ಮಡಿಕೇರಿ: ಡಿ.21 ರಂದು ವಿರಾಜಪೇಟೆಯಲ್ಲಿ ಸಾಹಿತ್ಯ ಸಂಭ್ರಮ
ಮಡಿಕೇರಿ, ಡಿಸೆಂಬರ್ 7: ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತು ಹಾಗೂ ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ಸಾಹಿತ್ಯ ಸಂಭ್ರಮ ಹಾಗೂ ಲೇಖಕರಾದ ಐ.ಮಾ.ಮುತ್ತಣ್ಣ, ಬಿ.ಡಿ.ಗಣಪತಿ ಅವರ ಜನ್ಮ ಶತಮಾನೋತ್ಸವದ ನೆನಪು ಕಾರ್ಯಕ್ರಮವು ಡಿಸೆಂಬರ್ 21 ರಂದು ವಿರಾಜಪೇಟೆಯಲ್ಲಿ ನಡೆಯಲಿದೆ.
ಕಾಲೇಜು ಮತ್ತು ಸಾರ್ವಜನಿಕ ವಿಭಾಗದಲ್ಲಿ ಭಾಷಣ ಸ್ಪರ್ಧೆ, ಜಿಲ್ಲೆಯ ಕವಿಗಳಿಗೆ ಸ್ವರಚಿತ ಗೀತೆಗಳ ಗಾಯನಗೋಷ್ಠಿ ಹಾಗೂ ಹಿರಿಯ ಕವಿಗಳಾದ ದಿವಂಗತ ಐ.ಮಾ.ಮುತ್ತಣ್ಣ ಹಾಗೂ ಬಿ.ಡಿ.ಗಣಪತಿ ಅವರ ಜನ್ಮ ಶತಮಾನೋತ್ಸವದ ನೆನಪು ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾಲೇಜು ಮತ್ತು ಸಾರ್ವಜನಿಕ ವಿಭಾಗದಲ್ಲಿ ನಡೆಯುವ ಭಾಷಣ ಸ್ಪರ್ಧೆ ಜಿಲ್ಲಾ ಮಟ್ಟದಾಗಿದ್ದು, ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕವಿ, ಕಲಾವಿದರ ಕೊಡುಗೆ ಎಂಬ ವಿಷಯದಲ್ಲಿ ಸ್ಪರ್ಧೆ ನಡೆಯಲಿದೆ.

ಕೊಡಗು ಜಿಲ್ಲೆಯ ಆಸಕ್ತರಿಗೆ ಅವಕಾಶ ನೀಡಲಾಗುವುದು. 3 ನಿಮಿಷಗಳ ಗರಿಷ್ಠ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಬೇಕು. ಸ್ವರಚಿತ ಗೀತೆಗಳ ಗಾಯನಗೋಷ್ಠಿಯಲ್ಲಿ ಕೊಡಗಿನ ಕವಿಗಳಿಗೆ ಅವಕಾಶ ನೀಡಲಾಗುವುದು.
ಮೊದಲು ಬಂದ 2 ಕವಿಗಳಿಗೆ ಅವಕಾಶ ಸೀಮಿತವಾಗಿರುತ್ತದೆ. ಕವಿಗಳು ತಮ್ಮ ಸ್ವಂತ ರಚನೆಯ ಗೀತೆಗಳನ್ನು ರಾಗ ಸಂಯೋಜನೆಯೊಂದಿಗೆ ಪ್ರಸ್ತುತ ಪಡಿಸಬಹುದಾಗಿದೆ. ಭಾಷಣ ಸ್ಪರ್ಧೆ ಮತ್ತು ಗೀತ ಗಾಯನಗೋಷ್ಠಿಗೆ ಹೆಸರನ್ನು ನೋಂದಾಯಿಸಲು ಡಿಸೆಂಬರ್ 18 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳು ಹಾಗೂ ನೋಂದಾವಣೆಗೆ ಮುಲ್ಲೇಂಗಡ ಮಧೋಶ್ ಪೂವಯ್ಯ ಮೊ.9480556667, ಎಂ.ಕೆ.ನಳಿನಾಕ್ಷಿ ಮೊ. 9611018818 ನ್ನು ಸಂಪರ್ಕಿಸಬಹುದು ಎಂದು ವಿರಾಜಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರು ತಿಳಿಸಿದ್ದಾರೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications