ಕೊಡಗಿನ ವಿಶಿಷ್ಟ ಕ್ರೀಡೆ ‘ತೆಂಗೆಬೊಡಿ’ಗೆ ಹೊಸ ಮೆರಗು: ಏನಿದು? ಇಲ್ಲಿದೆ ವಿವರ
ಮಡಿಕೇರಿ, ಅಕ್ಟೋಬರ್ 19: ಆಧುನಿಕ ಕ್ರೀಡೆಗಳ ನಡುವೆಯೂ ಕೊಡಗಿನಲ್ಲಿಸಾಂಪ್ರದಾಯಿಕವಾದ ತೆಂಗಿನ ಕಾಯಿಗೆ ಗುಂಡು ಹೊಡೆಯುವ (ಕೊಡವಭಾಷೆಯಲ್ಲಿ ತೆಂಗೆಬೊಡಿ) ಕ್ರೀಡೆ ಜನಪ್ರಿಯವಾಗುತ್ತಿದೆ. ಹಿಂದೆ ಹಬ್ಬ ಹರಿದಿನಗಳಲ್ಲಿ ಮಾತ್ರ ನಡೆಯುತ್ತಿತ್ತಾದರೂ ಇತ್ತೀಚೆಗಿನ ದಿನಗಳಲ್ಲಿ ಸಂಘಟನೆಗಳು ಕ್ರೀಡಾಕೂಟವನ್ನು ಆಯೋಜಿಸಿ ಸ್ಪರ್ಧಿಗಳಿಗೆ ಅವಕಾಶ ಮಾಡಿಕೊಡುತ್ತಿದ್ದು ಆ ಮೂಲಕ ಶೂಟಿಂಗ್ನಲ್ಲಿ ಆಸಕ್ತಿಯಿರುವವರಿಗೆ ಪ್ರೋತ್ಸಾಹ ಕಲ್ಪಿಸುವ ಆಶಯ ಎಂದರೂ ತಪ್ಪಾಗುವುದಿಲ್ಲ.
ಹಾಗೆನೋಡಿದರೆ ಕೊಡಗಿನವರು ವೀರರು, ಶೂರರು, ಕ್ರೀಡಾಪ್ರೇಮಿಗಳು ಎನ್ನುವುದು ಇಲ್ಲಿ ನಡೆಯುವ ಹಬ್ಬಗಳಲ್ಲಿ, ಕ್ರೀಡಾಕೂಟಗಳಲ್ಲಿ ಕಾಣಸಿಗುತ್ತದೆ. ಜತೆಗೆ ಕೋವಿ ಹಿಡಿಯದ ಕೈಗಳೇ ಇಲ್ಲ ಎಂಬುದು ಕೂಡ ಅಷ್ಟೇ ಸತ್ಯ. ರಕ್ಷಣಾ ಪಡೆಗಳ ವಿವಿಧ ವಿಭಾಗಗಳಲ್ಲಿ ಇಲ್ಲಿನ ಯುವಕರು, ಯುವತಿಯರು ಕೆಲಸ ಮಾಡುತ್ತಿದ್ದರೆ, ಮಹಾನ್ ದಂಡನಾಯಕನಾಗಿ ಕೆಲಸ ಮಾಡಿದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ ಮೊದಲಾದವರು ಸೇರಿದಂತೆ ಅತ್ಯುನ್ನತ ಹುದ್ದೆಗಳನ್ನು ನಿರ್ವಹಿಸಿ ನಿವೃತ್ತರಾದವರು, ಹಾಲಿ ಹುದ್ದೆಯನ್ನು ನಿರ್ವಹಿಸುತ್ತಿರುವವರು ಇದ್ದಾರೆ.

ಕೋವಿಗೂ ಕೊಡಗಿನವರಿಗೂ ಅವಿನಾಭಾವ ಸಂಬಂಧ. ಇವತ್ತಿಗೂ ಹೆಚ್ಚಿನವರ ಮನೆಯಲ್ಲಿ ಕೋವಿಗಳಿವೆ. ಹುಟ್ಟು ಸಾವಿನಿಂದ ಹಿಡಿದು ಹಬ್ಬ ಹರಿದಿನಗಳಲ್ಲಿಯೂ ಕೋವಿಗಳನ್ನು ಬಳಸಲಾಗುತ್ತದೆ. ಜತೆಗೆ ಇದಕ್ಕೆ ಪೂಜೆಯೂ ನಡೆಯುತ್ತದೆ. ಹಿಂದಿನ ಕಾಲದಲ್ಲಿ ಮಗು ಹುಟ್ಟಿದರೆ ಒಂದು ಗುಂಡನ್ನು ಆಕಾಶಕ್ಕೆ ಹಾರಿಸಿ ಜನಕ್ಕೆ ಮಗುವಾಗಿರುವ ಸಂತಸವನ್ನು ಹಂಚಿಕೊಳ್ಳಲಾಗುತ್ತಿತ್ತು. ಕುಟುಂಬದಲ್ಲಿ ಯಾರಾದರೂ ಸಾವನ್ನಪ್ಪಿದರೆ ಜೋಡಿ ಗುಂಡನ್ನು ಹಾರಿಸುವ ಮೂಲಕ ಸಾವಿನ ಸುದ್ದಿಯನ್ನು ಸುತ್ತಮುತ್ತಲಿನ ಜನಕ್ಕೆ ಮುಟ್ಟಿಸಲಾಗುತ್ತಿತ್ತು. (ಇದು ಈಗಲೂ ಇದೆ.)
ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ
ಹಿಂದಿನ ಕಾಲದಲ್ಲಿ ಕೊಡಗಿನ ಹೆಚ್ಚಿನ ಭಾಗವು ದಟ್ಟ ಕಾಡಿನಿಂದ ಆವೃತವಾಗಿತ್ತು. ಹೀಗಾಗಿ ವನ್ಯ ಪ್ರಾಣಿಗಳೊಂದಿಗೆ ಹೋರಾಡಿ ಬೆಳೆಗಳನ್ನು ಮತ್ತು ಜಾನುವಾರುಗಳನ್ನು ರಕ್ಷಿಸಬೇಕಾಗಿತ್ತು. ಅವತ್ತಿನ ದಿನಗಳಲ್ಲಿ ಹುಲಿಯನ್ನು ಬೇಟೆಯಾಡಿ ಕೊಂದರೆ ಆತನನ್ನು ಹುಲಿಯೊಂದಿಗೆ ನಿಲ್ಲಿಸಿ ಮೆರವಣಿಗೆ ನಡೆಸಿ ಊರ ಮಂದಿಗೆ ಊಟ ಹಾಕಿಸಲಾಗುತ್ತಿತ್ತು. ಇದನ್ನು ನರಿ ಮಂಗಲ(ಹುಲಿ ಮದುವೆ) ಎಂದು ಕರೆಯಲಾಗುತ್ತಿತ್ತು. (ಈಗ ಇದನ್ನು ನಿಷೇಧಿಸಲಾಗಿದೆ).

ಇದಲ್ಲದೆ ಹಬ್ಬ ಹರಿದಿನಗಳಲ್ಲಿ ಕೂಡು ಬೇಟೆಗಳು ನಡೆಯುತ್ತಿದ್ದವು. ಈ ವೇಳೆ ಕುಟುಂಬದವರು ಊರಿನವರು ಒಟ್ಟಾಗಿ ಕಾಡಿಗೆ ತೆರಳಿ ಪ್ರಾಣಿಗಳನ್ನು ಬೇಟೆಯಾಡುತ್ತಿದ್ದರು. ಇದೆಲ್ಲವೂ ನಾಲ್ಕೈದು ದಶಕಗಳ ಹಿಂದಿನ ಮಾತು. ಈಗ ಬೇಟೆ ನಿಷಿದ್ಧವಾಗಿವೆ. ಹೀಗಾಗಿ ಕೋವಿಯ ಬಳಕೆ ಕಡಿಮೆಯಾಗುತ್ತಿದೆ. ಆದರೆ ಹಿಂದಿನ ಕಾಲದಿಂದಲೇ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಂತು ಹಬ್ಬದ ದಿನಗಳಲ್ಲಿ ಮತ್ತು ಊರ ದೇವಾಲಯಗಳಲ್ಲಿ ನಡೆಯುವ ವಾರ್ಷಿಕೋತ್ಸವದಂದು ನಡೆಯುತ್ತಲೇ ಬರುತ್ತಿದೆ.
ಈ ಸ್ಪರ್ಧೆಗಳಲ್ಲಿ ಪುರುಷರು ಮಾತ್ರವಲ್ಲದೆ, ಮಹಿಳೆಯರು ಕೂಡ ಕೋವಿ ಹಿಡಿದು ಗುರಿಯಿಟ್ಟು ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ತಮ್ಮ ಶಕ್ತಿ ಪ್ರದರ್ಶಿಸುತ್ತಾರೆ. ಇಲ್ಲಿ ಗೆದ್ದವರಿಗೆ ಬಹುಮಾನಗಳನ್ನು ನೀಡುವುದಲ್ಲದೆ, ಒಳ್ಳೆಯ ಗುರಿಕಾರ ಎಂಬ ಖ್ಯಾತಿಯೂ ಸಲ್ಲುತ್ತದೆ.

ಕೊಡಗಿನಲ್ಲಿ ಕೋವಿ ಬಳಸಲು ಅವಕಾಶ
ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ಕೂರ್ಗ್ ಬೈರೇಸ್ ಮತ್ತು ಜಮ್ಮಾ ವಿನಾಯಿತಿಯಂತೆ ಕೋವಿ ಬಳಸಲು ವಿಶೇಷ ಅವಕಾಶವನ್ನು ನೀಡಲಾಗಿದೆ. ಹಿಂದೆ ವನ್ಯಪ್ರಾಣಿಗಳಿಂದ ಪ್ರಾಣ-ಬೆಳೆಗಳ ರಕ್ಷಣೆಗೂ ಇದನ್ನು ಬಳಸಲಾಗುತ್ತಿತ್ತಾದರೂ ಈಗ ಕಾನೂನಿನ ನಿರ್ಬಂಧ ಹೇರಿದ್ದು ಬೇಟೆಯನ್ನು ನಿಷೇಧಿಸಲಾಗಿದೆ. ಹೀಗಾಗಿ ಕೋವಿ ಹೊಂದಿರುವವರು ಕ್ರೀಡಾಕೂಟಗಳ ಸಂದರ್ಭ ತೆಂಗಿನ ಕಾಯಿಗೆ ಗುಂಡು ಹೊಡೆದು ತಮ್ಮ ಗುರಿಯನ್ನು ಪರೀಕ್ಷಿಸುವುದರೊಂದಿಗೆ ಶೌರ್ಯ ಮೆರೆಯುತ್ತಾರೆ.
ಹಿಂದೆ ಕೈಲುಮುಹೂರ್ತ ಹಬ್ಬದ ಸಂದರ್ಭಗಳಲ್ಲಿ ಜಿಲ್ಲೆಯಲ್ಲಿ ತೆಂಗಿನ ಕಾಯಿಗೆ ಗುಂಡು ಹಾರಿಸುವ ಸ್ಪರ್ಧೆ ಮನೆ ಮನೆಗಳಲ್ಲಿ ನಡೆಯುತ್ತಿತ್ತು. ಅಷ್ಟೇ ಅಲ್ಲದೆ, ವಿವಿಧ ದೇವಾಲಯಗಳಲ್ಲಿ ನಡೆಯುತ್ತಿದ್ದ ಹಬ್ಬದಲ್ಲಿ ತೆಂಗಿನಕಾಯಿಗೆ ಗುಂಡು ಹಾರಿಸುವುದು ಸಂಪ್ರದಾಯವಾಗಿ ಬಂದಿದೆ. ಆದರೆ ತೆಂಗಿನ ಕಾಯಿಗೆ ಗುಂಡು ಹಾರಿಸುವ ಸ್ಪರ್ಧೆಗೆ ಒತ್ತು ನೀಡಿ ಅದನ್ನು ಜನಪ್ರಿಯಗೊಳಿಸುವ ಕಾರ್ಯವನ್ನು ಇದೀಗ ಮಾಡಲಾಗುತ್ತಿದೆ. ಆ ಮೂಲಕ ಮುಂದಿನ ದಿನಗಳಲ್ಲಿ ಇಲ್ಲಿನ ಯುವಕರನ್ನು ಶೂಟಿಂಗ್ ಸ್ಪರ್ಧೆಗೆ ತಯಾರಿ ಮಾಡುವ ಕೆಲಸವೂ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications