ಮಡಿಕೇರಿ ದಸರಾ ದಿನ ವ್ಯಕ್ತಿಯನ್ನು ಕೊಲೆಗೈದಿದ್ದ ಹಂತಕರ ಬಂಧನ
ಮಡಿಕೇರಿ, ಅಕ್ಟೋಬರ್ 5: ಮಡಿಕೇರಿ ದಸರಾ ದಿನ ರಾತ್ರಿ ವೇಳೆ ಗಾಂಜಾ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯನ್ನು ಕೊಲೆಗೈದ ಮೂವರು ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಗಣಪತಿ ಬೀದಿಯ ನಿವಾಸಿ ಮೊಬೈಲ್ ಟೆಕ್ನೀಷಿಯನ್ ಅಬ್ದುಲ್ ರೋಷನ್ ರೆಹಮಾನ್(32), ಮಹದೇವಪೇಟೆಯ ನಿವಾಸಿ ಕಾರು ಚಾಲಕ ಮೊಹಮ್ಮದ್ ರಶೀದ್(34) ಮತ್ತು ಮಖಾನ್ ಗಲ್ಲಿ ನಿವಾಸಿ ಆಟೋ ಚಾಲಕ ನಜೀರ್ (28) ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ.

ದಸರಾ ದಿನ ಅಂದರೆ ಸೆಪ್ಟೆಂಬರ್ 30ರ ರಾತ್ರಿ ನಗರದ ಹೊರವಲಯದ ರಾಜರಾಜೇಶ್ವರಿ ನಗರ ನಿವಾಸಿ ಕಾರ್ಮಿಕ ಮೂರ್ತಿ ಹಾಗೂ ಚಂದ್ರಮ್ಮ ದಂಪತಿ ಪುತ್ರ ಚಂದ್ರಶೇಖರ್ (27) ಎಂಬಾತನ್ನು ಈ ಮೂವರು ಕೊಲೆಗೈದಿದ್ದರು. ಕೊಲೆಗೀಡಾದ ಯುವಕ ಹೋಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದನು. ಅಲ್ಲದೆ ಆತ ಮತ್ತು ಹಂತಕರು ಸ್ನೇಹಿತರಾಗಿದ್ದು, ಚಂದ್ರಶೇಖರ್ನಿಂದ ಗಾಂಜಾವನ್ನು ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.
ರೋಷನ್ನ ಸ್ನೇಹಿತನಾಗಿದ್ದ ಚಂದ್ರಶೇಖರ್ ಕೆಲವೊಮ್ಮೆ ಜಟಾಪಟಿಗೆ ಇಳಿದು ಬಿಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಚಂದ್ರಶೇಖರ್ ರೋಷನ್ ತಾಯಿಯನ್ನೇ ಅಶ್ಲೀಲ ಭಾಷೆಗಳಿಂದ ಬೈಯ್ಯುತ್ತಿದ್ದ. ಇದರಿಂದ ಆಕ್ರೋಶಗೊಂಡಿದ್ದ ರೋಷನ್ ಚಂದ್ರಶೇಖರ್ನನ್ನು ಮುಗಿಸಲು ಹೊಂಚು ಹಾಕಿದ್ದನು.
ದಸರಾ ದಿನ ಜನ ಜಂಗುಳಿಯಲ್ಲಿ ಕೊಲೆಗೈದರೆ ಯಾರಿಗೂ ತಿಳಿಯುವುದಿಲ್ಲ ಎಂದು ಆಲೋಚಿಸಿದ ರೋಷನ್ ತನ್ನ ಗೆಳೆಯರಾದ ಮೊಹಮ್ಮದ್ ರಶೀದ್ ಮತ್ತು ನಜೀರ್ ಜೊತೆ ಸೇರಿ ಸ್ಕೆಚ್ ಸಿದ್ದಪಡಿಸಿದ್ದ.
ದಸರಾ ದಿನ ರಾತ್ರಿ ನಗರದ ಕಾಲೇಜು ರಸ್ತೆಯಲ್ಲಿ ಚಂದ್ರಶೇಖರ್ ಮೇಲೆ ಹಲ್ಲೆ ನಡೆಸಿ ಬಳಿಕ ಕೆಲ ಹೊತ್ತಿನಲ್ಲಿ ಕಾರ್ಪೊರೇಷನ್ ಬ್ಯಾಂಕ್ ಬಳಿ ಮತ್ತೆ ಹಲ್ಲೆಗೆ ಮುಂದಾಗಿದ್ದರು. ಈ ವೇಳೆ ಕೆಲವರು ಆತನನ್ನು ಹಲ್ಲೆಕೋರರಿಂದ ರಕ್ಷಿಸಿ ಕಳುಹಿಸಿಕೊಟ್ಟಿದ್ದರು.
ಅದಾದ ಬಳಿಕ ಆತನನ್ನು ಹಿಂಬಾಲಿಸಿದ ಹಂತಕರು ಅಕ್ಟೋಬರ್ 1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮಹದೇವಪೇಟೆ ಕನ್ನಿಕಾಪರಮೇಶ್ವರಿ ದೇವಾಲಯ ಎದುರು ಚಂದ್ರಶೇಖರ್ ಎಡಕಿವಿ ಹಿಂಭಾಗಕ್ಕೆ ಮಾರಕಾಸ್ತ್ರದಿಂದ ಹೊಡೆದಿದ್ದರು. ಇದರಿಂದ ಗಂಭೀರ ಗಾಯಗೊಂಡಿದ್ದ ಆತ ರಕ್ತದ ಮಡುವಿನಲ್ಲಿ ಬಿದ್ದಿದ್ದನು.
ಈತನ ಸಂಬಂಧಿ ಎಸ್.ಎಸ್. ಮೋಹನ್ ಹಾಗೂ ಕುಟುಂಬ ಅದೇ ಮಾರ್ಗದಲ್ಲಿ ದಸರಾ ನೋಡಲು ಬಂದಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಚಂದ್ರಶೇಖರ್ನನ್ನು ಕಂಡು ಪೊಲೀಸ್ ವಾಹನದಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದರು
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರಲ್ಲದೆ, ಅ.4ರಂದು ಬೆಳಗ್ಗೆ 5.30 ಗಂಟೆಗೆ ಕುಶಾಲನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಅಬ್ದುಲ್ ರೋಷನ್ ರೆಹಮಾನ್ ಇರುವ ಬಗ್ಗೆ ಮಾಹಿತಿ ಪಡೆದು ಬಂಧಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications