ಪ್ಲಾಸ್ಟಿಕ್ ಮಯವಾದ ಮಡಿಕೇರಿ ರಸ್ತೆಗಳು, ಎಲ್ಲಿ ನೋಡಿದರೂ ಕಸ...
ಮೈಸೂರು, ಆಗಸ್ಟ್. 29 : ಕರ್ನಾಟಕದ ಕಾಶ್ಮೀರ ಕೊಡಗಿನ ಹಲವು ಭಾಗಗಳಲ್ಲಿ ಜಲಪ್ರವಾಹಕ್ಕೆ ಪ್ರಮುಖ ಕಾರಣವೇ ಮಾನವನ ಅತೀ ಆಸೆ. ಇದೀಗ ಕೊಡಗು ಮುಂದೊಂದು ದಿನವೂ ಮತ್ತಷ್ಟು ಸಂಕಟಗಳಿಗೆ ತುತ್ತಾಗುವ ಲಕ್ಷಣ ಕಾಣತೊಡಗಿದೆ.
ಹೌದು, ಇದಕ್ಕೆ ಸಾಕ್ಷಿಯಾಗಿರುವುದು ಶುಂಟಿಕೊಪ್ಪ - ಮಡಿಕೇರಿಯಲ್ಲಿ ಸಾಗುವ ರಸ್ತೆಯ ಇಕ್ಕೆಲಗಳು. ಹಳೆ ಬಟ್ಟೆಗಳು, ಬಾಟೆಲ್ ಗಳ ರಾಶಿ ರಾಶಿಯೇ ಅಲ್ಲಿ ಬಿದ್ದಿದೆ. ಸಾಲದೆಂಬಂತೆ ಮಕ್ಕಳ ಡೈಪರ್ ಗಳು ಸಹ ರಸ್ತೆಯ ಇಕ್ಕೆಲಗಳಲ್ಲಿ ಬಿಸಾಡಲಾಗಿದೆ.
ಪ್ರವಾಸಿಗರ ಸ್ವರ್ಗವೆಂದೇ ಹೆಸರಾದ ಮಡಿಕೇರಿಯಲ್ಲಿ ಈ ತೆರನಾದ ದೃಶ್ಯ ಸಾಮಾನ್ಯವಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಂಭವವೂ ಕೂಡ ದಟ್ಟವಾಗಿದೆ.

ಇನ್ನು ಪ್ರಕೃತಿ ಸೌಂದರ್ಯ ಸವಿಯುವ ನಿಟ್ಟಿನಲ್ಲಿ ಬರುವ ಪ್ರವಾಸಿಗರು ಹಾಗೂ ಪ್ರವಾಸೋದ್ಯಮದ ಹೆಸರಿನಲ್ಲಿ ವ್ಯಾಪಾರ ವಹಿವಾಟು ನಡೆಸುವ ವರ್ತಕರು ಎಲ್ಲೆಂದರಲ್ಲಿ ಬಿಸಾಡುವ ಅದರಲ್ಲಿಯೂ ಹರಿಯುವ ನೀರಿಗೆ ಹಾಕುವ ಪ್ಲಾಸ್ಟಿಕ್ ತ್ಯಾಜ್ಯಗಳು ಪ್ರಕೃತಿಯ ಅಂದವನ್ನು ಹಾಳುಗೆಡುವುತ್ತಿವೆ.
ಕಳೆದೆರೆಡು ತಿಂಗಳಿನಿಂದ ಜಲಪ್ರಳಯಕ್ಕೆ ತುತ್ತಾಗಿ ತುಂಬಿ ಹರಿಯುತ್ತಿದ್ದ ಹೊಳೆ ಪ್ರಸ್ತುತ ಇಳಿಮುಖವಾಗಿದೆ. ಹೊಳೆಯ ನೀರಿನಲ್ಲಿ ತೇಲಿ ಬಂದ ಮಾನವ ನಿರ್ಮಿತ ಕಸದ ರಾಶಿ ಅದರಲ್ಲಿಯೂ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚು ಸಂಗ್ರಹವಾಗಿದೆ.

ಪ್ಲಾಸ್ಟಿಕ್ ತ್ಯಾಜ್ಯದಿಂದ ಜಲಚರಗಳಿಗೆ ವಿಪರೀತ ಹಾನಿ ಉಂಟಾಗುತ್ತಿದ್ದು, ಅವುಗಳ ಆರೋಗ್ಯದ ಮೇಲೂ ಪರಿಣಾಮ ಬೀರಲಾರಂಭಿಸಿದೆ. ಅಲ್ಲದೇ ಸುಲಲಿತವಾಗಿ ನೀರಿನಲ್ಲಿ ಸಂಚರಿಸುವ ಆಮೆ ದೊಡ್ಡಗಾತ್ರದ ಮೀನುಗಳು ಸಹ ಮೃತಪಟ್ಟಿದೆ. ಆಹಾರದೊಂದಿಗೆ ಪ್ಲಾಸ್ಟಿಕ್ ಗಳು ಸಹ ಜಲಚರಗಳ ಹೊಟ್ಟೆ ಸೇರುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications