ಸಿದ್ದರಾಮಯ್ಯ ಅವಧಿಯಲ್ಲೇ ಹೆಚ್ಚು ಕನ್ನಡ ಶಾಲೆಗಳು ಮುಚ್ಚಿರುವುದು: ಸಿಂಹ

ಕೊಡಗು, ಜೂನ್ 3: ಕೇಂದ್ರ ಸರ್ಕಾರವು ದಕ್ಷಿಣದ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹರಿಹಾಯ್ದಿದ್ದಾರೆ.

ಕೊಡಗಿನ ಸೋಮವಾರಪೇಟೆಯಲ್ಲಿ ಬಿಜೆಪಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೇ ಅತಿ ಹೆಚ್ಚು ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದರು.

MP Pratap Simha said most Kannada schools were closed during Siddaramaiah government

ಸಿದ್ದರಾಮಯ್ಯ ಅವರು ಎರಡು ವರ್ಷಗಳ ಹಿಂದೆ ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಟ್ವೀಟ್ ಮಾಡಿದ್ದರು. ಸಿದ್ದರಾಮಯ್ಯ ಅವರ ಅಧಿಕಾರಾವಧಿಯಲ್ಲಿಯೇ ಹೆಚ್ಚು ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ಆದರೆ ಅವರು ಕೇಂದ್ರ ಸರ್ಕಾರದ ವಿರುದ್ಧ ಅವರು ಅಪಪ್ರಚಾರ ಮಾಡುತ್ತಿದ್ದಾರೆ. ರಾಜ್ಯದ ಜನರು ಈ ಆರೋಪಗಳಿಗೆ ಸೊಪ್ಪು ಹಾಕುವುದಿಲ್ಲ. ಅವರಿಗೆ ಈಗಿನ ಚುನಾವಣೆಯಲ್ಲಿ ತಕ್ಕಪಾಠ ಕಲಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂಬ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1969ರಲ್ಲಿಯೇ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಥಳೀಯ ಭಾಷೆಯ ಜತೆಗೆ ಹಿಂದಿ ಹಾಗೂ ಇಂಗ್ಲಿಷ್ ಫಲಕಗಳನ್ನು ಬಳಸಲು ಆರಂಭಿಸಿದ್ದರು. ಕಾಂಗ್ರೆಸ್‌ನವರು ಇದರ ಬಗ್ಗೆ ಯೋಚಿಸದೆ ವಿನಾ ಕಾರಣ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+