ಬಜರಂಗದಳದಿಂದ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ: ಶಾಲೆ ಸ್ಪಷ್ಟನೆ
ಮಡಿಕೇರಿ, ಮೇ19: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸಾಯಿ ಶಂಕರ ಶಾಲೆಯಲ್ಲಿ ಬಜರಂಗದಳದಿಂದ ನೂರಾರು ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡಲಾಗಿದೆ ಎಂಬ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸಾಯಿ ಶಂಕರ ವಿದ್ಯಾಸಂಸ್ಥೆಯ ಆವರಣದಲ್ಲಿ ಯಾವುದೇ ರೀತಿಯ ಶಸ್ತ್ರಾಸ್ತ್ರ ತರಬೇತಿ ನಡೆದಿಲ್ಲ ಎಂದು ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹೇಳಿದೆ. ಕೆಲವರು ರಾಜಕೀಯ ಲಾಭಕ್ಕಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಝರು ಗಣಪತಿ ಅಸಮಾಧಾನ ವ್ಯಕ್ತಪಡಿಸಿದರು.
ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, "ಬೇಸಿಗೆ ರಜೆ ಇದ್ದ ಕಾರಣ ವಿದ್ಯಾಸಂಸ್ಥೆಯಲ್ಲಿ ಕಾರ್ಯಕ್ರಮಕ್ಕೆ ಸ್ಥಳಾವಕಾಶ ನೀಡಲಾಗಿತ್ತು. ಆದರೆ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಅಥವಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ" ಎಂದು ಸ್ಪಷ್ಟಪಡಿಸಿದರು.

ಮುಕ್ತ ಅವಕಾಶ; "ಸಂಸ್ಥೆಯ ಸಭಾಂಗಣದಲ್ಲಿ ಊಟ ಮತ್ತು ಮಲಗುವ ವ್ಯವಸ್ಥೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಹಿಂದೆಯೂ ಜಾತಿ, ಧರ್ಮದ ತಾರತಮ್ಯವಿಲ್ಲದೆ ಹಲವು ಕಾರ್ಯಕ್ರಮಗಳಿಗೆ ಮುಕ್ತ ಅವಕಾಶ ನೀಡಲಾಗಿದೆ" ಎಂದು ಝರು ಗಣಪತಿ ಹೇಳಿದರು.
"ಸಭಾ ಕಾರ್ಯಕ್ರಮ ಹೊರತುಪಡಿಸಿ ಇತರ ಚಟುವಟಿಕೆಗಳನ್ನು ಸಂಸ್ಥೆಯ ಹೊರ ಭಾಗದಲ್ಲಿ ನಡೆಸಲಾಗಿದ್ದು, ಶಾಲೆ ಆವರಣದ ಸಂಪೂರ್ಣ ಮಾಹಿತಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾನೂನು ಬಾಹಿರ ಚಟುವಟಿಕೆಗಳು ಇಲ್ಲಿ ನಡೆದಿಲ್ಲ" ಎಂದು ತಿಳಿಸಿದರು.
"ಕೆಲವರು ಪೊಲೀಸ್ ತನಿಖೆಗಾಗಿ ಒತ್ತಡ ಹೇರುತ್ತಿದ್ದು, ಇದು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ. ಆದ್ದರಿಂದ ಸಾರ್ವಜನಿಕರೇ ಸಂಸ್ಥೆಗೆ ಖದ್ದು ಭೇಟಿ ನೀಡಿ ತನಿಖೆ ನಡೆಸುವಂತೆ" ಮನವಿ ಮಾಡಿದರು.
"2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ವಿದ್ಯಾಭ್ಯಾಸದಿಂದ ವಂಚಿತರಾದ ಸುಮಾರು 140 ಮಕ್ಕಳಿಗೆ ಮೂರು ವರ್ಷಗಳ ಕಾಲ ಉಚಿತ ಶಿಕ್ಷಣ, ವಸತಿ ನೀಡುವ ಮೂಲಕ ಅವರ ಬೆಳವಣಿಗೆಗೆ ಸಂಸ್ಥೆ ಶ್ರಮಿಸಿದೆ. ಇಂತಹ ಸೇವಾ ಮನೋಭಾವದ ಸಂಸ್ಥೆಯ ಹೆಸರನ್ನು ಎಳೆದು ತಂದು ತೊಂದರೆ ನೀಡುತ್ತಿರುವುದು ಸರಿಯಾದ ಕ್ರಮವಲ್ಲ" ಎಂದರು.
"ನಮ್ಮಲ್ಲಿ ಎಲ್ಲಾ ಜಾತಿ, ಧರ್ಮದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದಾರೆ. ಇಲ್ಲಸಲ್ಲದ ಹೇಳಿಕೆಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಕೆಲವರ ಒತ್ತಡಕ್ಕೆ ಮಣಿದು ಮೂವರು ಮಕ್ಕಳು ಶಾಲೆಯಿಂದ ಟಿಸಿ ಪಡೆದು ಹೋಗಿದ್ದಾರೆ" ಎಂದು ಬೇಸರ ವ್ಯಕ್ತಪಡಿಸಿದರು.

ನೆನಪಿನ ಕಾಣಿಕೆಯಾಗಿ ತ್ರಿಶೂಲ; ಇದೇ ಸಂದರ್ಭ ಕಾರ್ಯಕ್ರಮದಲ್ಲಿ ನೀಡಲಾದ ತ್ರಿಶೂಲವನ್ನು ತೋರಿಸಿದ ಝರು ಗಣಪತಿ ಅವರು, "ಶಿಬಿರದ ಸಮಾರೋಪ ಸಮಾರಂಭದಲ್ಲಿ ತ್ರಿಶೂಲಗಳನ್ನು ನೆನಪಿನ ಕಾಣಿಕೆಯಾಗಿ ನೀಡಲಾಗಿದೆಯೇ ಹೊರತು ಯಾವುದೇ ರೀತಿಯ ತರಬೇತಿ ನೀಡಿಲ್ಲ" ಎಂದರು.
Recommended Video
ನಿರ್ದೇಶಕ ಸತೀಶ್ ದೇವಯ್ಯ ಮಾತನಾಡಿ, "ಪ್ರತಿಷ್ಠಿತ ವಿದ್ಯಾಸಂಸ್ಥೆಯ ಹೆಸರು ಕೆಡಿಸುವ ಪ್ರಯತ್ನ ಯಾರಿಗೂ ಶೋಭೆ ತರುವುದಿಲ್ಲ. ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿ ಮಕ್ಕಳ ಮನಸ್ಸನ್ನು ಕೆಡಿಸುವುದು ಖಂಡನೀಯ" ಎಂದು ಹೇಳಿದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications