Cauvery Theerthodbhava 2023: ತಲಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ
ಕೊಡಗು, ಸೆಪ್ಟೆಂಬರ್ 20: ಕೊಡಗಿನ ಆರಾಧ್ಯದೈವ ಕಾವೇರಿ ತೀರ್ಥೋದ್ಭವಕ್ಕೆ ಈ ಬಾರಿಯ ಮಹೂರ್ತ ನಿಗದಿಯಾಗಿದೆ.
ಕೊಡಗು ಜಿಲ್ಲೆಯ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರತಿ ವರ್ಷದಂತೆ ಅಕ್ಟೋಬರ್ 17ರಂದು ಕಾವೇರಿ ತೀರ್ಥೋದ್ಭವಕ್ಕೆ ನಡೆಯಲಿದ್ದು, ಮಂಗಳವಾರ ಮಧ್ಯರಾತ್ರಿ 1:27ಕ್ಕೆ ಕರ್ಕಾಟಕ ಲಗ್ನದಲ್ಲಿ ಮಹೂರ್ತ ನಿಗದಿ ಮಾಡಲಾಗಿದೆ.

ಈ ಬಾರಿ ಮಳೆಯ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ತುಂಬಿಲ್ಲ. ಮತ್ತೊಂದೆಡೆ ತಮಿಳುನಾಡು ಕೂಡ ಕಾವೇರಿ ನೀರು ಹರಿಸಲಾಗುತ್ತಿದ್ದು, ರಾಜ್ಯಾದ್ಯಂತ ಹೋರಾಟಗಳು ನಡೆಯುತ್ತಿದೆ. ಈ ಜಂಜಾಟದ ನಡುವೆಯೇ ತೀರ್ಥೋದ್ಭವಕ್ಕೆ ಸಿದ್ದತೆಗಳು ಆರಂಭವಾಗಿದೆ.
ಕೊಡಗು ಮಾತ್ರವಲ್ಲದೇ ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾನಾ ಭಾಗಗಳಿಂದ ಭಕ್ತರು ಕಾವೇರಿ ತೀರ್ಥೋದ್ಭವ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಭಕ್ತರು ತೀರ್ಥೋದ್ಭವಕ್ಕೆ ಆಗಮಿಸಿ ಸ್ನಾನ ಮಾಡಿ ಇಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಕೊಡಗು ಜಿಲ್ಲಾಡಳಿತ ಈಗಾಗಲೇ ಸಿದ್ಧತೆ ಆರಂಭಿಸಿದೆ.
ಅಕ್ಟೋಬರ್ 17ರಂದೇ ತೀರ್ಥೋದ್ಭವ ನಡೆಯುತ್ತದೆ. ಆದರೆ ಪ್ರತಿ ವರ್ಷ ಆರು ಗಂಟೆಯ ಲೆಕ್ಕದಲ್ಲಿ ನಡೆಯುತ್ತದೆ. ಹಿಂದಿನ ವರ್ಷ ಸಂಜೆ ನಡೆದಿದ್ದರೆ, ಈ ವರ್ಷ ಮಧ್ಯರಾತ್ರಿ. ಮರು ವರ್ಷ ಬೆಳಗಿನ ಜಾವ. ನಂತರದ ವರ್ಷದಲ್ಲಿ ಮಧ್ಯಾಹ್ನ ನಡೆಯುತ್ತದೆ. ಹೀಗೆ ಪ್ರತಿ ವರ್ಷ ಆರು ಗಂಟೆಯಲ್ಲಿ ಮುಹೂರ್ತ ಬದಲಾಗುತ್ತಾ ಹೋಗುತ್ತದೆ ಎನ್ನುವುದನ್ನು ಸ್ಥಳೀಯರು ವಿವರಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications