ಮಡಿಕೇರಿಯಲ್ಲಿ ಟಿಪ್ಪು ಜಯಂತಿಗೆ ಪೊಲೀಸ್ ಸರ್ಪಗಾವಲು
ಮಡಿಕೇರಿ, ನವೆಂಬರ್ 10: ಕೊಡಗಿನಲ್ಲಿ ಬಿಗಿ ಪೊಲೀಸ್ ಸರ್ಪಗಾವಲಿನಲ್ಲಿ ಮಡಿಕೇರಿ ಕೋಟೆಯೊಳಗಿನ ಅರಮನೆಯ ಹಳೇ ವಿಧಾನ ಸಭಾಂಗಣದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು, ಹೊರಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದು ಅರಮನೆಯ ಕಿಟಕಿ, ಬಾಗಿಲುಗಳ ಗಾಜುಗಳಿಗೆ ಹಾನಿಯಾಗಬಾರದು ಎಂಬ ಕಾರಣಕ್ಕೆ ಹಲಗೆಗಳನ್ನು ಮುಚ್ಚಲಾಗಿದೆ. ಒಳಗೆ ಯಾವುದೇ ಕಾರಣಕ್ಕೂ ಪ್ರತಿಭಟನಾಕಾರರು ನುಸುಳದಂತೆ ಬಂದೋಬಸ್ತ್ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆಗಳು ನಡೆಯದಂತೆಯೂ ಬಿಗಿ ಬಂದೋಬಸ್ತ್ ಮಾಡಿದ್ದು, ಮಡಿಕೇರಿಯಲ್ಲೀಗ ಎಲ್ಲಿ ನೋಡಿದರೂ ಗನ್, ಲಾಠಿ ಹಿಡಿದು ನಿಂತ ಪೊಲೀಸರೇ ಕಂಡು ಬರುತ್ತಿದ್ದಾರೆ. ಬುಧವಾರದಿಂದಲೇ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಪಥಸಂಚಲ ನಡೆಸಿದ್ದಾರೆ. ಕಳೆದ ವರ್ಷದ ಅಹಿತಕರ ಘಟನೆ ಬಳಿಕದ ಪರಿಸ್ಥಿತಿಯ ಅರಿವಿರುವುದರಿಂದ ಹೊರಗಿನಿಂದ ಪ್ರವಾಸಿಗರು ಕೊಡಗಿನತ್ತ ಬಂದಿಲ್ಲ.
ಜತೆಗೆ ಜನಸಾಮಾನ್ಯರು ಕೂಡ ಮಡಿಕೇರಿಯತ್ತ ಧಾವಿಸದ ಕಾರಣ ಸ್ವಯಂ ಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಗುರುವಾರ ಕೂಡ ಮಡಿಕೇರಿಯತ್ತ ತೆರಳುವ ಪ್ರಯತ್ನ ಮಾಡುತ್ತಿಲ್ಲ. ಜತೆಗೆ ಸ್ವಯಂಘೋಷಿತ ಬಂದ್ ಗೆ ಟಿಪ್ಪು ಜಯಂತಿ ವಿರೋಧಿ ಸಮಿತಿ ಕರೆ ನೀಡಿರುವ ಹಿನ್ನೆಲೆಯಲ್ಲಿ ಅಂಗಡಿ ತೆರೆಯದೆ ಮಾಲೀಕರು ತೆಪ್ಪಗಾಗಿದ್ದಾರೆ. ವಾಹನ ಸಂಚಾರವೂ ವಿರಳವಾಗಿದೆ.

ಪೊಲೀಸ್ ವಾಹನಗಳು ಸೈರನ್ ಮಾಡಿಕೊಂಡು ನಗರದ ಬೀದಿಗಳಲ್ಲಿ ಸಾಗುತ್ತಿವೆ. ಜನತೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ಅರಿವು ಇರುವ ಕಾರಣ ಹೊರಗಿನಿಂದ ಜನರೇ ಬರುತ್ತಿಲ್ಲ. ಹೀಗಾಗಿ ಬಸ್ ಗಳು ಕೂಡ ಖಾಲಿ ಖಾಲಿಯಾಗಿ ಸಂಚರಿಸುತ್ತಿವೆ.
ಬಿಗಿಭದ್ರತೆಯಲ್ಲಿ ಆಚರಣೆ
ಟಿಪ್ಪು ಜಯಂತಿಯನ್ನು ಜಿಲ್ಲಾಡಳಿತ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಆಚರಿಸುತ್ತಿರುವುದರಿಂದ ಕೋಟೆಗೆ ಪ್ರವೇಶಿಸುವ ಎಲ್ಲ ಮುಖ್ಯ ದ್ವಾರಗಳನ್ನು ಮುಚ್ಚುವುದರೊಂದಿಗೆ ಪೊಲೀಸರ ಸರ್ಪಗಾವಲನ್ನು ನಿಯೋಜಿಸಲಾಗಿದೆ. ನಗರ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ಕೋಟೆಯನ್ನು ಪ್ರವೇಶಿಸುವ ಮಹಾದ್ವಾರವನ್ನು ಅಥವಾ ಕೋಟೆ ಶ್ರೀ ಗಣಪತಿ ದೇವಾಲಯದ ಬಳಿಯ ದ್ವಾರವನ್ನು ಮರಮುಟ್ಟುಗಳಿಂದ ಮುಚ್ಚಲಾಗಿದೆ.
ಅಲ್ಲದೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೋಟೆಯನ್ನು ಪ್ರವೇಶಿಸುವ ಮುಖ್ಯದ್ವಾರ ಹೊರತು ಪಡಿಸಿ ಉಳಿದ ಎಲ್ಲ ದ್ವಾರಗಳನ್ನು ಮುಚ್ಚಲಾಗಿದ್ದು, ಅಲ್ಲಿ ಬಂದೂಕು ಹಾಗೂ ಲಾಠಿ ಹಿಡಿದ ಪೊಲೀಸರನ್ನು ನಿಯೋಜಿಸಲಾಗಿದೆ. ಆಹ್ವಾನಿತರು ಮತ್ತು ಅಧಿಕಾರಿ ಸಿಬ್ಬಂದಿ ಹೊರತು ಪಡಿಸಿ ಇತರರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಪುರಾತತ್ವ ಇಲಾಖೆ ಸಿಬ್ಬಂದಿಯಿಂದ ಅಡ್ಡಿ
ಕೋಟೆ ಕಟ್ಟಡದ ಕಿಟಕಿ, ಬಾಗಿಲುಗಳಿಗೆ ಜಿಲ್ಲಾಡಳಿತದಿಂದ ಮರದ ಹಲಗೆಗಳನ್ನು ಅಳವಡಿಸುವ ಕರ್ತವ್ಯಕ್ಕೆ ಪ್ರಾಚೀನ ಪುರಾತತ್ವ ಇಲಾಖೆಯ ಸಿಬ್ಬಂದಿಗಳು ಬುಧವಾರ ಅಡ್ಡಿಪಡಿಸಿದರು.
ಈ ಬಗ್ಗೆ ಜಿಲ್ಲಾಧಿಕಾರಿಯ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಮೈಸೂರಿನಲ್ಲಿರುವ ಪುರಾತತ್ವ ಇಲಾಖೆ ಸಂಬಂಧಪಟ್ಟ ಮೇಲಧಿಕಾರಿಗಳೊಂದಿಗೆ ಪ್ರಸ್ತಾಪಿಸಿ, ತಾತ್ಕಾಲಿಕವಾಗಿ ಮರದ ಹಲಗೆಗಳನ್ನು ಅಳವಡಿಸಲಾಗುವುದು. ನಂತರ ಮರುದಿನವೇ ಅವುಗಳನ್ನು ತೆರವುಗೊಳಿಸುವ ಭರವಸೆ ನೀಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications