ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ 3 ದಿನಗಳ ಕಾಲ ಕೊಡಗು ಪ್ರವಾಸಿ ಉತ್ಸವ: ಈ ಬಾರಿಯ ವಿಶೇಷತೆಗಳೇನು ಗೊತ್ತೇ?

|
Google Oneindia Kannada News

ಮಡಿಕೇರಿ, ಜನವರಿ 11: ಮತ್ತೆ ಕೊಡಗಿನಲ್ಲಿ ಕೊಡಗು ಉತ್ಸವವನ್ನು ಆಚರಿಸುವ ಮೂಲಕ ಇಲ್ಲಿನ ಕಲೆ, ಸಂಸ್ಕೃತಿ, ಸಂಪ್ರದಾಯ, ಪ್ರವಾಸಿ ತಾಣಗಳ ಪರಿಚಯದೊಂದಿಗೆ ಪ್ರವಾಸಿಗರನ್ನು ಸೆಳೆಯುವ ಕಾರ್ಯಕ್ಕೆ ಜಿಲ್ಲಾಡಳಿತ ಮಂದಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೊಡಗು ಪ್ರವಾಸಿ ಉತ್ಸವ ಲಾಂಛನ ಬಿಡುಗಡೆ ಮಾಡಲಾಗಿದ್ದು, ಜ.11 ರಿಂದ 13 ರವರೆಗೆ ನಡೆಯುವ ಉತ್ಸವಕ್ಕೆ ಸರ್ವ ರೀತಿಯಲ್ಲಿಯೂ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕೊಡಗು ಉತ್ಸವಕ್ಕೆ ಜಿಲ್ಲಾಡಳಿತದೊಂದಿಗೆ ತೋಟಗಾರಿಕೆ ಹಾಗೂ ಪಶುಪಾಲನೆ ಇಲಾಖೆ ಸೇರಿದಂತೆ ಹಲವು ಸಂಘಸಂಸ್ಥೆಗಳು ಸಾಥ್ ನೀಡಲಿದೆ.

ಜ.11 ರಂದು ಸಂಜೆ 4.30 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪ್ರವಾಸೋದ್ಯಮ ಸಚಿವರಾದ ಸಾ.ರಾ.ಮಹೇಶ್ ಅವರು 'ಕೊಡಗು ಪ್ರವಾಸಿ ಉತ್ಸವಕ್ಕೆ' ಚಾಲನೆ ನೀಡಲಿದ್ದಾರೆ. ಬಳಿಕ ಗಾಂಧಿ ಮೈದಾನದಲ್ಲಿ ಸಂಜೆ 5 ರಿಂದ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಸ್ವಚ್ಛ,ಸುರಕ್ಷಿತ ಕುಂಭ ಮೇಳ ಸಿದ್ಧತೆ ಖುದ್ದು ಪರಿಶೀಲಿಸಿದ ಆದಿತ್ಯನಾಥ್ಸ್ವಚ್ಛ,ಸುರಕ್ಷಿತ ಕುಂಭ ಮೇಳ ಸಿದ್ಧತೆ ಖುದ್ದು ಪರಿಶೀಲಿಸಿದ ಆದಿತ್ಯನಾಥ್

ಸಂಜೆ 5.30 ಗಂಟೆಯಿಂದ 6.30 ರವರೆಗೆ ಕೊಡಗು ಸಾಹಿತ್ಯ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 6.30 ರಿಂದ 7.30 ರವರೆಗೆ ಎಂ.ಡಿ.ಪಲ್ಲವಿ ಮತ್ತು ತಂಡದವರಿಂದ ಜುಗಲ್ ಬಂದಿ, ಸಂಜೆ 7.30 ರಿಂದ 10 ಗಂಟೆಯವರೆಗೆ ಸರಿಗಮಪ ಲಿಟಲ್ ಚಾಂಪ್ಸ್ ಮಕ್ಕಳಾದ ಅಭಿನವ್, ಸುಪ್ರಿಯಾ ಜೋಷಿ, ಆಧ್ಯ, ಜ್ಞಾನೇಶ್, ಕೀರ್ತನಾ, ಪುಟ್ಟರಾಜು ಹೂಗಾರ್ ಇವರಿಂದ ಸಂಗೀತ ಸಂಜೆ ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಖ್ಯಾತಿಯ ಮಕ್ಕಳಿಂದ ನೃತ್ಯ ವೈಭವ ನಡೆಯಲಿದೆ. ಮುಂದೆ ಓದಿ...

ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ

ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿ

ಜ. 12 ರಂದು ಸಂಜೆ 5.30 ರಿಂದ 5.45 ರವರೆಗೆ ಭಾರತೀಯ ವಿದ್ಯಾಭವನ, ಕೊಡಗು ವಿದ್ಯಾಲಯದ ಶಿಕ್ಷಕರ ತಂಡದವರಿಂದ ನೃತ್ಯ, ಸಂಜೆ 5.45 ರಿಂದ 6.30 ರವರೆಗೆ ಹೇರಂಭ-ಹೇಮಂತ್ ಅವರಿಂದ ಕೊಳಲು ವಾದನ, ಸಂಜೆ 6.30 ರಿಂದ 10 ಗಂಟೆಯವರೆಗೆ ಸರಿಗಮಪ ಖ್ಯಾತಿಯ ಗಾಯಕರಾದ ಸುನೀಲ್, ಚನ್ನಪ್ಪ, ಶ್ರೀಹರ್ಷ, ಇಂಪನ, ಐಶ್ವರ್ಯ, ಸುಹಾನಾ, ಸೈಯದ್ ಅವರಿಂದ ಸಂಗೀತ ಸಂಜೆ, ನಂತರ ಸ್ಯಾಂಡಲ್ ವುಡ್ ನೈಟ್ಸ್ ಧಾರಾವಾಹಿ ಕಲಾವಿದರಿಂದ ನೃತ್ಯ ವೈಭವ (ನಮ್ರತಾ (ಪುಟ್ಟಗೌರಿ ಮದುವೆ), ದೀಪಿಕಾ ದಾಸ್(ನಾಗಿಣಿ), ದೀಪಿಕಾ (ಕುಲವಧು), ಭೂಮಿಕಾ(ಕಿನ್ನರಿ). ಜ. 13 ರಂದು ಸಂಜೆ 5.30 ರಿಂದ 6.30 ರವರೆಗೆ ಅರೆಭಾಷೆ ಅಕಾಡೆಮಿ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30 ರಿಂದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ತಂಡದವರಿಂದ ಸಂಗೀತ ರಸ ಸಂಜೆ (ವ್ಯಾಸರಾಜ್, ಅನುರಾಧ ಭಟ್, ಇಂದು ನಾಗರಾಜ್, ಲಕ್ಷ್ಮೀ ನಾಗರಾಜ್, ಸಂಜಿತ್ ಹೆಗ್ಡೆ, ಶ್ರೀನಿವಾಸ್),

ಸಂಕ್ರಾಂತಿ ಹಬ್ಬಕ್ಕಾಗಿ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ ಸೌಲಭ್ಯಸಂಕ್ರಾಂತಿ ಹಬ್ಬಕ್ಕಾಗಿ ಕೆಎಸ್ಸಾರ್ಟಿಸಿಯಿಂದ ವಿಶೇಷ ಬಸ್ ಸೌಲಭ್ಯ

ಫಲಪುಷ್ಪ ಪ್ರದರ್ಶನ

ಫಲಪುಷ್ಪ ಪ್ರದರ್ಶನ

ಜನವರಿ, 11 ರಿಂದ 13 ರವರೆಗೆ ಬೆಳಗ್ಗೆ 10 ರಿಂದ ರಾತ್ರಿ 8.30 ರವರೆಗೆ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಜನವರಿ,12 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಗಾಂಧಿ ಮೈದಾನದಲ್ಲಿ ಶ್ವಾನ ಪ್ರದರ್ಶನ ನಡೆಯಲಿದೆ. ಜನವರಿ,13 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಅಂಗವಾಗಿ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 8 ರಿಂದ 10 ಸಾವಿರ ಸಂಖ್ಯೆಯ ವಿವಿಧ ಜಾತಿಯ ಹೂವುಗಳಾದ ಪೇಟೂನಿಯಾ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡುಹೂ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ ಇತ್ಯಾದಿಗಳನ್ನು ಪಾತಿಯಲ್ಲಿ ನಾಟಿ ಮಾಡಲಾಗಿದೆ ಹಾಗೂ ಐದಾರು ಸಾವಿರ ಕುಂಡಗಳಲ್ಲಿ ವಿವಿಧ ಜಾತಿಯ ಹೂವುಗಳನ್ನು ಬೆಳೆಸಲಾಗಿದೆ.

 ನದಿ ಪ್ರೀತಿ ಹೆಚ್ಚಿಸುವ ರಿವರ್ ಫೆಸ್ಟ್ ಗೆ ಮಂಗಳೂರಿನಲ್ಲಿ ಭರದ ಸಿದ್ಧತೆ ನದಿ ಪ್ರೀತಿ ಹೆಚ್ಚಿಸುವ ರಿವರ್ ಫೆಸ್ಟ್ ಗೆ ಮಂಗಳೂರಿನಲ್ಲಿ ಭರದ ಸಿದ್ಧತೆ

ಪ್ರಮುಖ ಆಕರ್ಷಣೆಗಳು

ಪ್ರಮುಖ ಆಕರ್ಷಣೆಗಳು

ಕೊಡಗಿನ ಕುಲದೇವತೆಯಾದ ಕಾವೇರಿ ಮಾತೆಯ ಹಾಗೂ ಮಂಟಪದ ತೀರ್ಥೋದ್ಭವದ ಕುಂಡಿಕೆಯ ಕಲಾಕೃತಿಯನ್ನು 12 ಅಡಿ ಎತ್ತರದಲ್ಲಿ 15 ಅಡಿ ಉದ್ದದಲ್ಲಿ ವಿವಿಧ ಹೂವುಗಳಿಂದ ನಿರ್ಮಾಣ ಮಾಡಲಾಗುವುದು. ಮಕ್ಕಳಿಗೆ ಮನರಂಜನೆ ನೀಡುವಂತಹ ಸ್ಪೈಡರ್ ಮ್ಯಾನ್, ಮಿಕ್ಕಿ ಮೌಸ್, ಡೊನಾಲ್ಡ್ ಡಕ್, ಡೋರಮ್ಯಾನ್ ಮಾದರಿಯಲ್ಲಿ ಹೂವು ಮತ್ತು ಎಲೆಗಳಿಂದ ತಯಾರಿಸಲಾಗುವುದು. ಮಾವು, ಕಿತ್ತಳೆ, ಅನಾನಾಸ್ ಹಣ್ಣುಗಳು ಹಾಗೂ ದಪ್ಪ ಮೆಣಸಿನ ಕಾಯಿ ತರಕಾರಿಗಳಿಂದ ಆನೆ, ನವಿಲು, ಗ್ಭಿಟಾರ್, ತಬಲ ಇತ್ಯಾದಿಗಳ ಮಾದರಿಯ ಕಲಾಕೃತಿಗಳನ್ನು ನಿರ್ಮಿಸಲಾಗುವುದು. ಜಲಚರ ಮೀನುಗಳಾದ ಸ್ಟಾರ್‌ಫಿಷ್, ಆಕ್ಟೊಪಸ್ ಇತ್ಯಾದಿ ಕಲಾಕೃತಿಗಳನ್ನು ಹೂ, ಅಲಂಕಾರಿ ಎಲೆಗಳಿಂದ ನಿರ್ಮಿಸಲಾಗುವುದು. ತರಕಾರಿ, ಹಣ್ಣುಗಳಲ್ಲಿ ವಿವಿಧ ಆಕೃತಿಗಳಲ್ಲಿ ಕೆತ್ತನೆಯ ಕಲಾಕೃತಿಗಳನ್ನು ಮಾಡಲಾಗುವುದು, ವಿವಿಧ ಅಲಂಕಾರಿಕ ಗಿಡಗಳಾದ ಬೋನ್ಸಾಯ್ ಗಿಡಗಳ ಪ್ರದರ್ಶನ, ಇಕೆಬಾನೆ ಹೂವಿನ ಜೋಡನೆ ಹಾಗೂ ಕಾಕ್ ಟಸ್ ಗಳ ಜೋಡಣೆ ಹಾಗೂ ಪ್ರದರ್ಶನಗಳನ್ನು ಏರ್ಪಡಿಸಲಾಗುವುದು.

ವಿವಿಧ ಬೆಳೆಗಳ ಪ್ರದರ್ಶನ

ವಿವಿಧ ಬೆಳೆಗಳ ಪ್ರದರ್ಶನ

ರಾಜಾಸೀಟು ಮಂಟಪವನ್ನು ಹಾಗೂ ಮುಂಭಾಗದ ಮುಖ್ಯದ್ವಾರವನ್ನು ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗುತ್ತದೆ. ಗಾಂಧಿ ಮೈದಾನದಲ್ಲಿ ತೋಟಗಾರಿಕೆ ಇಲಾಖೆಯ ವಸ್ತು ಪ್ರದರ್ಶನದ ಮಳಿಗೆಯನ್ನು ಆಯೋಜಿಸಲಾಗಿದೆ. ರೈತರು ಬೆಳೆದಿರುವಂತಹ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಾಂಬಾರು ಬೆಳೆಗಳ ಪ್ರದರ್ಶಿಕೆಯನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಅತ್ಯುತ್ತಮ ಪ್ರದರ್ಶಿಕೆಗಳಿಗೆ ಬಹುಮಾನ ನೀಡಲಾಗುವುದು, ಆಸಕ್ತರು ಜನವರಿ 11 ರಂದು ಬೆಳಗ್ಗೆ 10 ಗಂಟೆಗೆ ಗಾಂಧಿ ಮೈದಾನದಲ್ಲಿ ಪ್ರದರ್ಶಿಕೆಗಳನ್ನು ತಂದು ಹೆಸರನ್ನು ನೋಂದಾಯಿಸಿ ಕೊಳ್ಳಬಹುದಾಗಿದೆ. 40 ವಸ್ತು ಪ್ರದರ್ಶನ ಮಳಿಗೆಗಳು ನಿರ್ಮಾಣವಾಗಲಿದೆ. ಆಹಾರ ಮೇಳ ಇರಲಿದೆ. ಹಾಗೆಯೇ ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ಒಳಗೊಂಡ ಮಾಹಿತಿ ಮಳಿಗೆ ವಾರ್ತಾ ಇಲಾಖೆಯಿಂದ ನಿರ್ಮಿಸಲಾಗುತ್ತದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ತೋಟಗಾರಿಕೆ ಇಲಾಖೆಗಳ ವಸ್ತು ಪ್ರದರ್ಶನ ಮಳಿಗೆ ನಿರ್ಮಾಣವಾಗಲಿದೆ. ಇನ್ನು ಮೂರು ಮಾರ್ಗದಲ್ಲಿ ಅಂದರೆ ಭಾಗಮಂಡಲ-ತಲಕಾವೇರಿ-ಚೇಲಾವರ ಜಲಪಾತ ಒಂದು ಮಾರ್ಗ, ದುಬಾರೆ-ನಿಸರ್ಗಧಾಮ ಮತ್ತೊಂದು ಮಾರ್ಗ ಮತ್ತು ಅಬ್ಬಿ ಜಲಪಾತ, ಮಾಂದಲ್ ಪಟ್ಟಿ ಮತ್ತು ರಾಜಾಸೀಟು ಮತ್ತೊಂದು ಮಾರ್ಗದಲ್ಲಿ ಬಸ್ ಸಂಚರಿಸಲಿದ್ದು, ಬೆಳಗ್ಗೆ 8.30 ಗಂಟೆಗೆ ಬಸ್ ಹೊರಡಲಿದೆ.430 ರೂ. ದರ ನಿಗದಿ ಮಾಡಲಾಗಿದೆ.

English summary
Kodagu Tourist Festival will be held from January 11 to 13. Three days festival will include exhibitions, flower show and cultural events.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X