ತಲಕಾವೇರಿ ಗುಡ್ಡ ಕುಸಿತ ಪ್ರಕರಣ: ಅರ್ಚಕ ನಾರಾಯಣ್ ಆಚಾರ್ ಮೃತದೇಹ ಪತ್ತೆ

ಮಡಿಕೇರಿ, ಆಗಸ್ಟ್ 11: ಸತತ ಐದು ದಿನಗಳ ಎನ್‌.ಡಿ.ಆರ್.ಎಫ್ ಕಾರ್ಯಚರಣೆಯ ಬಳಿಕ ತಲಕಾವೇರಿ ದೇವಾಲಯದ ಪ್ರಧಾನ ಅರ್ಚಕ ನಾರಾಯಣ ಆಚಾರ್ಯ ಅವರ ಮೃತದೇಹ ಇಂದು ಮಧ್ಯಾಹ್ನ ಪತ್ತೆಯಾಗಿದೆ‌.

Recommended Video

      Manmohan Singh : ದೇಶದ ಆರ್ಥಿಕ ಆರೋಗ್ಯಕ್ಕೆ ನೀಡಿದ ಮೂರು ಸೂತ್ರ | Oneindia Kannada

      ಎರಡು ದಿನಗಳ‌ ಹಿಂದೆ ಅವರ ಅಣ್ಣ ಆನಂದ ತೀರ್ಥ ಅವರ ಮೃತದೇಹ ಪತ್ತೆ ಮಾಡಿ ಹೊರತೆಗೆಯಲಾಗಿತ್ತು. ಇದಕ್ಕೂ ಮೊದಲು ಈ ಮೃತದೇಹವನ್ನು ಆಚಾರ್ಯರ ಪತ್ನಿ ಶಾಂತಾ ಅವರ ಮೃತದೇಹ ಎಂದು ಶಂಕಿಸಲಾಗಿತ್ತು. ಆದರೆ ಎನ್‌.ಡಿ.ಆರ್‌.ಎಫ್‌ ತಂಡ ಅದು ಆಚಾರ್ಯ ಅವರ ಮೃತದೇಹ ಎಂದು ಸ್ಪಷ್ಟಪಡಿಸಿದೆ. ಇಂದು ಬೆಳಿಗ್ಗೆ ಆಚಾರ್ಯರ ಎರಡು ವಾಹನಗಳು ಕೂಡಾ ಪತ್ತೆಯಾಗಿದ್ದವು.

      ಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೇ ಎನ್‌.ಡಿ.ಆರ್‌.ಎಫ್‌ ತಂಡ ಭೂ ಸಮಾಧಿ ಆಗಿರುವ ಇನ್ನೂ ಮೂವರಿಗಾಗಿ ಶೋಧ ಕಾರ್ಯ ಮುಂದುವರೆಸಿದೆ. ಮೃತರ ಇಬ್ಬರು ಪುತ್ರಿಯರು ಆಸ್ಟ್ರೇಲಿಯಾದಿಂದ ಆಗಮಿಸಿದ್ದು, ಸದ್ಯ ಮಡಿಕೇರಿಯಲ್ಲೇ ಇದ್ದಾರೆ.

       Landslide In Talacauvery: Priest Narayanachar Dead Body Found After 5 Days

      ಈಗಾಗಲೇ ಘಟನಾ ಸ್ಥಳದಲ್ಲಿ ಜೆಸಿಬಿ ಹಾಗೂ ಹಿಟಾಚಿಗಳು ತೀವ್ರ ಶೋಧ ನಡೆಸುತ್ತಿದ್ದು, ಒಟ್ಟು 60 ಸಿಬ್ಬಂದಿ ಉಳಿದ ಮೂವರ ಪತ್ತೆಗಾಗಿ ಶೋಧ ಮಾಡುತ್ತಿದ್ದಾರೆ. ಅನಂದ್ ತೀರ್ಥ ಅವರ ಮೃತದೇಹವನ್ನು ಇಂದು ಅಂತ್ಯಕ್ರಿಯೆ ಮಾಡುವ ಸಾಧ್ಯತೆಗಳಿವೆ.

      ಕಳೆದ ನಾಲ್ಕು ದಿನಗಳಿಂದ ಎನ್‌ಡಿಆರ್ಎಫ್, ಎಸ್‌ಡಿಆರ್ಎಫ್, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಳಗ್ಗೆಯಿಂದಲೇ ನಾಪತ್ತೆಯಾದವರಿಗೆ ತೀವ್ರ ಹುಡುಕಾಟವನ್ನು ಆರಂಭಿಸಿದ್ದಾರೆ. ಈ ವೇಳೆ ನಾರಾಯಣ ಆಚಾರ್ ಬಳಸುತ್ತಿದ್ದ ರೆನಾಲ್ಟ್ ಡಸ್ಟರ್ ಹಾಗೂ ಮಾರುತಿ ಓಮ್ನಿ ಕಾರುಗಳು ಪತ್ತೆಯಾಗಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+