ಮಡಿಕೇರಿ: ಯುವಕನ ಸಲಿಂಗಿ ವಿವಾಹಕ್ಕೆ ಕೊಡವ ಮುಖಂಡರ ಆಕ್ರೋಶ
ಮಡಿಕೇರಿ, ಅಕ್ಟೋಬರ್ 8: ಈಗ ಎಲ್ಲೆಡೆ ಅಂತರ್ಜಾತಿ, ಅಂತರ್ ಧರ್ಮೀಯ ವಿವಾಹಗಳ ಜೊತೆಗೆ ಸಲಿಂಗಿಗಳ ವಿವಾಹ ನಡೆಯುವುದನ್ನು ಆಗಾಗ ಓದುತ್ತಿರುತ್ತೇವೆ. ಈ ನಡುವೆ ಇಂತಹದ್ದೇ ಮತ್ತೊಂದು ಸಲಿಂಗ ಜೋಡಿ ಅದ್ಧೂರಿಯಾಗಿ ಅದೂ ಕೊಡವ ಸಾಂಪ್ರದಾಯಿಕ ಶೈಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಆದರೆ ಈ ಮದುವೆಗೆ ಕೊಡವ ಜನಾಂಗದವರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಈ ಮದುವೆ ಜನಾಂಗವನ್ನು ಕೆರಳಿಸಿದ್ದು, ಕೊಡವ ಸಮಾಜದಿಂದಲೇ ಮದುಮಗನನ್ನು ಹೊರಗಿಡಲು ಸಜ್ಜಾಗಿದೆ. ಕೊಡಗು ಮೂಲದ ಶರತ್ ಪೊನ್ನಪ್ಪ ಎಂಬುವವರು ಸಂದೀಪ್ ದೋಸಾಂಜ್ ಎಂಬಾತನನ್ನು ಮದುವೆ ಆಗಿದ್ದಾನೆ. ವೈದ್ಯನಾಗಿರುವ ಶರತ್ ಪೊನ್ನಪ್ಪ ಅಮೇರಿಕಾಗೆ ತೆರಳಿ 20 ವರ್ಷ ಆಗುತ್ತಾ ಬಂದಿದೆ.

ಕೊಡವ ಸಂಪ್ರದಾಯದ ಶೈಲಿಯಲ್ಲಿ ಸಲಿಂಗ ಮದುವೆ
ಅಲ್ಲಿ ಉತ್ತರ ಭಾರತ ಮೂಲದ ಸಂದೀಪ್ ದೋಸಾಂಜ್ ಎಂಬಾತನ ಪರಿಚಯವಾಗಿದ್ದು, ಇಬ್ಬರಿಗೂ ಲವ್ ಆಗಿದೆ. ಪ್ರೀತಿ ಬೆಳೆದು ಕೊನೆಗೆ ಕಳೆದ ಸೆ.26 ರಂದು ಮದುವೆಯನ್ನೂ ಮಾಡಿಕೊಂಡಿದ್ದಾರೆ. ಅದೂ ಕೊಡವ ಸಂಪ್ರದಾಯದ ಶೈಲಿಯಲ್ಲಿ ಸಲಿಂಗ ಮದುವೆ ಸಮಾರಂಭದಲ್ಲಿ ಮದು ಮಕ್ಕಳ ಸ್ನೇಹಿತರು ಭಾಗಿಯಾಗಿ ಶುಭ ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇವರ ಮದುವೆ ವಿಡಿಯೋ, ಫೋಟೋ ವೈರಲ್ ಆಗಿದೆ.

ಕೊಡವ ಜನಾಂಗಕ್ಕೆ ಅವಮಾನ
ಕೊಡವರ ಆಕ್ರೋಶಕ್ಕೆ ಮುಖ್ಯ ಕಾರಣ ಅಗಿರುವುದು ಕೊಡವ ಸಂಪ್ರದಾಯಿಕ ಉಡುಪು ತೊಟ್ಟು ಮದುವೆ ಆಗಿರುವುದರ ಬಗ್ಗೆ. ತಲೆಗೆ ಪೇಟ ಧರಿಸಿದ್ದ ಸಲಿಂಗಿ ಮದುಮಕ್ಕಳು, ಕೊಡವರ ಸಾಂಪ್ರದಾಯಿಕ ಉಡುಗೆಯನ್ನು ಅರೆಬರೆಯಾಗಿ ತೊಟ್ಟಿದ್ದರು. ಇದರಿಂದ ಕೊಡವ ಜನಾಂಗಕ್ಕೆ ಅವಮಾನವಾಗಿದ್ದು, ಕೊಡವರ ಇತಿಹಾಸದಲ್ಲಿ ಇಂಥ ಘಟನೆ ನಡೆದಿರಲಿಲ್ಲ.

ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆ
ಈ ಬಗ್ಗೆ ಅಮೆರಿಕ ಕೊಡವ ಕೂಟಕ್ಕೆ ಪತ್ರ ಬರೆದು ವಿಚಾರ ಮಾಡಿ ಸ್ಪಷ್ಟನೆ ನೀಡುವಂತೆ ಮಡಿಕೇರಿ ಕೊಡವ ಸಮಾಜ ಕೇಳಿಕೊಂಡಿದೆ. ಇನ್ನು ಕಂಡಕಂಡಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಬಳಸುವುದಕ್ಕೆ ಕೊಡವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೊಡವ ಜನಾಂಗದಿಂದಲೇ ಆತನನ್ನು ಹೊರಗಿಡುವಂತೆ ಕೊಡವ ಸಮಾಜದ ಒಕ್ಕೂಟಕ್ಕೆ ಮನವಿ ಮಾಡಲಾಗುವುದು ಎಂದು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಕೆ.ಎಸ್ ದೇವಯ್ಯ ಈ ಬಗ್ಗೆ ಮಡಿಕೇರಿ ಕೊಡವ ಸಮಾಜದಿಂದ ತುರ್ತು ಸಭೆಯನ್ನೂ ನಡೆಸಲಾಗಿದೆ.
Recommended Video

ನಮ್ಮ ಸಂಸ್ಕೃತಿಯ ಅವಮಾನವೆಂದ ಕೊಡವ ಸಮಾಜ
ಶರತ್ ಪೊನ್ನಪ್ಪ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ವಿದ್ಯಾಭ್ಯಾಸ ಮಾಡಿದ್ದು, ಉನ್ನತ ಶಿಕ್ಷಣಕ್ಕಾಗಿ 20 ವರ್ಷಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಅವರ ತಂದೆ ಜಯಕುಮಾರ್ ಇಂಜಿನಿಯರ್ ಆಗಿ, ತಾಯಿ ನಳಿನಿ ವೈದ್ಯರಾಗಿ ದುಬೈನಲ್ಲಿ 30 ವರ್ಷ ಕಾರ್ಯ ನಿರ್ವಹಿಸಿದ್ದಾರೆ. ಬಳಿಕ ಅಲ್ಲಿಂದ ಬಂದು ಮೈಸೂರಿನಲ್ಲಿ ನೆಲೆಸಿದ್ದಾರೆ.
ಈ ಕುರಿತು ಮಾತನಾಡಿದ ಯುನೈಟೆಡ್ ಕೊಡವ ಅರ್ಗನೈಸೇಷನ್ ಅಧ್ಯಕ್ಷ ಮಂಜು ಚಿಣ್ಣಪ್ಪ ಅವರು ಪ್ರತಿಕ್ರಿಯಿಸಿ, ಸಲಿಂಗಿ ಮದುವೆಯಲ್ಲಿ ಕೊಡವ ಸಂಪ್ರದಾಯ ಉಡುಪು ಧರಿಸಿ ನಮ್ಮ ಸಂಸ್ಕೃತಿಯನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications