ಕೊಡಗಿನಲ್ಲಿ ಅಸುರಕ್ಷಿತ ಆಹಾರ ಮಾರಾಟ: ಕೂಡಲೇ ಕ್ರಮಕ್ಕೆ ಸೂಚನೆ
ಕೊಡಗು, ನವೆಂಬರ್ 06: ಸಾರ್ವಜನಿಕರ ದೂರು ಮತ್ತು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಗಳ ಆಧಾರದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಕ್ರಮದ ಅನುಷ್ಠಾನಕ್ಕೆ ಕೊಡಗು ಜಿಲ್ಲೆ ಹಾಗೂ ಮಡಿಕೇರಿ ಅಧಿಕಾರಿಗಳೊಂದಿಗೆ ವಿಧಾನಸೌಧ ಕಚೇರಿಯಲ್ಲಿ ತುರ್ತು ಸಭೆ ನಡೆಸಲಾಗಿದೆ.
ಕೊಡಗು ಜಿಲ್ಲೆ ಹಾಗೂ ಕೇರಳ ಜಿಲ್ಲೆ ಗಡಿ ಭಾಗವಾದ ಕುಟ್ಟ, ಮಾಕುಟ್ಟ ಮತ್ತು ಪೆರುಂಬಾಡಿ ವ್ಯಾಪ್ತಿಯಲ್ಲಿ ಕೇರಳದ ಆಹಾರ ಪದಾರ್ಥಗಳು ಸರಬರಾಜುವಾಗುತ್ತಿದ್ದು. ಆಹಾರ ಪದಾರ್ಥಗಳಲ್ಲಿ ತಯಾರಿಕಾ ದಿನಾಂಕ ಹಾಗೂ ತಯಾರಿಕೆ ಮಾಡುವವರ ವಿವರ ಆಹಾರ ಪದಾರ್ಥಗಳಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಸೇರಿಸಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ 90 ಆಹಾರ ಪದಾರ್ಥಗಳನ್ನು ವಿಶ್ಲೇಷಣಿಗಾಗಿ (IADFAC) ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಪ್ರಯೋಗಾಲದ ವರದಿಗಳಲ್ಲಿ 31 ಆಹಾರ ಮಾದರಿಗಳು ಅಸುರಕ್ಷಿತವೆಂದು, 4 ಆಹಾರ ಮಾದರಿಯಲ್ಲಿ ಕಡಿಮೆ ಗುಣಮಟ್ಟವಿದೆ ಎಂದು ದೃಢವಾಗಿರುತ್ತದೆ ಎಂದು ಅಧಿಕಾರಿಗಳು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ರವರಿಗೆ ವಿವರಿಸಿದರು.
ಇದು ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ ಎಂದ ಶಾಸಕರಾದ ಎ.ಎಸ್ ಪೊನ್ನಣ್ಣ ಕೂಡಲೇ ಅಸುರಕ್ಷಿತವಾದ ಆಹಾರ ಪದಾರ್ಥಗಳನ್ನು ನಿಷೇಧಿಸಿ, ಹಾಗೂ ಅಂತಹ ಆಹಾರ ಪದಾರ್ಥಗಳನ್ನು ಮಾರಟ ಮಾಡದಂತೆ ತಡೆಯಲು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಕೊಡಗು ಜಿಲ್ಲೆ ಮಡಿಕೇರಿ ಅಂಕಿತಾಧಿಕಾರಿಗಳಾದ ಡಾ.ಅನಿಲ್ ದಾವನ್ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ












Click it and Unblock the Notifications