ಕುಶಾಲನಗರದ ಹೋಂ ಸ್ಟೇನಲ್ಲಿ ವೇಶ್ಯಾವಾಟಿಕೆ; ಇಬ್ಬರ ಬಂಧನ
ಮಡಿಕೇರಿ, ನವೆಂಬರ್ 4: ಪರ ಊರಿನಿಂದ ಮಹಿಳೆಯರನ್ನು ಕರೆಸಿ ಹೋಂ ಸ್ಟೇನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ.
ಕುಶಾಲನಗರದ ರಾಜೇಶ್ ಮತ್ತು ಮದಲಾಪುರದ ರಜನೀಕಾಂತ್ ಬಂಧಿತ ಆರೋಪಿಗಳು. ಇವರು ಕುಶಾಲನಗರದ ಹೋಂ ಸ್ಟೇವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕುಶಾಲನಗರದ ಸಿಪಿಐ ಮಹೇಶ್ ಅವರ ನೇತೃತ್ವದ ತಂಡ ದಾಳಿ ನಡೆಸಿದೆ. ಜಿಲ್ಲೆಯ ಗಂಧದ ಕೋಠಿಯಲ್ಲಿರುವ ಹೋಂ ಸ್ಟೇ ಮೇಲೆ ದಾಳಿ ನಡೆಸಿ ಬುಧವಾರ ಆರೋಪಿಗಳನ್ನು ಬಂಧಿಸಲಾಗಿದೆ.

ಇದೇ ಸಂದರ್ಭ ದಂಧೆಗೆ ಬಳಸಿಕೊಂಡಿದ್ದ ಮೈಸೂರು ಹಾಗೂ ಮಂಡ್ಯ ಜಿಲ್ಲೆ ಮೂಲದ ಮಹಿಳೆಯರನ್ನು ಪೊಲೀಸರು ರಕ್ಷಿಸಿದ್ದಾರೆ. ಹೊರ ಜಿಲ್ಲೆಗಳಿಂದ ಮಹಿಳೆಯರನ್ನು ಕುಶಾಲನಗರಕ್ಕೆ ಕರೆಸಿಕೊಳ್ಳುತ್ತಿದ್ದ ಆರೋಪಿಗಳು ನಂತರ ಅವರನ್ನು ವೇಶ್ಯಾವಾಟಿಕೆ ದಂಧೆಯಲ್ಲಿ ಬಳಸಿಕೊಳ್ಳುತ್ತಿದ್ದರು. ಹಲವು ದಿನಗಳಿಂದ ಈ ಕೃತ್ಯದಲ್ಲಿ ಆರೋಪಿಗಳು ತೊಡಗಿಕೊಂಡಿರುವುದಾಗಿ ತಿಳಿದುಬಂದಿದೆ. ಇಬ್ಬರು ಆರೋಪಿಗಳ ಮೇಲೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications