ಕೊಡಗು: ಸಾಲ ಮರುಪಾವತಿಸದ್ದಕ್ಕೆ ನಾಯಿ ಕೈಲಿ ಕಚ್ಚಿಸಿದ ಎಸ್ಟೇಟ್ ಮಾಲಿಕ
ಮಡಿಕೇರಿ, ಸೆಪ್ಟಂಬರ್ 3: ಪಡೆದ ಸಾಲ ಮರುಪಾವತಿಸಿದ್ದಕ್ಕೆ ಎಸ್ಟೇಟ್ ಮಾಲಿಕನೊಬ್ಬ ಕೂಲಿ ಕಾರ್ಮಿಕನನ್ನು ಗೋದಾಮಿನಲ್ಲಿ ಕೂಡಿ ಹಾಕಿ ನಾಯಿಗಳಿಂದ ಕಚ್ಚಿಸಿದ ಅಮಾನವೀಯ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಬಾಳೆಲೆ ವ್ಯಾಪ್ತಿಯ ನೆಲ್ಲಿಕುಂಡಿ ಎಂಬಲ್ಲಿ ನಡೆದಿದೆ.
ಬಾಳೆಲೆ ಗ್ರಾಮದ ಕಾಫಿ ತೋಟದ ಮಾಲಿಕ ಹಾಗೂ ಕಾಫಿ ಮೆಣಸು ವ್ಯಾಪಾರಿಯೂ ಆದ ಕಿಶನ್ ಎಂಬುವನು ಈ ಹಿಂದೆ ಕಾರ್ಮಿಕ ಹರೀಶ್ ಎಂಬವರಿಗೆ 20 ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಸಾಲ ವಾಪಾಸ್ ಕೇಳಿದಾಗ ಮರುಪಾವತಿಗೆ ಸ್ವಲ್ಪ ದಿನ ಸಮಯ ಕೊಡುವಂತೆ ಹರೀಶ್ ಕೇಳಿಕೊಂಡಿದ್ದರು.

ಇದಕ್ಕೊಪ್ಪದ ಕಿಶನ್, ಆತನ ಗೆಳೆಯ ಮಧುವನ್ನು ಕರೆಸಿಕೊಂಡು ಆತನ ಜತೆಗೆ ಜೀಪಿನಲ್ಲಿ ಹರೀಶನನ್ನು ಕರೆದೊಯ್ದು ಬಲವಂತವಾಗಿ ತೋಟದ ಕಾಫಿ ಗೋದಾಮಿಗೆ ತಳ್ಳಿದ್ದಾರೆ. ನಂತರ ಮನೆಯ ನಾಯಿಗಳನ್ನು ಬಿಟ್ಟು ಕಚ್ಚಿಸಿ ಅಮಾನವೀಯ, ಕ್ರೂರವಾಗಿ ನಡೆದುಕೊಂಡಿದ್ದಾರೆ.
ನಾಯಿ ದಾಳಿಗೆ ಹರೀಶನ ಕಾಲು, ತಲೆ, ಬೆನ್ನು, ಕೈಗಳಿಗೆ ಗಾಯಗಳಾಗಿದ್ದು, ದುರುಳರು ಹರೀಶನನ್ನು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ನಂತರ ಇಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ನೀಡಲಾಗಿತ್ತು. ಇದೀಗ ಗೋಣಿಕೊಪ್ಪ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಳ ರೋಗಿಯಾಗಿ ಹರೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿಕಿತ್ಸೆ ಪಡೆದು ಬಂದ ಹರೀಶ್, ನಂತರ ಪೊನ್ನಂಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಕಾಫಿ ತೋಟದ ಮಾಲಿಕ ಕಿಶನ್ ಹಾಗೂ ಮಧು ಮೇಲೆ ಅಪಹರಣ ಹಾಗೂ ಜಾತಿ ನಿಂದನೆ ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಇದೀಗ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಈ ಹಿಂದೆಯೂ ಜಿಲ್ಲೆಯಲ್ಲಿ ಇಂಥಹ ಹಲವು ಘಟನೆಗಳು ನಡೆದಿದ್ದರೂ ಸರಕಾರ ಹಾಗೂ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಇದೇ ಇಲ್ಲಿನ ತೋಟದ ಮಾಲಿಕರಿಗೆ ಸಲುಗೆಯಾಗಿ ಪರಿಣಮಿಸಿದ್ದು ಆಗಾಗ ಇಂಥಹ ಘಟನೆಗಳು ನಡೆಯುತ್ತಿರುತ್ತವೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications