ಸಿದ್ದು ಹೇಳಿಕೆ ಕೊಡಗು ಕಾಂಗ್ರೆಸ್ಗೆ ಮಾರಕವಾಗುತ್ತಾ?
ಮಡಿಕೇರಿ, ಡಿಸೆಂಬರ್ 23: ಕೊಡವರು ಗೋಮಾಂಸ ಭಕ್ಷಿಸುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಕೊಡಗಿನಲ್ಲಿ ಆಕ್ರೋಶವನ್ನು ಸೃಷ್ಟಿ ಮಾಡಿದೆ. ಈಗಷ್ಟೆ ಸ್ವಲ್ಪ ಮಟ್ಟಿಗೆ ಕಾಂಗ್ರೆಸ್ ಕೊಡಗು ಜಿಲ್ಲೆಯಲ್ಲಿ ಚೇತರಿಕೆ ಕಂಡುಕೊಳ್ಳುತ್ತಿದೆ ಎನ್ನುವಾಗಲೇ, ಈ ವಿವಾದಾತ್ಮಕ ಹೇಳಿಕೆ ಪಕ್ಷದ ಮೇಲೆ ಪರಿಣಾಮ ಬೀರುವ ಎಲ್ಲ ಲಕ್ಷಣಗಳು ಕಂಡು ಬರತೊಡಗಿದೆ.
ಈಗಾಗಲೇ ಸಿದ್ದರಾಮಯ್ಯ ಅವರ ವಿರುದ್ಧ ಪಕ್ಷಾತೀತ ಪ್ರತಿಭಟನೆಗಳು ನಡೆದಿದ್ದು, ಕ್ಷಮೆಯಾಚಿಸುವಂತೆ ಹಲವು ಮುಖಂಡರು ಆಗ್ರಹಿಸಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರಿಗೆ ಇದೊಂದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಕೊಡಗಿನವರಿಗೆ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹಿಂದಿನಿಂದಲೂ ಇದೆ.

ಸಿದ್ದರಾಮಯ್ಯ ಅವರ ಮೇಲೆ ಆಕ್ರೋಶ
ಈ ಹಿಂದೆ ಟಿಪ್ಪು ಜಯಂತಿ ಆಚರಣೆ ಮಾಡಿದ ಸಂದರ್ಭ ಕೊಡಗಿನಲ್ಲಿ ಗಲಾಟೆಗಳು ನಡೆದು ಪ್ರಾಣ ಹಾನಿಯೂ ಸಂಭವಿಸಿತ್ತು. ಅವತ್ತಿನಿಂದಲೂ ಸಿದ್ದರಾಮಯ್ಯ ಅವರನ್ನು ಕೆಲವರು ವಿರೋಧಿಸುತ್ತಲೇ ಬರುತ್ತಿದ್ದಾರೆ. ಶಾಂತಿಯುತ ಕೊಡಗಿನಲ್ಲಿ ಸಿದ್ದರಾಮಯ್ಯ ಅವರು ಕೋಮುದಳ್ಳುರಿಗೆ ಕಾರಣರಾದರು ಎಂಬ ಕಪ್ಪು ಚುಕ್ಕೆ ಈಗಲೂ ಅವರ ಮೇಲಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕೊಡಗಿನಲ್ಲಿ ಕಳೆದ ಎರಡು ದಶಕಗಳಿಂದಲೂ ಕಾಂಗ್ರೆಸ್ಗೆ ಚೇತರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಜಿಲ್ಲೆಯಲ್ಲಿ ತಳಮಟ್ಟದಿಂದಲೂ ಬಿಜೆಪಿ ಗಟ್ಟಿಯಾಗಿ ಉಳಿದಿದೆ.

ತೆರೆಮರೆಗೆ ಸರಿದ ಹಿರಿಯ ನಾಯಕರು
ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಭದ್ರವಾಗಿ ನೆಲೆಯೂರಬೇಕಾದರೆ ತಳಮಟ್ಟದಿಂದಲೇ ಸಂಘಟನೆಯಾಗುವ ಅಗತ್ಯವಿದೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿರುವ ಕಾಂಗ್ರೆಸ್ ನಾಯಕರ ಪೈಕಿ ಗ್ರಾಮೀಣ ಮಟ್ಟಕ್ಕಿಳಿದು, ಸಂಘಟಿಸುವ ಶಕ್ತಿ ಹೊಂದಿದ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಸಂಘಟನಾ ಚಾತುರ್ಯತೆ ಹೊಂದಿದ್ದ ಹಿರಿಯ ನಾಯಕರು ತೆರೆಮರೆಗೆ ಸರಿದಿದ್ದಾರೆ. ಈಗಿರುವ ನಾಯಕರಲ್ಲಿ ಸಂಘಟನಾ ಶಕ್ತಿಯ ಕೊರತೆಯಿದೆ. ಜತೆಗೆ ಗುಂಪುಗಾರಿಕೆ, ಭಿನ್ನಾಭಿಪ್ರಾಯಗಳು ಪಕ್ಷದ ಸಂಘಟನೆಗೆ ಮಾರಕವಾಗಿದೆ.

ಸಂಘಟನೆ ಕೊರತೆ ಎದುರಿಸುತ್ತಿರುವ ಡಿಸಿಸಿ
ಈಗ ಪಕ್ಷದ ಸಾರಥ್ಯ ಹೊಂದಿರುವ ನಾಯಕರ ಪೈಕಿ ಹೆಚ್ಚಿನವರಿಗೆ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಚತುರತೆ ಇಲ್ಲದ ಕಾರಣದಿಂದಾಗಿ ಪಕ್ಷ ಸೊರಗುತ್ತಿದೆ ಎಂಬ ಆರೋಪವಿದೆ. ಕೆಪಿಸಿಸಿ ಸಾರಥ್ಯವನ್ನು ಡಿ.ಕೆ.ಶಿವಕುಮಾರ್ ವಹಿಸಿಕೊಂಡ ಬಳಿಕ ಸಂಘಟನೆ ವಿಚಾರದಲ್ಲಿ ಆಮೂಲಾಗ್ರ ಬದಲಾವಣೆಯಾಗುತ್ತದೆ. ಈ ವೇಳೆ ಕೊಡಗಿನಲ್ಲಿ ಪಕ್ಷದೊಳಗಿರುವ ನಾಯಕರ ಭಿನ್ನಾಭಿಪ್ರಾಯಕ್ಕೆ ತೆರೆ ಎಳೆಯುತ್ತಾರೆ ಎಂದು ಕಾರ್ಯಕರ್ತರು ನಂಬಿದ್ದರು. ಆದರೆ ಕೊಡಗಿನಲ್ಲಿ ಯಾವುದೇ ಬದಲಾವಣೆಗಳು ಆದಂತೆ ಕಾಣುತ್ತಿಲ್ಲ. ಹೀಗಾಗಿ ನಾಯಕರ ನಡುವೆ ಗೊಂದಲಗಳು ಮುಂದುವರೆದಿವೆ.
Recommended Video

ಪಕ್ಷದ ಮೇಲೆ ಪರಿಣಾಮ ಬೀರುತ್ತಾ?
ಈ ನಡುವೆ ಗ್ರಾ.ಪಂ ಚುನಾವಣೆಯ ಮೊದಲ ಹಂತವೂ ಮುಗಿದಿದೆ. ಈ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಈ ಚುನಾಣೆಯ ಫಲಿತಾಂಶ ಬಂದ ಬಳಿಕ ಕೊಡಗಿನಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಆಗಿದೆಯಾ ಎಂಬುದು ಗೊತ್ತಾಗಲಿದೆ. ಆದರೆ ಅದಕ್ಕೂ ಮೊದಲು ಸಿದ್ದರಾಮಯ್ಯ ಅವರ ಹೇಳಿಕೆ ಜಿಲ್ಲೆಯಲ್ಲಿ ಗೊಂದಲವನ್ನು ಸೃಷ್ಟಿಸಿದ್ದು, ಪಕ್ಷದ ಮುಖಂಡರಿಗೆ ಮುಜುಗರ ತಂದಿದ್ದಂತು ಸತ್ಯ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications