ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗು ಜಿಲ್ಲೆಯ ಹೋಬಳಿವಾರು ಮಳೆ ವಿವರ, ಹಾರಂಗಿ ಮಟ್ಟ ಎಷ್ಟು?

|
Google Oneindia Kannada News

ಮಡಿಕೇರಿ, ಸೆ.14: ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 32.22 ಮಿ.ಮೀ.ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 29.39 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2340.26 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2167.78 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 38.43 ಮಿ.ಮೀ. ಕಳೆದ ವರ್ಷ ಇದೇ ದಿನ 50.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 3253.67 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3006.28 ಮಿ.ಮೀ. ಮಳೆಯಾಗಿತ್ತು.

 ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ.14ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೆ.14ರಿಂದ ಭಾರಿ ಮಳೆ, ಆರೆಂಜ್ ಅಲರ್ಟ್ ಘೋಷಣೆ

ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 27.30 ಮಿ.ಮೀ. ಕಳೆದ ವರ್ಷ ಇದೇ ದಿನ 21.20 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1898.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2032.64 ಮಿ.ಮೀ. ಮಳೆಯಾಗಿತ್ತು.

ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 30.92 ಮಿ.ಮೀ. ಕಳೆದ ವರ್ಷ ಇದೇ ದಿನ 16.77 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1868.94 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1464.41 ಮಿ.ಮೀ. ಮಳೆಯಾಗಿತ್ತು.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ವಾರ್ಷಿಕ ವಾಡಿಕೆ ಮಳೆ ಪ್ರಮಾಣಕೊಡಗು ಜಿಲ್ಲೆಯಲ್ಲಿ ತಗ್ಗಿದ ವಾರ್ಷಿಕ ವಾಡಿಕೆ ಮಳೆ ಪ್ರಮಾಣ

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ: ಮಡಿಕೇರಿ ಕಸಬಾ 24.40, ನಾಪೊಕ್ಲು 35.60, ಸಂಪಾಜೆ 23.50, ಭಾಗಮಂಡಲ 70.20, ವಿರಾಜಪೇಟೆ ಕಸಬಾ 19.20, ಹುದಿಕೇರಿ 23, ಶ್ರೀಮಂಗಲ 49.60, ಪೊನ್ನಂಪೇಟೆ 27, ಅಮ್ಮತ್ತಿ 7.50, ಬಾಳೆಲೆ 37.50, ಸೋಮವಾರಪೇಟೆ ಕಸಬಾ 29, ಶನಿವಾರಸಂತೆ 30, ಶಾಂತಳ್ಳಿ 85.20, ಕೊಡ್ಲಿಪೇಟೆ 32.20, ಕುಶಾಲನಗರ 1.80, ಸುಂಟಿಕೊಪ್ಪ 7.30 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ (13-09-2021) ವರದಿ

ಹಾರಂಗಿ ಜಲಾಶಯದ ನೀರಿನ ಮಟ್ಟ (13-09-2021) ವರದಿ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2858.33 ಅಡಿಗಳು. ಕಳೆದ ವರ್ಷ ಇದೇ ದಿನ 2856.42 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 12.80 ಮಿ.ಮೀ., ಇಂದಿನ ನೀರಿನ ಒಳಹರಿವು 3928 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1976 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 3368 ಕ್ಯುಸೆಕ್, ನಾಲೆಗೆ 600 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 500 ಕ್ಯುಸೆಕ್, ನಾಲೆಗೆ 700 ಕ್ಯುಸೆಕ್.

ಅಧಿಕ ಮಳೆಯಾಗುವುದಾಗಿ ವರದಿ

ಅಧಿಕ ಮಳೆಯಾಗುವುದಾಗಿ ವರದಿ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ತಮಿಳುನಾಡು, ಕೇರಳ, ಪುದುಚೇರಿಯಲ್ಲಿ ಸೆಪ್ಟೆಂಬರ್ 15ರವರೆಗೂ ಮಳೆ ಮುಂದುವರೆಯುವುದಾಗಿ ಹೇಳಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮೂರ್ನಾಲ್ಕು ದಿನಗಳವರೆಗೂ ಅಧಿಕ ಮಳೆಯಾಗುವುದಾಗಿ ತಿಳಿಸಿದೆ.

 ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡಿ

ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡಿ

ಈ ಕುರಿತು ಧ್ವನಿ ಗೂಡಿಸಿದ ಎಂ.ಪಿ.ಅಪ್ಪಚ್ಚುರಂಜನ್ ಅವರು ಗರ್ವಾಲೆ, ಮುಟ್ಲು, ಶಾಂತಳ್ಳಿ, ಮಕ್ಕಂದೂರು, ಗಾಳಿಬೀಡು ವ್ಯಾಪ್ತಿಯಲ್ಲಿ ಕಳೆದ ವಾರ ವ್ಯಾಪಕ ಮಳೆಯಾಗಿದ್ದು, ಸಾಕಷ್ಟು ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಕೂಡಲೇ ವರದಿ ನೀಡುವಂತೆ ಸೂಚಿಸಿದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಕಳೆದ ನಾಲ್ಕು ವರ್ಷದಿಂದ ರೈತರು ಒಂದಲ್ಲ ಒಂದು ರೀತಿಯ ಪ್ರಾಕೃತಿಕ ವಿಕೋಪದಿಂದ ತೊಂದರೆಗೆ ಸಿಲುಕಿದ್ದರು. ಈ ಬಾರಿಯೂ ಸಹ ಬೆಳೆ ಹಾನಿಯಾಗಿದ್ದು, ಆದ್ದರಿಂದ ಸೂಕ್ತ ಪರಿಹಾರ ದೊರೆಯಬೇಕು ಎಂದು ಅವರು ಒತ್ತಾಯಿಸಿದರು. ಕಾಫಿ, ಅಡಿಕೆ, ಕರಿಮೆಣಸು ಬೆಳೆ ಸಂಬಂಧಿಸಿದಂತೆ ಮರು ಸರ್ವೇ ಆಗಬೇಕು ಎಂದರು.

Recommended Video

ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿದ ಪಾಕಿಸ್ತಾನ! | Oneindia Kannada

English summary
Heavy rainfall recorded in Kodagu district for the past one week, Here is Taluk/Hobli level rainfall data recorded as on September 14, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X