ತಲಕಾವೇರಿ ದೇವಾಲಯದ ಇ-ಪ್ರಸಾದ ಸೇವೆಗೆ ಚಾಲನೆ
ಕೊಡಗು ಜಿಲ್ಲೆಯ ಪ್ರಸಿದ್ಧ ತಲಕಾವೇರಿ ದೇವಾಲಯದ ಇ-ಪ್ರಸಾದವನ್ನು ನೀವು ಮನೆ ಬಾಗಿಲಲ್ಲಿಯೇ ಪಡೆಯಬಹುದಾಗಿದೆ.
ಮಡಿಕೇರಿ, ಮಾರ್ಚ್ 07; ಕರ್ನಾಟಕದ ಪ್ರಸಿದ್ಧ ತಲಕಾವೇರಿ ಮತ್ತು ಭಾಗಮಂಡಲದ ಪ್ರಸಾದವನ್ನು ಜನರು ಮನೆ ಬಾಗಿಲಿನಲ್ಲಿಯೇ ಪಡೆಯಬಹುದಾಗಿದೆ. ಹೌದು, ಭಾರತೀಯ ಅಂಚೆ ಇಲಾಖೆ ಸಹಾಕಾರದೊಂದಿಗೆ ಇ-ಪ್ರಸಾದ ಸೇವೆಗೆ ಚಾಲನೆ ನೀಡಲಾಗಿದೆ. 300 ರೂ. ಪಾವತಿಸಿದಲ್ಲಿ ಇ-ಪ್ರಸಾದವನ್ನು ಅಂಚೆ ಮೂಲಕ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ತಲಕಾವೇರಿ ಮತ್ತು ಭಾಗಮಂಡಲಕ್ಕೆ ಲಕ್ಷಾಂತರ ಭಕ್ತರಿದ್ದಾರೆ.
ಕೊಡಗು ಜಿಲ್ಲಾಧಿಕಾರಿ ಡಾ. ಬಿ. ಸಿ. ಸತೀಶ ಅವರು ಪುಣ್ಯಕ್ಷೇತ್ರ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯ ಮತ್ತು ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಪವಿತ್ರ ಕ್ಷೇತ್ರಗಳ ಇ-ಪ್ರಸಾದ ಮತ್ತು ತೀರ್ಥ ವಿತರಣೆಗೆ ಚಾಲನೆ ನೀಡಿದರು. ಇ-ಪ್ರಸಾದದಲ್ಲಿ ಕಾವೇರಿ ತೀರ್ಥ, ಪಂಚಕಜ್ಜಾಯ, ಕುಂಕುಮ, ಶ್ರೀಗಂಧ ಇರಲಿದೆ.

ಇ-ಪ್ರಸಾದ ಸೇವೆಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿಗಳು, "ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯಿಂದ ಅಂಚೆ ಕಚೇರಿ ಮೂಲಕ ಇ-ಪ್ರಸಾದವನ್ನು www.indiapost.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಮತ್ತು ಸಹಾಯವಾಣಿ 18002666868 ಬುಕ್ ಮಾಡಿ 300 ರೂ. ಪಾವತಿಸಿದಲ್ಲಿ ಅಂಚೆ ಮೂಲಕ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ" ಎಂದರು.

ಪ್ರಾಯೋಗಿಕವಾಗಿ ಈ ಪ್ರಸಾದ ಸೇವೆಗೆ ಚಾಲನೆ ನೀಡಲಾಗಿದೆ. ಭಕ್ತಾಧಿಗಳ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಭಾಗಮಂಡಲ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯದ ಆಡಳಿತಾಧಿಕಾರಿ ಡಾ. ನಂಜುಂಡೇಗೌಡ ಮಾಹಿತಿ ನೀಡಿದರು.
ತಲಕಾವೇರಿ ಪ್ರಸಿದ್ಧ ದೇವಾಲಯ; ಮಡಿಕೇರಿಯ ತಲಕಾವೇರಿ ಕಾವೇರಿ ನದಿಯ ಉಗಮ ಸ್ಥಾನ. ಇದು ಬಹಳ ಪ್ರಸಿದ್ಧ ಕ್ಷೇತ್ರವಾಗಿದೆ. ಕರ್ನಾಟಕ ಮಾತ್ರವಲ್ಲ ತಮಿಳುನಾಡು, ಕೇರಳದಿಂದಲೂ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡುತ್ತಾರೆ. ಕೊಡಗು ಜಿಲ್ಲಾಡಳಿತವು ಸಹ ಪವಿತ್ರ ತೀರ್ಥೋಧ್ಬವದ ಸಮಯದಲ್ಲಿ ಭಕ್ತರಿಗೆ ಎಲ್ಲಾ ಸೌಲಭ್ಯ ಒದಗಿಸಲು ಅಗತ್ಯ ವ್ಯವಸ್ಥೆ ಮಾಡುತ್ತದೆ.
ಮಡಿಕೇರಿಯಿಂದ ಸುಮಾರು 46 ಕಿ.ಮೀ. ದೂರದಲ್ಲಿ ಪ್ರಶಾಂತ ಮತ್ತು ಸುಂದರವಾದ ಪ್ರದೇಶದಲ್ಲಿ ಕನ್ನಡ ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನವಾಗಿ ತಲಕಾವೇರಿ ಇದೆ. ಸಾಮಾನ್ಯವಾಗಿ ಪ್ರತಿ ವರ್ಷವು ಅಕ್ಟೋಬರ್ನಲ್ಲಿ ನಡೆಯಲಿದೆ. ಈ ಸ್ಥಾನದ ಬಳಿ ಬ್ರಹ್ಮ ಶಿಖರವಿದೆ. ಇಲ್ಲಿನ ಪರ್ವತಗಳ ವಿಹಂಗಮ ನೋಟ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications