ಮತ್ತೊಂದು ಮಳೆಗಾಲ ಬಂದರೂ ಹೀಗೇ ಇದೆಯಲ್ಲ ಮಡಿಕೇರಿ ಅರಮನೆ
ಮಡಿಕೇರಿ, ಮಾರ್ಚ್ 02: ಸುಣ್ಣಬಣ್ಣವಿಲ್ಲದೆ ಕಳೆಗುಂದಿದ ಅರಮನೆ, ಇಂದೋ, ನಾಳೆಯೋ ಬೀಳಲು ಸಜ್ಜಾಗಿರುವ ಮೇಲ್ಚಾವಣಿ, ಮಳೆಗೆ ಬಿದ್ದು ನುಚ್ಚು ನೂರಾಗಿರುವ ಹೆಂಚುಗಳು, ಬೀಗ ಹಾಕಿರುವ ಬಾಗಿಲುಗಳು... ಇದು ಮಡಿಕೇರಿಯ ಐತಿಹಾಸಿಕ ಕೋಟೆ ಆವರಣದಲ್ಲಿರುವ ಅರಮನೆಯ ಇಂದಿನ ಸ್ಥಿತಿ.
Recommended Video
ಸರ್ಕಾರಿ ಕಚೇರಿಗಳಿದ್ದ ಕಾರಣ ಅರಮನೆಯನ್ನು ದುರಸ್ತಿ ಮಾಡುವ ಕಾರ್ಯಕ್ಕೆ ಪುರಾತತ್ವ ಇಲಾಖೆ ಮುಂದಾಗಿರಲಿಲ್ಲ. ಈ ನಡುವೆ ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಎಲ್ಲಾ ಸರಕಾರಿ ಕಚೇರಿಗಳನ್ನು ಸ್ಥಳಾಂತರಿಸಲಾಗಿದೆ. ಇದೀಗ ಕಚೇರಿಗಳು ಖಾಲಿಯಾದ ನಂತರ ಅರಮನೆ ಮತ್ತಷ್ಟು ಪಾಳು ಬಿದ್ದಿದ್ದು, ಪ್ರವಾಸಿಗರ ನಿರಾಶೆಗೆ ಕಾರಣವಾಗಿದೆ.
ಕೋಟೆ ಆವರಣ ಪುಂಡ ಪೋಕರಿಗಳ ತಾಣವಾಗಿ ಪರಿವರ್ತನೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ. ಆದರೆ, ಕೇವಲ ಕೋಟೆ ಕಾಯಲು ಸಿಬ್ಬಂದಿ ನಿಯೋಜಿಸಿರುವ ಪುರಾತತ್ವ ಇಲಾಖೆ ಅರಮನೆಯ ಅಭಿವೃದ್ಧಿಗೆ ಮಾತ್ರ ಮನಸ್ಸು ಮಾಡಿಲ್ಲ. ಸರ್ಕಾರಿ ಕಚೇರಿಗಳ ತೆರವಿಗೆ ತೋರಿದಷ್ಟು ಉತ್ಸಾಹ ಐತಿಹಾಸಿಕ ಆಸ್ತಿಯನ್ನು ಉಳಿಸಿಕೊಳ್ಳುವುದರಲ್ಲಿ ತೋರುತ್ತಿಲ್ಲ ಎನ್ನುವ ಅಸಮಾಧಾನ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಕೆಲವು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿದ ದಕ್ಷ ಜಿಲ್ಲಾಧಿಕಾರಿಗಳು ಕೋಟೆ ಆವರಣದ ಅಭಿವೃದ್ಧಿ ಮತ್ತು ಆಕರ್ಷಕ ಪ್ರವಾಸಿತಾಣವನ್ನಾಗಿ ಪರಿವರ್ತಿಸುವ ಬಗ್ಗೆ ಯೋಜನೆಗಳನ್ನು ರೂಪಿಸಿದ್ದರು. ಆದರೆ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯ ಹಿನ್ನೆಲೆ ಮಹತ್ವಾಕಾಂಕ್ಷೆಯ ಯಾವುದೇ ಯೋಜನೆಗಳು ಸಾಕಾರಗೊಂಡಿಲ್ಲ. ಪುರಾತತ್ವ ಇಲಾಖೆ ಸುಮಾರು 53 ಲಕ್ಷ ರೂಪಾಯಿ ವೆಚ್ಚದಲ್ಲಿ ಕೋಟೆ ಆವರಣ ಮತ್ತು ಅರಮನೆಯ ದುರಸ್ತಿ ಕಾರ್ಯಕ್ಕೆ ಯೋಜನೆಯನ್ನು ಸಿದ್ಧಪಡಿಸಿ ಹಲವು ತಿಂಗಳುಗಳೇ ಕಳೆದಿವೆ. ಆದರೆ ಅಭಿವೃದ್ಧಿ ಕಾರ್ಯವನ್ನು ಇನ್ನೂ ಕೂಡ ಆರಂಭಿಸಿಲ್ಲ.

ಕಳೆದ ಎರಡು ವರ್ಷಗಳ ಕಾಲ ಸುರಿದ ಧಾರಾಕಾರ ಮಳೆಗೆ ಐತಿಹಾಸಿಕ ಅರಮನೆಗೆ ಸಾಕಷ್ಟು ಹಾನಿಯಾಗಿತ್ತು. ಕೋಟೆ ಹಳೇ ವಿಧಾನ ಸಭಾಂಗಣದ ಬೆಲೆ ಬಾಳುವ ಮರಮುಟ್ಟುಗಳು ಸೇರಿದಂತೆ ಇಡೀ ಕಟ್ಟಡವೇ ಶಿಥಿಲಗೊಂಡು ಆತಂಕವನ್ನು ಸೃಷ್ಟಿಸಿತ್ತು. ಇದೀಗ ಮತ್ತೊಂದು ಮಳೆಗಾಲಕ್ಕೆ ಎರಡು ತಿಂಗಳುಗಳಷ್ಟೇ ಬಾಕಿ ಉಳಿದಿದ್ದು, ಈ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವುದು ಅಸಾಧ್ಯವಾಗಿರುವುದರಿಂದ ಅರಮನೆ ಕಟ್ಟಡಕ್ಕೆ ಮತ್ತಷ್ಟು ಹಾನಿಯಾಗುವ ಸಾಧ್ಯತೆಯಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications