ಕೊಡಗಿನ ಜನತೆಗೆ ಸಮಾಧಾನ ತಂತು ಈ ಬಾರಿಯ ವರ್ಷಧಾರೆ
ಮಡಿಕೇರಿ, ಸೆಪ್ಟೆಂಬರ್ 6: ಕೊಡಗಿನ ಮಡಿಕೇರಿ ತಾಲೂಕಿನಲ್ಲಿ ಮಳೆಯ ಪ್ರಮಾಣ ಜನವರಿಯಿಂದ ಇಲ್ಲಿಯವರೆಗೆ ನೂರು ಸೆಂ.ಮೀ. ದಾಖಲಾಗಿದ್ದರೆ, ಅತ್ತ ಕೆ.ಆರ್.ಎಸ್ ಜಲಾಶಯದ ನೀರಿನ ಮಟ್ಟವೂ ನೂರಕ್ಕೇರಿದೆ.
ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಒಂದಷ್ಟು ದಿನ ಭಾರೀ ಮಳೆ ಸುರಿದ ಕಾರಣದಿಂದ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಮಳೆಯಾಗಲು ಸಾಧ್ಯವಾಗಿದೆ. ಈ ಬಾರಿ 100 ಸೆಂ.ಮೀ. ಮಳೆ ದಾಖಲಾಗಿದ್ದರೆ ಕಳೆದ ವರ್ಷ ಇದೇ ವೇಳೆಗೆ 93 ಸೆಂ.ಮೀ. ಮಳೆಯಾಗಿತ್ತು. ಈ ಬಾರಿ ಸುಮಾರು 7 ಸೆಂ.ಮೀ.ಯಷ್ಟು ಅಧಿಕ ಮಳೆಯಾಗಿರುವುದು ಕಂಡು ಬಂದಿದೆ.

ಜಿಲ್ಲೆಯಲ್ಲಿ ವರ್ಷಾರಂಭದಿಂದ ಇದುವರೆಗೆ ಸರಾಸರಿ 70 ಸೆಂ.ಮೀ. ಮಳೆಯಾಗಿದ್ದರೆ, ಕಳೆದ ವರ್ಷ ಈ ವೇಳೆಗೆ 60.80 ಸೆಂ.ಮೀ. ಮಳೆ ದಾಖಲಾಗಿತ್ತು. ಹೀಗಾಗಿ ಸುಮಾರು 10 ಸೆಂ.ಮೀ. ಅಧಿಕ ಮಳೆ ಈ ಬಾರಿ ಆಗಿದೆ. ಮಡಿಕೇರಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಆಶಾದಾಯಕ ಮಳೆಯೊಂದಿಗೆ 97.64 ಸೆಂ.ಮೀ. ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಗೆ 92.86 ಸೆಂ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲೂಕಿನಲ್ಲಿ ಈ ಅವಧಿಯಲ್ಲಿ ಸರಾಸರಿ 54.20 ಸೆಂ.ಮೀ. ಮಳೆ ಬಿದ್ದಿದ್ದು, ಕಳೆದ ವರ್ಷ ಈ ಸಮಯಕ್ಕೆ 47 ಸೆಂ.ಮೀ. ಮಳೆಯಾಗಿತ್ತು. ವೀರಾಜಪೇಟೆ ತಾಲೂಕಿನಲ್ಲಿ ಪ್ರಸಕ್ತ ಸಾಲಿಗೆ ಒಟ್ಟು 54 ಸೆಂ.ಮೀ. ಮಳೆ ಆಗಿದ್ದು, ಕಳೆದ ವರ್ಷ 43 ಸೆಂ.ಮೀ. ಮಳೆ ದಾಖಲಾಗಿತ್ತು.
ಇನ್ನು ತಲಕಾವೇರಿಗೆ ವರ್ಷಾರಂಭದಿಂದ ಇದುವರೆಗೆ 192 ಸೆಂ.ಮೀ. ಮಳೆ ಪ್ರಸಕ್ತ ದಾಖಲಾಗಿದ್ದು, ಕಳೆದ ವರ್ಷ ಈ ಸಮಯಕ್ಕೆ 185 ಸೆಂ.ಮೀ. ಮಳೆಯಾಗಿತ್ತು. ಒಟ್ಟಾರೆಯಾಗಿ ಹೇಳುವುದಾದರೆ ಕೊಡಗಿನಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಮಳೆಯಾಗಿರುವುದು ಕಂಡು ಬಂದಿದೆ. ಅಕ್ಟೋಬರ್ ತಿಂಗಳ ತನಕವೂ ಮಳೆ ಬರುವ ಸಾಧ್ಯತೆ ಇರುವುದರಿಂದ ಮಳೆಯ ಪ್ರಮಾಣ ಕಳೆದ ವರ್ಷಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ.
ಮಳೆಯ ಪ್ರಮಾಣ ಹೆಚ್ಚಾದಂತೆಲ್ಲ ಕಾಫಿ ಫಸಲಿಗೆ ಹಾನಿಯಾಗುವ ಲಕ್ಷಣಗಳು ಕಂಡು ಬಂದಿದೆ. ಮಡಿಕೇರಿ ಸುತ್ತಮುತ್ತ ಈಗಾಗಲೇ ಮಳೆಗೆ ಕಾಫಿ ಫಸಲು ಉದುರುತ್ತಿರುವುದು ಗೋಚರಿಸಿದೆ. ಇತ್ತೀಚೆಗೆ ಸುರಿದ ಮಳೆಯಿಂದ ತೊರೆ, ಹೊಳೆಗಳಲ್ಲಿ ನೀರು ಕಾಣಿಸುವಂತಾಗಿದೆ. ಮಳೆ ಅಕ್ಟೋಬರ್ ತನಕ ಬಂದಿದ್ದೇ ಆದರೆ ಮುಂದಿನ ಬೇಸಿಗೆಯಲ್ಲಿ ಉಂಟಾಗುವ ನೀರಿನ ಸಮಸ್ಯೆಗೆ ಇತಿಶ್ರೀ ಹಾಡಬಹುದು ಇಲ್ಲದೆ ಹೋದರೆ ಕೊಡಗಿನಲ್ಲಿಯೇ ಅಂತರ್ಜಲದ ಕೊರತೆಯಿಂದ ಸಮಸ್ಯೆ ತಲೆದೋರಿದರೆ ಅಚ್ಚರಿ ಪಡಬೇಕಾಗಿಲ್ಲ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications