ಭೂ ಕುಸಿತವಾಗಿದ್ದ ನಾರಾಯಣಾಚಾರ್ ಮನೆ ಬಳಿ ಈಗ ನಿಧಿಗಾಗಿ ಹುಡುಕಾಟ?
ಕೊಡಗು, ನವೆಂಬರ್ 28: ಇದೇ ಆಗಸ್ಟ್ ತಿಂಗಳಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಅವಾಂತರವನ್ನೇ ಸೃಷ್ಟಿಸಿತ್ತು. ಇಲ್ಲಿನ ಪ್ರಸಿದ್ಧ ತೀರ್ಥ ಕ್ಷೇತ್ರ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರಧಾನ ಅರ್ಚಕ ನಾರಾಯಣಾಚಾರ್ ಅವರ ಮನೆಯಲ್ಲಿದ್ದ ಐದು ಮಂದಿ ಭೂಸಮಾಧಿಯಾಗಿದ್ದರು. ಇದೀಗ ಆ ಮನೆ ಸುತ್ತಲೂ ಜನರು ನಿಧಿಗಾಗಿ ಶೋಧ ನಡೆಸುತ್ತಿದ್ದಾರೆ ಎನ್ನಲಾಗಿದೆ.
ದೇವಾಲಯಗಳ ಸಮೀಪ, ರಾಜಮನೆತನಗಳು ಆಳಿದ ಪ್ರದೇಶಗಳಲ್ಲಿ ನಿಧಿಗಾಗಿ ಹುಡುಕಾಡುವುದು ಸಹಜ. ಆದರೆ ಕುಟುಂಬವೊಂದು ಬಾಳಿ ಬದುಕಿದ್ದ ಸ್ಥಳದಲ್ಲಿ ನಿಧಿಗಾಗಿ ಜನರು ಶೋಧಿಸುತ್ತಿದ್ದಾರೆ ಎನ್ನಲಾಗಿದೆ. ನಾರಾಯಣಾಚಾರ್ ಅವರದ್ದು ಶ್ರೀಮಂತ ಕುಟುಂಬವಾಗಿರುವುದೇ ಈ ಅನುಮಾನ ಮೂಡಲು ಕಾರಣವಾಗಿದೆ.
ಭೂಕುಸಿತದಲ್ಲಿ ಸಮಾಧಿಯಾಗಿದ್ದ ನಾರಾಯಣಾಚಾರ್ ಅವರ ಕುಟುಂಬ ಶ್ರೀಮಂತ ಕುಟುಂಬ ಎನ್ನುವ ಸಂಗತಿ ಅವರ ಸಾವಿನ ಬಳಿಕವಷ್ಟೇ ಬಹಿರಂಗವಾಗಿತ್ತು. ಹೀಗೊಂದು ಸುದ್ದಿ ಹರಿದಾಡುತ್ತಿದ್ದಂತೆ ಅವರ ಮನೆ ಬಳಿ ನಿಧಿಗಾಗಿ ಶೋಧ ನಡೆಸುತ್ತಿರುವ ಅನುಮಾನ ವ್ಯಕ್ತಗೊಂಡಿದೆ.

ಆಗಸ್ಟ್ ನಲ್ಲಿ ಸಂಭವಿಸಿದ್ದ ಘಟನೆ
ಇದೇ ಆಗಸ್ಟ್ 5ರಂದು ಕೊಡಗಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ತಲಕಾವೇರಿ ದೇಗುಲದ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಕುಟುಂಬ ಭೂ ಸಮಾಧಿಯಾಗಿತ್ತು. ಆರು ದಿನಗಳ ಕಾಲ ನಿರಂತರ ಕಾರ್ಯಾಚರಣೆ ನಡೆಸಿದ್ದು, ಮೂವರ ಮೃತದೇಹವನ್ನು ಪತ್ತೆಹಚ್ಚಲಾಗಿತ್ತು. ಆನಂತರ ಸರ್ಕಾರ ಶೋಧ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.

ಮನೆಯಲ್ಲಿ ಬಂಗಾರ, ಹಣವಿದ್ದ ಮಾಹಿತಿ
ನಾರಾಯಣಾಚಾರ್ ಅವರ ಕುಟುಂಬ ಭೂಕುಸಿತದಲ್ಲಿ ಸಮಾಧಿಯಾಗುವ ವೇಳೆ ಸುಮಾರು ಎರಡು ಕೆ.ಜಿ ಯಷ್ಟು ಚಿನ್ನ ಇತ್ತು, ಲಕ್ಷಾಂತರ ರೂಪಾಯಿ ಹಣವಿತ್ತು. ಅಷ್ಟೇ ಅಲ್ಲ ಕ್ವಿಂಟಾಲ್ ಗಟ್ಟಲೆ ಕಪ್ಪು ಚಿನ್ನ ಕರಿಮೆಣಸು ಮತ್ತು ಏಲಕ್ಕಿ ಇತ್ತು ಎನ್ನುವುದು ತಿಳಿದುಬಂದಿತ್ತು. ಆದರೆ ಅವೆಲ್ಲವೂ ನಾರಾಯಣಾಚಾರ್ ಅವರ ಕುಟುಂಬದೊಂದಿಗೆ ಕೊಚ್ಚಿ ಹೋಗಿ ಭೂಸಮಾಧಿಯಾದವು ಎನ್ನಲಾಗಿದೆ.

ನಾರಾಯಣಾಚಾರ್ ಮನೆ ಸಮೀಪ ಹುಡುಕಾಟ?
ಹೀಗೆ ಮುಚ್ಚಿ ಹೋಗಿದ್ದ ಚಿನ್ನ, ನಗದು, ಕ್ವಿಂಟಾಲ್ ಗಟ್ಟಲೆ ಕರಿಮೆಣಸು, ಏಲಕ್ಕಿಗಾಗಿ ಇದುವರೆಗೆ ಸುಮ್ಮನಿದ್ದ ಕೆಲವರು ರಾತ್ರಿ ಹುಡುಕಾಟ ಆರಂಭಿಸಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ. ತಲಕಾವೇರಿಯಲ್ಲಿ ಸಂಜೆ ಆರು ಗಂಟೆಯಾಗುತ್ತಿದ್ದಂತೆ ಅಲ್ಲಿಂದ ಎಲ್ಲರೂ ಜಾಗ ಖಾಲಿ ಮಾಡುತ್ತಾರೆ. ಕೆಲವರು ರಾತ್ರಿಯಾಗುತ್ತಲೇ ಟಾರ್ಚ್ ಗಳನ್ನು ಹಾಕಿಕೊಂಡು ಹುಡುಕಾಡುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
Recommended Video

"ಇಲ್ಲಿ ಯಾವುದೇ ಕುರುಹು ಇಲ್ಲ"
ಅತ್ಯಂತ ದುರ್ಗಮವಾದ ಸ್ಥಳದಲ್ಲಿ ಹೀಗೆ ಹುಡುಕಾಡುವುದು ಆತಂಕದ ವಿಷಯ ಹೌದು. ನಾರಾಯಣಾಚಾರ್ ಅವರು ಬಳಸುತ್ತಿದ್ದ ಬಟ್ಟೆ ಬರೆ ಸೇರಿದಂತೆ ವಿವಿಧ ವಸ್ತುಗಳು ಅಲ್ಲಿಯೇ ಬಿದ್ದಿವೆ. ಈ ನಡುವೆ ಜನರು ನಿಧಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನುತ್ತಾರೆ ಕೆಲವರು. ಆದರೆ, ಇಲ್ಲಿಯವರೆಗೂ ನಮಗೆ ಯಾರೂ ಕಾಣಿಸಿಲ್ಲ. ಇಲ್ಲಿ ಹುಡುಕಾಡಲೂ ಸಾಧ್ಯವಿಲ್ಲ ಎನ್ನುತ್ತಾರೆ ಈಗಿನ ತಲಕಾವೇರಿ ದೇವಾಲಯದ ಅರ್ಚಕ ಗುರುರಾಜ್ ಆಚಾರ್. ನಿಧಿ ಶೋಧನೆ ಮಾಡಿರುವುದಕ್ಕೆ ಇಲ್ಲಿ ಯಾವುದೇ ಕುರುಹು ಇಲ್ಲಎನ್ನುತ್ತಾರೆ ಸ್ಥಳೀಯರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications