ದಲಿತ ಕೇರಿಯಲ್ಲಿ ಬಿಜೆಪಿಯಿಂದ ರಕ್ಷಾ ಬಂಧನ
ಮಡಿಕೇರಿ, ಆಗಸ್ಟ್ 8: ವಿಧಾನಸಭಾ ಚುನಾವಣೆಗೆ ಇನ್ನು ಒಂಬತ್ತು ತಿಂಗಳು ಇರುವಂತೆಯೇ ಬಿಜೆಪಿ ಎಲ್ಲ ರೀತಿಯಲ್ಲೂ ಜನಮನವೊಲಿಸುವ ಕಾರ್ಯವನ್ನು ಮಾಡುತ್ತಾ ಸಾಗುತ್ತಿದೆ.
ಜನರಿಗೆ ಮತ್ತಷ್ಟು ಹತ್ತಿರವಾಗುವ ಸಲುವಾಗಿಯೇ ದಲಿತರ ಮನೆಗೆ, ದಲಿತರ ಕೇರಿಗೆ ಹೋಗಿ ಮನೆಗಳಲ್ಲಿ ಉಪಹಾರ ಸೇವಿಸುವ ಮೂಲಕ ಬಿಜೆಪಿ ಸುದ್ದಿ ಮಾಡಿದ್ದಲ್ಲದೆ, ರಾಜಕೀಯವಾಗಿ ದಲಿತರನ್ನು ತಮ್ಮ ಪಕ್ಷದತ್ತ ಸೆಳೆದುಕೊಳ್ಳುವ ತಂತ್ರ ರೂಪಿಸಲಾಗಿತ್ತು.

ಇದೀಗ ಬಿಜೆಪಿಯ ಕಲೆ ಮತ್ತು ಸಾಂಸ್ಕೃಕ ಪ್ರಕೋಷ್ಟದ ಜಿಲ್ಲಾ ಘಟಕದ ವತಿಯಿಂದ ಮಡಿಕೇರಿ ಬಳಿಯ ಕರ್ಣಂಗೇರಿ ಗ್ರಾಮದ ದಲಿತರ ಕೇರಿಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಗಿದೆ. ಆ ಮೂಲಕ ಸಮಾನತೆ ಸಾರುವ ಕೆಲಸ ಮಾಡಿದೆಯಲ್ಲದೆ, ರಾಜಕೀಯವಾಗಿಯೂ ಅದರಿಂದ ಲಾಭ ಪಡೆಯುವ ಕೆಲಸ ಮಾಡಿದೆ.

ದಲಿತ ಕೇರಿಯಲ್ಲಿ ರಕ್ಷ ಬಂಧನ ಆಚರಣೆ ಕುರಿತಂತೆ ಮಾತನಾಡಿದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಯಮುನಾ ಚಂಗಪ್ಪ ರಕ್ಷಾಬಂಧನ ಎನ್ನುವುದು ಸ್ನೇಹ, ಸಹೋದರತೆ, ಸಹಕಾರ ರಕ್ಷಣೆಯ ಸಂಕೇತವಾಗಿದೆ. ಎಂತಹ ವೈರಿಗಳನ್ನೂ ಮಿತ್ರರನ್ನಾಗಿಸುವ ಶಕ್ತಿ ಈ ರಕ್ಷ ಬಂಧನಕ್ಕಿದೆ ಎಂದರು.
ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಭಾರತಿ ರಮೇಶ್ ಮಾತನಾಡಿ, ರಕ್ಷಾ ಬಂಧನ ಕೇವಲ ಸಹೋದರಿಯನ್ನು ರಕ್ಷಿಸಲು ಮಾತ್ರ ಸೀಮಿತವಾಗದೆ ಮಾತೃಭೂಮಿ, ಪರಿಸರ, ಜಲವನ್ನು ಸಂರಕ್ಷಿಸುವ ಅಸ್ತ್ರವಾಗಬೇಕೆಂದರು.

ಈ ವೇಳೆ ಬಿಜೆಪಿಯ ಎಸ್.ಸಿ ಘಟಕದ ಜಿಲ್ಲಾಧ್ಯಕ್ಷರಾದ ಎಸ್.ಸಿ.ಸತೀಶ್ ಸೇರಿದಂತೆ ಪಕ್ಷದ ಪ್ರಮುಖರು ಇದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications