Kushalnagar Municipality : ಪುರಸಭೆಯಾದ ಕುಶಾಲನಗರ ಪಟ್ಟಣ ಪಂಚಾಯಿತಿ
ಮಡಿಕೇರಿ, ಡಿಸೆಂಬರ್ 13; ಕರ್ನಾಟಕ ಸರ್ಕಾರ ಕೊಡಗು ಜಿಲ್ಲೆಯ ಕುಶಾಲನಗರ ಜನರ ಬಹು ದಿನದ ಕನಸನ್ನು ನನಸು ಮಾಡಿದೆ. ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಆದೇಶ ಹೊರಡಿಸಿದೆ.
ಶಾಸಕ ಅಪ್ಪಚ್ಚು ರಂಜನ್ ಈ ಕುರಿತು ಫೇಸ್ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ. ಶಾಸಕರು ಮುಖ್ಯ ಮಂತ್ರಿಯವರಿಗೆ ಹಾಗೂ ಪೌರಾಡಳಿತ ಸಚಿವರಿಗೆ ಕುಶಾಲನಗರ ಜನತೆಯ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಕುಶಾಲನಗರ ಜನತೆಯ ಬಹು ದಿನದ ಕನಸಾಗಿದ್ದ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವಂತೆ ಇದ್ದ ಮನವಿಯನ್ನು ನಾನು ಸನ್ಮಾನ್ಯ ಮುಖ್ಯ ಮಂತ್ರಿಯವರಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಮತ್ತು ಪೌರಾಡಳಿತ ಸಚಿವರಾದ ಶ್ರೀ ಎಂಟಿಬಿ ನಾಗರಾಜ್ ಅವರಿಗೆ ಮನವಿ ಮಾಡಿದ್ದೆ ಎಂದು ಶಾಸಕರು ಹೇಳಿದ್ದಾರೆ.

ಇಂದು ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿ ಅಧಿಕೃತ ಆದೇಶವಾಗಿರುತ್ತದೆ. ಇದಕ್ಕಾಗಿ ಮುಖ್ಯ ಮಂತ್ರಿಯವರಿಗೆ ಹಾಗೂ ಪೌರಾಡಳಿತ ಸಚಿವರಿಗೆ ಕುಶಾಲನಗರ ಜನತೆಯ ಪರವಾಗಿ ಧನ್ಯವಾದವನ್ನು ಅರ್ಪಿಸುತ್ತೇನೆ ಎಂದು ಪೋಸ್ಟ್ ಹಾಕಿದ್ದಾರೆ.
ಹಲವು ವರ್ಷಗಳ ಹೋರಾಟ; ಕುಶಾಲನಗರ ತಾಲೂಕು ಕೇಂದ್ರವಾದ ಬಳಿಕ ಸ್ಥಳೀಯ ಆಡಳಿತವನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. 2021ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಭೆಯಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ನಿರ್ಣಯ ಅಂಗೀಕರಿಸಲಾಗಿತ್ತು.
ಕೊಡಗು ಜಿಲ್ಲೆಯ ಪ್ರಮುಖ ವಾಣಿಜ್ಯ ಕೇಂದ್ರ ಕುಶಾಲನಗರ. ಪಟ್ಟಣ ಪಂಚಾಯಿತಿಯಾಗಿದ್ದ ಕುಶಾಲನಗರಕ್ಕೆ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಸೇರಿಸಿ ಪಟ್ಟಣ ಪಂಚಾಯಿತಿ ಮಾಡಲು ಚಾಲನೆ ನೀಡಲಾಯಿತು. ಗ್ರಾಮ ಪಂಚಾಯಿತಿಗಳಿಂದಲೂ ಎನ್ಒಸಿ ಪಡೆದು ಕಡತವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಯಿತು.
ಕುಶಾಲನಗರ ಪಟ್ಟಣ ಪಂಚಾಯಿತಿಯ ಹಿಂದಿನ ಆಡಳಿತ ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ನಿರ್ಣಯ ಕಡತ ಸಿದ್ಧಪಡಿಸಿತು. ಇದರ ಜೊತೆಗೆ ಹೋರಾಟಗಳು ಸಹ ನಡೆದವು. ಸರ್ಕಾರ ಸಹ ಬೇಡಿಕೆಗೆ ಒಪ್ಪಿಗೆ ನೀಡಿತು.
2020ರ ಡಿಸೆಂಬರ್ 19ರಂದು ಪೌರಾಡಳಿತ ನಿರ್ದೇಶನಾಲಯದ ಜಂಟಿ ಆಯುಕ್ತರು ಪಟ್ಟಣ ಪಂಚಾಯಿತಿಗೆ ಪತ್ರ ಬರೆದಿದ್ದರು. ಯಾವ ಯಾವ ಪ್ರದೇಶಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಬಹುದೋ ಆ ಗ್ರಾಮ ಪಂಚಾಯಿತಿಗಳು ಕೈಗೊಂಡ ನಿರ್ಣಯದ ಪ್ರತಿಯನ್ನು ಹಾಜರುಪಡಿಸಿ ಎಂದು ಸೂಚಿಸಿದ್ದರು.
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂದಿ ಬಸವನಹಳ್ಳಿ, ಮುಳ್ಳುಸೋಗೆ ಮತ್ತು ಗುಡ್ಡೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಪುರಸಭೆಗೆ ಸೇರಿಸಲು ಒಪ್ಪಿಗೆ ನೀಡಲಾಗಿತ್ತು. 2021ರ ಫೆಬ್ರವರಿ 2ರಂದು ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಲಾಗಿತ್ತು.
ಗ್ರಾಮಗಳನ್ನು ಪುರಸಭೆ ವ್ಯಾಪ್ತಿಗೆ ಸೇರಿಸಲು ಯಾವುದೇ ಆಕ್ಷೇಪಣೆ ಇಲ್ಲ ಎಂದು ಗ್ರಾಮ ಪಂಚಾಯಿತಿಗಳ ಮೂಲಕ ನಿರಕ್ಷೇಪಣ ಪತ್ರವನ್ನು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳಿಗೆ ಸಲ್ಲಿಕೆ ಮಾಡಲಾಗಿತ್ತು.
2011ರ ಜನಗಣತಿ ಪ್ರಕಾರ ಕುಶಾಲನಗರ ಜನಸಂಖ್ಯೆ 15,326. ಮುಳ್ಳುಸೋಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 9,189 ಜನರಿದ್ದಾರೆ. ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಮಾದಾಪಟ್ಟಣದ ವ್ಯಾಪ್ತಿಯಲ್ಲಿ 2861 ಜನರಿದ್ದಾರೆ. ಆದ್ದರಿಂದ ಎಲ್ಲವೂ ಒಟ್ಟಾಗಿ 27,376 ಜನಸಂಖ್ಯೆ ಆಗಲಿದೆ ಎಂದು ಲೆಕ್ಕಾಚಾರ ಹಾಕಲಾಗಿತ್ತು.
ಎಲ್ಲಾ ಹಂತದ ಪ್ರಕ್ರಿಯೆ, ಹೋರಾಟಗಳು, ಮನವಿಗಳ ಬಳಿಕ ಸರ್ಕಾರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯಿಗೆ ಚಾಲನೆ ನೀಡಲಾಯಿತು. ಅಂತಿಮವಾಗಿ ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪುರಸಭೆಯಾಗಿ ಮಾಡಲು ಒಪ್ಪಿಗೆ ಕೊಡಲಾಗಿದೆ.
-
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ -
Bengaluru Sambar: ಬೆಂಗಳೂರು ಹೋಟೆಲ್ಗಳಲ್ಲಿ ಸಾಂಬಾರ್ ಸ್ವೀಟ್ ಯಾಕೆ, ಇಲ್ಲಿದೆ ಕನ್ನಡಿಗರ ಯಕ್ಷ ಪ್ರಶ್ನೆಗೆ ಉತ್ತರ -
Dhurandhar 2: ಧುರಂಧರ್ 2 ಸಿನಿಮಾ ನೋಡಿ; ರಿವ್ಯೂ ಕೊಟ್ಟ ವಿರಾಟ್ ಕೊಹ್ಲಿ - ಅನುಷ್ಕಾ ಶರ್ಮಾ -
Manju Warrier: ನಟಿ ಮಂಜು ವಾರಿಯರ್ಗೆ ವೇದಿಕೆಯಲ್ಲೇ ಮುತ್ತಿಟ್ಟ ಹುಚ್ಚು ಅಭಿಮಾನಿ, ವೈರಲ್ ವಿಡಿಯೋ ಇಲ್ಲಿದೆ -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು












Click it and Unblock the Notifications