ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಆರೋಪಿ ಬಂಧನ
ಒಂದು ತಿಂಗಳ ಹಿಂದೆ ಸೋಮವಾರಪೇಟೆಯ ಐಗೂರಿನಲ್ಲಿ ಆರ್ ಎಸ್ ಎಸ್ ಮುಖಂಡರೊಬ್ಬರ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿತ್ತು. ಅದಕ್ಕೂ ಮುನ್ನ ಕುರಾನ್ ಗೆ ಬೆಂಕಿ ಹಚ್ಚಲಾಗಿತ್ತು.ಇದೀಗ ಬಾಂಬ್ ಎಸೆದಿದ್ದ ಆರೋಪಿ ಬಂಧನವಾಗಿದೆ
ಸೋಮವಾರಪೇಟೆ, ಡಿಸೆಂಬರ್ 24: ಐಗೂರು ಗ್ರಾಮದ ಆರ್ ಎಸ್ ಎಸ್ ಮುಖಂಡ ಪದ್ಮನಾಭ್ ಅವರ ಕಾರಿಗೆ ಪೆಟ್ರೋಲ್ ಬಾಂಬ್ ಎಸೆದು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸ್ ತನಿಖಾ ತಂಡ, ಇನ್ನೊಬ್ಬ ಪ್ರಮುಖ ಆರೋಪಿ ಪತ್ತೆಗಾಗಿ ಬಲೆ ಬೀಸಿದೆ.
ಕಲ್ಕಂದೂರು ಗ್ರಾಮದ ಮೂಸ ಎಂಬವರ ಪುತ್ರ ಜಮಾಲುದ್ದೀನ್ ಅಲಿಯಾಸ್ ಜಮಾಲ್ (20) ಬಂಧಿತ. ಮತ್ತೊಬ್ಬ ಆರೋಪಿ ಸೋಮವಾರಪೇಟೆಯ ಜನತಾ ಕಾಲೋನಿ ನಿವಾಸಿ ಕರೀಂ ಬೇಗ್ ತಲೆ ಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಮಸೀದಿಯಲ್ಲಿದ್ದ ಕುರಾನ್ ಗೆ ಬೆಂಕಿ ಹಚ್ಚಿದ ಪ್ರಕರಣ ಐಗೂರಲ್ಲಿ ನಡೆದಿತ್ತು.[ಕೊಡಗಿನ ಐಗೂರಲ್ಲಿ ಕುರಾನ್ ಸುಟ್ಟಿದ್ದಕ್ಕೆ ಕಾರು ಸುಟ್ಟರೇ?]

ಇದಾದ ಬಳಿಕ ನವೆಂಬರ್ 13ರಂದು ಆರ್ ಎಸ್ ಎಸ್ ಪ್ರಮುಖ ಹಾಗೂ ವಕೀಲ ಕೆ.ಎಸ್. ಪದ್ಮನಾಭ ಅವರ ಕಾರಿಗೆ ಪೆಟ್ರೋಲ್ ಬಾಂಬ್ ಎಸೆದು ಧ್ವಂಸಗೊಳಿಸಲಾಗಿತ್ತು. ಕುರಾನ್ ಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿ ಧರಣೇಶ್ ಎಂಬಾತನನ್ನು ಬಂಧಿಸಲಾಗಿದ್ದು, ಆತ ಹಿಂದೂಪರ ಸಂಘಟನೆಯ ಕಾರ್ಯಕರ್ತ ಅಲ್ಲ ಎಂಬುದು ಸ್ಪಷ್ಟವಾಗಿತ್ತು.

ಐಗೂರಲ್ಲಿ ಕುರಾನ್ ಸುಟ್ಟ ಪ್ರಕರಣದ ಬಳಿಕ ಹಲವು ತಿರುವು ಕಂಡು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪ್ರತಿಭಟನೆ, ಪ್ರಚೋದನಾಕಾರಿ ಭಾಷಣಗಳಿಂದ ಜನ ಭಯದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿತ್ತು. ಈ ಎಲ್ಲದರ ನಡುವೆ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆಗಳು ನಡೆದಿದ್ದವು.[ಕೊಡಗಿನ ಐಗೂರಲ್ಲಿ ಕುರಾನ್ ಗೆ ಬೆಂಕಿ: ಪೊಲೀಸ್ ಬಂದೋಬಸ್ತ್]
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ ವಕಾಲತ್ತು ವಹಿಸದಂತೆ ವಕೀಲರ ಸಂಘದ ಅಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ, ನಿರ್ಣಯ ಕೈಗೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications