೇ ಊಟ ನೀಡಲಾಗುತ್ತಿತ್ತು. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಒಂದೊಂದು ಮೇಜಿನಲ್ಲೂ ಗುಂಪು ಗುಂಪಾಗಿ ಕುಳಿತು ಊಟ ಮಾಡುತ್ತಿದ್ದರು.
ತಕ್ಷಣವೇ ಎಚ್ಚೆತ್ತುಕೊಂಡು ತಹಶೀಲ್ದಾರ ಇದ್ದ ಸ್ಥಳಕ್ಕೆ ಬಂದ ಕಾಲೇಜು ಡೀನ್ ತರಗತಿ ನಡೆಸುವುದಕ್ಕೆ ನಮಗೆ ಅವಕಾಶ ಇದೆ ಎಂದು ಸಮಜಾಯಿಷಿ ನೀಡಲು ಪ್ರಯತ್ನಿಸಿದರು. ಆದರೆ ತಹಶೀಲ್ದಾರ ಅವರು ಎಲ್ಲವನ್ನೂ ಪರಿಶೀಲಿಸಿದರು.

Recommended Video
ಕಾಲೇಜು ವಿರುದ್ಧ ಶಿಸ್ತು ಕ್ರಮ ಕೈಗೊಂಡು ಸರ್ಕಾರದ ನಿಯಮದ ಪ್ರಕಾರ ಪ್ರಕರಣ ದಾಖಲಿಸಲಾಗುವುದು. ಕಾಲೇಜಿನಲ್ಲಿ ಹಲವು ವಿಷಯಗಳಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ಕಾಲೇಜು ವಿರುದ್ಧ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications