ರಾಜ್ಯಸಭಾ ಮಾಜಿ ಸದಸ್ಯ ಎಫ್.ಎಂ.ಖಾನ್ ವಿಧಿವಶ
ಮಡಿಕೇರಿ, ಜುಲೈ 22:: ರಾಜಕೀಯ ಮುತ್ಸದ್ಧಿ, ಬೊಯಿಕೇರಿಯ ಯೂಸೂಫ್ ಅಲಿಖಾನ್ ಮೆಮೋರಿಯಲ್ ಗಾರ್ಡನ್ ನ ಮಾಲೀಕರಾಗಿದ್ದ ಮಾಜಿ ರಾಜ್ಯಸಭಾ ಸದಸ್ಯ ಫಯಾಜ್ ಮೊಹಮದ್ ಖಾನ್ (82) ಅವರು ಗುರುವಾರ ನಿಧನರಾಗಿದ್ದು, ಅಂತ್ಯಕ್ರಿಯೆ ಗುಡ್ಡೆಹೊಸೂರು ಬಳಿ ರಸೂಲ್ ಫಾರಂನಲ್ಲಿ ಶುಕ್ರವಾರ ಮುಸ್ಲಿಂ ಧರ್ಮದ ವಿಧಿವಿಧಾನದಂತೆ ಬೆಳಿಗ್ಗೆ ನಡೆಯಿತು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ತಮ್ಮ ಬಲ್ಯಾಟ್ರಿ ತೋಟದ ಮನೆಯಲ್ಲಿ ನಿಧನರಾದರು.

ಬೋಯಿಕೇರಿಯ ತಮ್ಮ ಬಲ್ಯಾಟ್ರಿ ತೋಟದಿಂದ 1960 ರಿಂದಲೇ ರಾಜಕೀಯ ಆರಂಭಿಸಿದ ಅವರು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಇಂಡಿಯನ್ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ, ಹಲವು ಕ್ರೀಡಾ ಸಂಸ್ಥೆಗಳಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.[ಕಾಫಿ ತೋಟದ ಉದ್ಯಾನವನದಲ್ಲಿ ಪುಷ್ಪ ಪ್ರೇಮಿಗಳು]
1974ರಿಂದ 1982ರವರೆಗೆ ರಾಜ್ಯಸಭಾ ಸದಸ್ಯರಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಂದಿನ ಪ್ರಧಾನಮಂತ್ರಿ ಇಂದಿರಾಗಾಂಧಿ ಹಾಗೂ ಸಂಜಯ್ ಗಾಂಧಿಗೆ ಆಪ್ತರಾಗಿದ್ದರು. ಇನ್ನು ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಬಲಗೈ ಬಂಟರಾಗಿದ್ದರು.
1998ರ ಬಳಿಕ ರಾಜಕೀಯ ಜೀವನದಿಂದ ದೂರವಾಗಿ ಮಡಿಕೇರಿ ಬಳಿಯ ಬೋಯಿಕೇರಿಯ ಬಲ್ಯಾಟ್ರಿ ತೋಟದಲ್ಲೇ ವಾಸವಿದ್ದರು. ತಮ್ಮ ತಂದೆ ಆಲಿಖಾನ್ ಅವರು ಆರಂಭಿಸಿದ್ದ ಗಾರ್ಡನ್ ಅಭಿವೃದ್ಧಿ ಪಡಿಸಿ ಪ್ರತಿವರ್ಷ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದರು. ಮೃತ ಎಫ್.ಎಂ.ಖಾನ್ರವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. (ಒನ್ಇಂಡಿಯಾ ಸುದ್ದಿ)
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications