ವೀರಾಜಪೇಟೆಯಲ್ಲಿ 9 ಮಂದಿ ತಬ್ಲಿಘಿ ಪಂಗಡದ ಮೌಲ್ವಿಗಳು ಪತ್ತೆ
ಕೊಡಗು, ಏಪ್ರಿಲ್ 04: ವೀರಾಜಪೇಟೆಯಲ್ಲಿ 9 ಮಂದಿ ತಬ್ಲಿಘಿ ಪಂಗಡದ ಮೌಲ್ವಿಗಳು ಪತ್ತೆಯಾಗಿದ್ದಾರೆ. ಗುಜರಾತ್ ಮೂಲದ ಮೌಲ್ವಿಗಳು ವೀರಾಜಪೇಟೆ ಮಸೀದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ.
ಮಾಧ್ಯಮಗಳಿಗೆ ಜಿಲ್ಲಾ ಎಸ್ಪಿ ಡಾ.ಸುಮನ್ ಪನ್ನೇಕರ್ ಈ ಬಗ್ಗೆ ವಿವರ ನೀಡಿದ್ದಾರೆ. 9 ಮಂದಿ ಮೌಲ್ವಿಗಳು ಫೆಬ್ರವರಿ 2 ರಂದು ವೀರಾಜಪೇಟೆಗೆ ಆಗಮಿಸಿದ್ದರು. 40 ದಿನಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಲಾಕ್ಡೌನ್ ಹಿನ್ನೆಲೆ ಮನೆಯೊಂದಲ್ಲಿ ಉಳಿದುಕೊಂಡಿದ್ದರು. ಆ ಮನೆ ಮಾಲೀಕನನ್ನು ಈಗ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಜಿಲ್ಲಾ ಪೊಲೀಸರಿಂದ ಸಮಗ್ರ ಪರಿಶೀಲನೆ ನಡೆಸಲಾಗಿದೆ. ಎಲ್ಲರ ಗಂಟಲ ದ್ರವವನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ.
''ತಬ್ಲಿಘಿಗಳ ಕೇಂದ್ರ ಸ್ಥಾನ ಮುಂಬೈ. ಮುಂಬೈ ಸಮಾವೇಶ ಮುಗಿಸಿ ವೀರಾಜಪೇಟೆಗೆ ಬಂದು, ಪೊಲೀಸರಿಗೆ ಮಾಹಿತಿ ನೀಡದೆ ಕಾರ್ಯಕ್ರಮ ಮಾಡಿದ್ದಾರೆ. ಸ್ಥಳೀಯ ವೈದ್ಯರಿಗೆ ಮಾಹಿತಿ ನೀಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು. ಗುಂಪಾಗಿ ಪಯಣಿಸುವ ತಬ್ಲಿಘಿ ಮೌಲ್ವಿಗಳು ಈವರೆಗೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ.'' ಎಂದು ಜಿಲ್ಲಾ ಎಸ್ಪಿ ಡಾ.ಸುಮನ್ ಪನ್ನೇಕರ್ ಮಾಹಿತಿ ನೀಡಿದ್ದಾರೆ.

ಮಾರುಕಟ್ಟೆ ಚೆಕ್ಪೋಸ್ಟ್ನಲ್ಲಿ ಇದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಿದ್ದು, ಕರ್ನಾಟಕ-ಕೇರಳದ ಗಡಿಯಲ್ಲಿ ಚೆಕ್ಪೋಸ್ಟ್ ಇದಾಗಿದೆ. ಗೂಡ್ಸ್ ಲಾರಿಗಳಿಂದ ಅಕ್ರಮ ಹಣ ವಸೂಲಿ ಹಣ ಸಂಗ್ರಹಿಸುತ್ತಿದ್ದ ವಿಡಿಯೋ ಲಭ್ಯವಾಗಿರುವ ಆಧಾರದಲ್ಲಿ ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಿಗೆ ಡಾ.ಸುಮನ್ ಪನ್ನೇಕರ್ ಸ್ಪಷ್ಟನೆ ನೀಡಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications