ಮಡಿಕೇರಿಯಲ್ಲಾಯ್ತು ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಮಗಳ ಮದುವೆ
ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ- ಕುಂತಿ ದಂಪತಿ ಪುತ್ರಿ ಪ್ರಜ್ಞಾ, ಬೆಂಗಳೂರಿನ ಚೆಟ್ಟಿಮಾಡ ಪ್ರಭಾ ಮತ್ತು ದಿ. ಕಾರ್ಯಪ್ಪ ಅವರ ಪುತ್ರ ವೈಭವ್ ಮದುವೆ ಜನವರಿ 29ರಂದು ಮಡಿಕೇರಿಯಲ್ಲಿ ಆಗಿದೆ
ಮಡಿಕೇರಿ, ಜನವರಿ 30: ಮಾಜಿ ಸ್ಪೀಕರ್, ವಿರಾಜಪೇಟೆ ಕ್ಷೇತ್ರದ ಹಾಲಿ ಶಾಸಕರಾದ ಕೊಂಬಾರನ ಜಿ.ಬೋಪಯ್ಯ ಹಾಗೂ ಕುಂತಿ ದಂಪತಿ ಪುತ್ರಿ ಪ್ರಜ್ಞಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಚೆಟ್ಟಿಮಾಡ ಪ್ರಭಾ ಮತ್ತು ದಿ. ಕಾರ್ಯಪ್ಪ ಅವರ ಪುತ್ರ ವೈಭವ್ ಅವರೊಂದಿಗೆ ಜನವರಿ 29ರಂದು ಮಡಿಕೇರಿಯ ಕ್ರಿಸ್ಟಲ್ ಹಾಲ್ ನಲ್ಲಿ ಸಂಪ್ರದಾಯಬದ್ಧವಾಗಿ ವಿಜೃಂಭಣೆಯಿಂದ ವಿವಾಹ ಮಹೋತ್ಸವ ನಡೆಯಿತು.
ವಿವಾಹ ಮಹೋತ್ಸವದಲ್ಲಿ ಗಣ್ಯಾತಿಗಣ್ಯರು ಪಾಲ್ಗೊಳ್ಳುವುದರೊಂದಿಗೆ ನೂತನ ವಧು-ವರರಿಗೆ ಶುಭ ಹಾರೈಸಿದರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಅಧ್ಯಕ್ಷ ಡಿ.ಎಚ್.ಶಂಕರ್ ಮೂರ್ತಿ, ಶಾಸಕ ಅಪ್ಪಚ್ಚು ರಂಜನ್, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ಮಾಜಿ ಸಚಿವ, ಚಿತ್ರ ನಟ ಅಂಬರೀಶ್,[ನೂರು ಬಗೆ ಖಾದ್ಯ, 20 ಸಾವಿರ ಅತಿಥಿಗಳು: ಕೇರಳದಲ್ಲಿ ಮದುವೆ ವೈಭೋಗ]

ಮಾಜಿ ಸಚಿವರಾದ ಸಿ.ಟಿ.ರವಿ, ವಿ.ಸೋಮಣ್ಣ, ಎಂ.ಸಿ.ನಾಣಯ್ಯ, ಬಿ.ಎ.ಜೀವಿಜಯ, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಎಂಎಲ್ ಸಿಗಳಾದ ಸುನಿಲ್ ಸುಬ್ರಮಣಿ, ಚಿಕ್ಕಮಗಳೂರು ಎಂ.ಎಲ್.ಸಿ ಪ್ರಾಣೇಶ್, ಮಾಜಿ ಎಂಎಲ್.ಸಿ ಅರುಣ್ ಮಾಚಯ್ಯ, ಕೆಪಿಎಸ್ ಸಿಯ ಶ್ಯಾಮ್ ಭಟ್ ಸೇರಿದಂತೆ ಹಲವಾರು ರಾಜಕಾರಣಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications