ಕೊಡಗು ಜಿಲ್ಲೆಯ 5ನೇ ತಾಲ್ಲೂಕಾಗಿ ಕುಶಾಲನಗರ ಅಸ್ತಿತ್ವಕ್ಕೆ
ಮಡಿಕೇರಿ, ಜುಲೈ 6: ಕುಶಾಲನಗರವನ್ನು ಕೇಂದ್ರವಾಗಿಸಿಕೊಂಡ ನೂತನ ತಾಲ್ಲೂಕನ್ನು ಕಂದಾಯ ಸಚಿವ ಆರ್.ಅಶೋಕ್ ಉದ್ಘಾಟಿಸುವ ಮೂಲಕ, ಕೊಡಗು ಜಿಲ್ಲೆಯ ಐದನೇ ತಾಲ್ಲೂಕು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿತು.
ತಾಲ್ಲೂಕು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಕಂದಾಯ ಸಚಿವರು, "ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲ್ಲೂಕಿಗೆ ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲ್ಲೂಕು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ,'' ಎಂದರು.
"ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್- 1 ತಹಶೀಲ್ದಾರರು ಸೇರಿದಂತೆ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ 50 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ. ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತಹಂತವಾಗಿ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು,'' ಎಂದು ಸಚಿವ ಆರ್. ಅಶೋಕ್ ಹೇಳಿದರು.

132 ಕೋಟಿ ಮಂಜೂರು
"ಕೊಡಗು ಜಿಲ್ಲೆಗೆ 2020- 21ನೇ ಸಾಲಿನಲ್ಲಿ ವಿಪತ್ತು ನಿರ್ವಹಣೆಗಾಗಿ ರಾಜ್ಯ ಸರ್ಕಾರ ಒಟ್ಟು 132 ಕೋಟಿ ಹಣ ಮಂಜೂರು ಮಾಡಿದೆ. ಪ್ರವಾಹ ಪೀಡಿತರಿಗೆ 82 ಕೋಟಿ, ಬೆಳೆ ಹಾನಿಗೆ 30 ಕೋಟಿ, ಕೋವಿಡ್ ನಿರ್ವಹಣೆಗೆ 10 ಕೋಟಿ ಸೇರಿದಂತೆ ಒಟ್ಟು 132 ಕೋಟಿಯಲ್ಲಿ ಇದೀಗ ಜಿಲ್ಲೆಯಲ್ಲಿ 106 ಕೋಟಿ ವಿಪತ್ತು ನಿಧಿ ಇರುವುದಾಗಿ,'' ಮಾಹಿತಿ ಒದಗಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, "ಕುಶಾಲನಗರ- ಸುಂಟಿಕೊಪ್ಪ ಹೋಬಳಿ ಅಧಿಕ ಜನಸಂಖ್ಯೆ ಹೊಂದಿತ್ತು. ಈಗ ತಾಲೂಕು ಆಗಿ ಘೋಷಣೆಯಾಗಿದ್ದು ಸಂತಸದ ವಿಷಯ ಎಂದರಲ್ಲದೇ, ಎರಡು ಹೋಬಳಿಗಳಲ್ಲಿ ಅತೀ ಹೆಚ್ಚಿನ ಪ್ರಮಾಣದ ವ್ಯಾಪಾರ ವಹಿವಾಟು ನಡೆಯುತ್ತಿದೆ. ನೂತನ ತಾಲ್ಲೂಕು ಮೂಲಕ ಜನರಿಗೆ ಉತ್ತಮ ಆಡಳಿತ ನೀಡಲು ಸಾದ್ಯವಾಗುತ್ತದೆ,'' ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕೊಡಗು- ಮೈಸೂರು ಲೋಕಸಭಾ ಕ್ಷೇತ್ರ ಸಂಸದ ಪ್ರತಾಪ್ ಸಿಂಹ ಮಾತನಾಡಿ, "ಅತೀ ಶೀಘ್ರದಲ್ಲಿ ಬೆಳವಣಿಗೆ ಕಂಡ ಕುಶಾಲನಗರ ಅಭಿವೃದ್ಧಿಯತ್ತ ಸರ್ಕಾರ ಚಿಂತನೆ ಹರಿಸಿ ನೂತನ ತಾಲೂಕು ಘೋಷಣೆ ಮಾಡಿದೆ. ಕಂದಾಯ ಸಚಿವ ಆರ್. ಅಶೋಕ್, ಸ್ಥಳೀಯ ಶಾಸಕ ಅಪ್ಪಚ್ಚು ರಂಜನ್ ಶ್ರಮ ಇದರಲ್ಲಿ ಅಡಗಿದೆ,'' ಎಂದರು.
Recommended Video
ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಮಾತನಾಡಿ, "ಕುಶಾಲನಗರವನ್ನು ಕಾವೇರಿ ತಾಲ್ಲೂಕು ಆಗಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಅದರಂತೆ ತಾಲ್ಲೂಕು ಅಸ್ತಿತ್ವಕ್ಕೆ ಬಂದಿರುವುದು ಸಂತಸ ತಂದಿದೆ,'' ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications