ಮಹಾಮಳೆಗೆ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ
ಮಡಿಕೇರಿ, ಜುಲೈ 7: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.
Recommended Video
ಕಪ್ಪು
ಪಟ್ಟಿ
ಕಟ್ಟಿಕೊಂಡು
ಬೀದಿಗೆ
ಬಂದ
ಡಾಕ್ಟರ್
ಮತ್ತು
ನರ್ಸ್
ಗಳು
|
Oneindia
Kannada
ರಸ್ತೆ ತುಂಬಾ ಮಣ್ಣಿನ ರಾಶಿ ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕೈಕಂಬದ ಹತ್ತಿರ ಗುಡ್ಡಕುಸಿತ: ಮಣ್ಣಿನಡಿ ಸಿಲುಕಿದ್ದ ಇಬ್ಬರು ಮಕ್ಕಳ ಸಾವು
ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಮುಂಬರುವ ದಿನಗಳಲ್ಲಿ ಅತಿಯಾದ ಮಳೆಯಾದರೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದೆನ್ನುವ ಭಯವಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೇಶ ಮುಂಡನ ಸ್ಥಳ, ನಾಗನ ಕಟ್ಟೆಯ ಮೆಟ್ಟಿಲಿನವರೆಗೆ ನೀರು ಬಂದಿದ್ದು, ಜನರು ನದಿಗೆ ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.
Comments
English summary
Heavy rain caused landslide in bhagamandala talakaveri road in Madikeri district
Story first published: Tuesday, July 7, 2020, 21:16 [IST]