ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಡಗಿನಲ್ಲಿ ಟಿಪ್ಪು ಜಯಂತಿ ಆಚರಣೆಗೆ ವಿರೋಧ

|
Google Oneindia Kannada News

ಕೊಡಗು, ನವೆಂಬರ್ 04 : ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆ ಮಾಡಲು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡಿದೆ. ಆದರೆ, ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ವಿರೋಧ ವ್ಯಕ್ತವಾಗಿದೆ.

ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ಟಿಪ್ಪು ಜಯಂತಿ ಆಚರಣೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಸಂಘರ್ಷಕ್ಕೆ ದಾರಿ ಮಾಡಿ ಕೊಡದೇ ಸರ್ಕಾರ ಉತ್ತಮ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಸಮಿತಿ ಹೇಳಿದೆ.

ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್!ಟಿಪ್ಪು ಜಯಂತಿ : ಸರ್ಕಾರಕ್ಕೆ 1 ಸಾವಿರ ರೂ. ದಂಡ ಹಾಕಿದ ಹೈಕೋರ್ಟ್!

ಸಮಿತಿ ಸಂಚಾಲಕ ಅಭಿಮನ್ಯು ಕುಮಾರ್ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಸಿದ್ದರಾಮಯ್ಯ ನೇತೃತ್ವದ ಸಮ್ಮಿಶ್ರ ಸರ್ಕಾರ ಮತಕ್ಕಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿತ್ತು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರವೂ ಜಯಂತಿ ಆಚರಣೆಗೆ ಮುಂದಾಗಿರುವುದು ವಿಷಾದನೀಯ' ಎಂದರು.

ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?ಟಿಪ್ಪು ಸ್ವಾತಂತ್ರ್ಯ ಯೋಧನೇ, ಜಯಂತಿ ಆಚರಣೆ ವಿರೋಧವೇಕೆ?

tipu sultan

'2015ರಲ್ಲಿ ಟಿಪ್ಪು ಜಯಂತಿ ಆಚರಣೆ ವೇಳೆ ಹತ್ಯೆಯಾಗಿದ್ದ ಕುಟ್ಟಪ್ಪ ಮನೆಗೆ ಭೇಟಿ ನೀಡಿದ್ದ ಕುಮರಸ್ವಾಮಿ ಅವರು, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಜಯಂತಿ ಆಚರಣೆ ಕೈ ಬಿಡುತ್ತೇವೆ ಎಂದು ಭರವಸೆ ನೀಡಿದ್ದರು. ಈಗ ಮಾತಿಗೆ ತಪ್ಪುತ್ತಿದ್ದಾರೆ' ಎಂದು ಅಭಿಮನ್ಯು ಕುಮಾರ್ ಆರೋಪಿಸಿದ್ದಾರೆ.

ಟಿಪ್ಪು ಸುಲ್ತಾನ್ ವಿರುದ್ಧ ಕ್ರೈಸ್ತ ಸಮುದಾಯದ ವಿರೋಧವೇಕೆ?ಟಿಪ್ಪು ಸುಲ್ತಾನ್ ವಿರುದ್ಧ ಕ್ರೈಸ್ತ ಸಮುದಾಯದ ವಿರೋಧವೇಕೆ?

ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿ ಕುಶಾಲಪ್ಪ ಅವರು, 'ಜಿಲ್ಲೆಯ ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸಕ್ಕೆ ಸಮ್ಮಿಶ್ರ ಸರ್ಕಾರ ಮುಂದಾಗಿದೆ. ಅಲ್ಲದೇ ಕಾವೇರಿ ನದಿಯ ತವರೂರಿನಲ್ಲಿ ಟಿಪ್ಪು ಜಯಂತಿಗೆ ಅವಕಾಶ ನೀಡುವುದಿಲ್ಲ' ಎಂದು ಹೇಳಿದರು.

ಯಾರಿಗೂ ಬೇಡವಾದ ಟಿಪ್ಪು ಜಯಂತಿಯನ್ನು ಕೊಡಗಿನಲ್ಲಿ ಆಚರಣೆ ಮಾಡಿದರೆ ಪ್ರಕೃತಿ ವಿಕೋಪದಿಂದ ಸಂಕಷ್ಟಕ್ಕೆ ಒಳಗಾಗಿರುವ ಕೊಡಗಿನ ಜನರಿಗೆ ಮತ್ತಷ್ಟು ನೋವಾಗಲಿದೆ ಎಂದು ಜನರು ಹೇಳಿದ್ದಾರೆ.

English summary
Tipu Jayanti Acharana Virodhi Samiti and BJP opposed to celebrate Tipu Jayanti in Kodagu. Karnataka Government decided to celebrate Tipu Jayanti on November 10, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X