ಗುಂಡು ಹಾರಿಸಿಕೊಂಡು ಕೊಡಗು ಪ್ರಗತಿಪರ ಸಂಘದ ಅಧ್ಯಕ್ಷ ಆತ್ಮಹತ್ಯೆ
ಕೊತ್ತೋಳಿ ಅಪ್ಪಯ್ಯ ಮೇಲೆ ಜಾಗ ಅತಿಕ್ರಮಣ ಆರೋಪಗಳಿದ್ದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳಿಂದ ಕ್ರಮ, ಹತಾಶೆಯಿಂದ ಆತ್ಮಹತ್ಯೆಗೆ ಶರಣಾದ ಜನನಾಯಕ.
ಮಡಿಕೇರಿ: ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಎದೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.
ಕೊಡಗು ಪ್ರಗತಿಪರ ಸಂಘದ ಅಧ್ಯಕ್ಷ ಕೊತ್ತೋಳಿ ಅಪ್ಪಯ್ಯ (47) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಮಂಗಳವಾರ ಸಂಜೆ 6.30ರ ಸಮಯದಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಪ್ಪಯ್ಯ ಅವರು ಮೂಲತಃ ಮಡಿಕೇರಿ ತಾಲೂಕಿನ ಕಾರುಗುಂದ ನಿವಾಸಿಯಾಗಿದ್ದು, ಮಡಿಕೇರಿಯ ಚಾಮುಂಡೇಶ್ವರಿನಗರದಲ್ಲಿ ಕಳೆದ ಕೆಲವು ವರ್ಷಗಳ ಹಿಂದೆ ಜಾಗ ಅತಿಕ್ರಮಿಸಿಕೊಂಡು ಮನೆ ನಿರ್ಮಿಸಿ ವಾಸ ಮಾಡುತ್ತಿದ್ದರು.

ಇದು ಅತಿಕ್ರಮಣದ ಜಾಗವಾಗಿದ್ದರಿಂದ ಸಾರ್ವಜನಿಕರು ದೂರು ನೀಡಿದ್ದರಿಂದ ಕಂದಾಯ ಇಲಾಖೆಯವರು ಅವರ ಮನೆಯನ್ನು ತೆರವುಗೊಳಿಸಿತ್ತು. ಇದರಿಂದ ಜರ್ಜರಿತರಾದ ಅವರು ಅಲ್ಲಿಯೇ ಶೆಡ್ ಹಾಕಿಕೊಂಡು ವಾಸ್ತವ್ಯ ಮುಂದುವರೆಸಿದ್ದರು. ತಾನೊಬ್ಬ ಕೊಡಗು ಪ್ರಗತಿಪರ ಸಂಘದ ಅಧ್ಯಕ್ಷನಾಗಿದ್ದರಲ್ಲದೆ, ಮಾಜಿ ಸೈನಿಕರಿಗೆ ನಿವೇಶನ ಒದಗಿಸುವ ಸಲುವಾಗಿ ಹೋರಾಟವನ್ನು ನಡೆಸಿದ್ದರು. ಆದರೆ ಕಂದಾಯ ಇಲಾಖೆಯೇ ಮನೆಯನ್ನು ತೆರವುಗೊಳಿಸಿದ ಘಟನೆ ಅವರ ಮೇಲೆ ಪರಿಣಾಮ ಬೀರಿದ್ದು, ಮಾನಸಿಕವಾಗಿ ಜರ್ಜರಿತಗೊಂಡಿದ್ದರು ಎನ್ನಲಾಗಿದೆ.
ಮಂಗಳವಾರ ಪತ್ನಿ ಸ್ವಗ್ರಾಮ ಕಾರುಗುಂದಕ್ಕೆ ತೆರಳಿದ್ದು, ಪುತ್ರ ಮನೆಯಿಂದ ಹೊರ ಹೋಗಿದ್ದನು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡ ಅವರು ವಾಸವಿದ್ದ ಶೆಡ್ನಲ್ಲೇ ಸಂಜೆ 6.30ರ ವೇಳೆಗೆ ಕೋವಿಯಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡಿನ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ನಗರಠಾಣೆ ಪೊಲೀಸರು ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications