ಮಡಿಕೇರಿ: ಯುವಕನ ಸಲಿಂಗಿ ವಿವಾಹಕ್ಕೆ ಕೊಡವ ಮುಖಂಡರ ಆಕ್ರೋಶ
ಮಡಿಕೇರಿ, ಅಕ್ಟೋಬರ್ 8: ಈಗ ಎಲ್ಲೆಡೆ ಅಂತರ್ಜಾತಿ, ಅಂತರ್ ಧರ್ಮೀಯ ವಿವಾಹಗಳ ಜೊತೆಗೆ ಸಲಿಂಗಿಗಳ ವಿವಾಹ ನಡೆಯುವುದನ್ನು ಆಗಾಗ ಓದುತ್ತಿರುತ್ತೇವೆ. ಈ ನಡುವೆ ಇಂತಹದ್ದೇ ಮತ್ತೊಂದು ಸಲಿಂಗ ಜೋಡಿ ಅದ್ಧೂರಿಯಾಗಿ ಅದೂ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಆದರೆ ಈ ಮದುವೆಗೆ ಕೊಡವ ಜನಾಂಗದವರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಈ ಮದುವೆ ಜನಾಂಗವನ್ನು ಕೆರಳಿಸಿದ್ದು, ಕೊಡವ ಸಮಾಜದಿಂದಲೇ ಮದುಮಗನನ್ನು ಹೊರಗಿಡಲು ಸಜ್ಜಾಗಿದೆ. ಕೊಡಗು ಮೂಲದ ಶರತ್ ಪೊನ್ನಪ್ಪ ಎಂಬುವವರು ಸಂದೀಪ್ ದೋಸಾಂಜ್ ಎಂಬಾತನನ್ನು ಮದುವೆ ಆಗಿದ್ದಾನೆ. ವೈದ್ಯನಾಗಿರುವ ಶರತ್ ಪೊನ್ನಪ್ಪ ಅಮೇರಿಕಾಗೆ ತೆರಳಿ 20 ವರ್ಷ ಆಗುತ್ತಾ ಬಂದಿದೆ.

ಕೊಡವ ಸಂಪ್ರದಾಯದ ಶೈಲಿಯಲ್ಲಿ ಸಲಿಂಗ ಮದುವೆ
ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬಾತನ ಪರಿಚಯವಾಗಿದ್ದು, ಇಬ್ಬರಿಗೂ ಲವ್ ಆಗಿದೆ. ಪ್ರೀತಿ ಬೆಳೆದು ಕೊನೆಗೆ ಕಳೆದ ಸೆ.26 ರಂದು ಮದುವೆಯನ್ನೂ ಮಾಡಿಕೊಂಡಿದ್ದಾರೆ. ಅದೂ ಕೊಡವ ಸಂಪ್ರದಾಯದ ಶೈಲಿಯಲ್ಲಿ ಸಲಿಂಗ ಮದುವೆ ಸಮಾರಂಭದಲ್ಲಿ ಮದು ಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ವಿಡಿಯೋ, ಫೋಟೋ ವೈರಲ್ ಆಗಿದೆ.

ಕೊಡವ ಜನಾಂಗಕ್ಕೆ ಅವಮಾನ
ಕೊಡವರ ಆಕ್ರೋಶಕ್ಕೆ ಮುಖ್ಯ ಕಾರಣ ಅಗಿರುವುದು ಕೊಡವ ಸಂಪ್ರದಾಯಿಕ ಉಡುಪು ತೊಟ್ಟು ಮದುವೆ ಆಗಿರುವುದರ ಬಗ್ಗೆ. ತಲೆಗೆ ಪೇಟ ಧರಿಸಿದ್ದ ಸಲಿಂಗಿ ಮದುಮಕ್ಕಳು, ಕೊಡವರ ಸಾಂಪ್ರದಾಯಿಕ ಉಡುಗೆಯನ್ನು ಅರೆಬರೆಯಾಗಿ ತೊಟ್ಟಿದ್ದರು. ಇದರಿಂದ ಕೊಡವ ಜನಾಂಗಕ್ಕೆ ಅವಮಾನವಾಗಿದ್ದು, ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ.

ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆ
ಈ ಬಗ್ಗೆ ಅಮೆರಿಕ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಇನ್ನು ಕಂಡಕಂಡಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಬಳಸುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್ ದೇವಯ್ಯ ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.
Recommended Video

ನಮ್ಮ ಸಂಸ್ಕೃತಿಯ ಅವಮಾನವೆಂದ ಕೊಡವ ಸಮಾಜ
ಶರತ್ ಪೊನ್ನಪ್ಪ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 20 ವರ್ಷಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್ ಇಂಜಿನಿಯರ್ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬಂದು ಮೈಸೂರಿನಲ್ಲಿ ನೆಲೆಸಿದ್ದಾರೆ.
ಈ ಕುರಿತು ಮಾತನಾಡಿದ ಯುನೈಟೆಡ್ ಕೊಡವ ಅರ್ಗನೈಸೇಷನ್ ಅಧ್ಯಕ್ಷ ಮಂಜು ಚಿಣ್ಣಪ್ಪ ಅವರು ಪ್ರತಿಕ್ರಿಯಿಸಿ, ಸಲಿಂಗಿ ಮದುವೆಯಲ್ಲಿ ಕೊಡವ ಸಂಪ್ರದಾಯ ಉಡುಪು ಧರಿಸಿ ನಮ್ಮ ಸಂಸ್ಕೃತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.
-
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications