ರಾಜ್ಯಸಭಾ ಮಾಜಿ ಸದಸ್ಯ ಎಫ್.ಎಂ.ಖಾನ್ ವಿಧಿವಶ
ಮಡಿಕೇರಿ, ಜುಲೈ 22:: ರಾಜಕೀಯ ಮುತ್ಸದ್ಧಿ, ಬೊಯಿಕೇರಿಯ ಯೂಸೂಫ್ ಅಲಿಖಾನ್ ಮೆಮೋರಿಯಲ್ ಗಾರ್ಡನ್ ನ ಮಾಲೀಕರಾಗಿದ್ದ ಮಾಜಿ ರಾಜ್ಯಸಭಾ ಸದಸ್ಯ ಫಯಾಜ್ ಮೊಹಮದ್ ಖಾನ್ (82) ಅವರು ಗುರುವಾರ ನಿಧನರಾಗಿದ್ದು, ಅಂತ್ಯಕ್ರಿಯೆ ಗುಡ್ಡೆಹೊಸೂರು ಬಳಿ ರಸೂಲ್ ಫಾರಂನಲ್ಲಿ ಶುಕ್ರವಾರ ಮುಸ್ಲಿಂ ಧರ್ಮದ ವಿಧಿವಿಧಾನದಂತೆ ಬೆಳಿಗ್ಗೆ ನಡೆಯಿತು.
ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ತಮ್ಮ ಬಲ್ಯಾಟ್ರಿ ತೋಟದ ಮನೆಯಲ್ಲಿ ನಿಧನರಾದರು.

ಬೋಯಿಕೇರಿಯ ತಮ್ಮ ಬಲ್ಯಾಟ್ರಿ ತೋಟದಿಂದ 1960 ರಿಂದಲೇ ರಾಜಕೀಯ ಆರಂಭಿಸಿದ ಅವರು, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಇಂಡಿಯನ್ ಒಲಂಪಿಕ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ, ಹಲವು ಕ್ರೀಡಾ ಸಂಸ್ಥೆಗಳಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.[ಕಾಫಿ ತೋಟದ ಉದ್ಯಾನವನದಲ್ಲಿ ಪುಷ್ಪ ಪ್ರೇಮಿಗಳು]
1974ರಿಂದ 1982ರವರೆಗೆ ರಾಜ್ಯಸಭಾ ಸದಸ್ಯರಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಅಂದಿನ ಪ್ರಧಾನಮಂತ್ರಿ ಇಂದಿರಾಗಾಂಧಿ ಹಾಗೂ ಸಂಜಯ್ ಗಾಂಧಿಗೆ ಆಪ್ತರಾಗಿದ್ದರು. ಇನ್ನು ಅಂದಿನ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಬಲಗೈ ಬಂಟರಾಗಿದ್ದರು.
1998ರ ಬಳಿಕ ರಾಜಕೀಯ ಜೀವನದಿಂದ ದೂರವಾಗಿ ಮಡಿಕೇರಿ ಬಳಿಯ ಬೋಯಿಕೇರಿಯ ಬಲ್ಯಾಟ್ರಿ ತೋಟದಲ್ಲೇ ವಾಸವಿದ್ದರು. ತಮ್ಮ ತಂದೆ ಆಲಿಖಾನ್ ಅವರು ಆರಂಭಿಸಿದ್ದ ಗಾರ್ಡನ್ ಅಭಿವೃದ್ಧಿ ಪಡಿಸಿ ಪ್ರತಿವರ್ಷ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದರು. ಮೃತ ಎಫ್.ಎಂ.ಖಾನ್ರವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. (ಒನ್ಇಂಡಿಯಾ ಸುದ್ದಿ)
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications