ಕೊಡಗಿನ ಪ್ರಕೃತಿ ವಿಕೋಪ ಎದುರಿಸಲು ಪೊಲೀಸ್ ಪಡೆ ಸನ್ನದ್ಧ!
ಮಡಿಕೇರಿ, ಮೇ.10:ಕೊಡಗಿನಲ್ಲಿ ಮಳೆಗಾಲ ಎಂದರೆ ಎಡೆಬಿಡದೆ ಸುರಿಯುತ್ತದೆ.ನಡು ಮಳೆಗಾಲದಲ್ಲಿ ನದಿ, ತೊರೆಗಳಲ್ಲಿ ಪ್ರವಾಹ ಬಂದು ಒಂದಷ್ಟು ತೊಂದರೆಗಳಾಗುತ್ತದೆ ಎಂಬುದಷ್ಟೇ ಇಲ್ಲಿನ ಜನಕ್ಕೆ ಗೊತ್ತಿತ್ತು. ಹೀಗಾಗಿ ಅದನ್ನು ಎದುರಿಸಿ ಬದುಕೋದನ್ನು ಇಲ್ಲಿನವರು ಕಲಿತುಕೊಂಡಿದ್ದರು.
ಆದರೆ ಕಳೆದ ಮಳೆಗಾಲ ಎಲ್ಲ ಮಳೆಗಾಲದಂತೆ ಇರಲಿಲ್ಲ. ಜನ ಯೋಚಿಸದಂತಹ ಅನಾಹುತವೊಂದು ನಡೆದು ಹೋಯಿತು. ಬೇರೆ ಕಡೆಗಳಲ್ಲಷ್ಟೆ ನಡೆಯುತ್ತಿದ್ದ ಜಲಪ್ರಳಯ ಕೊಡಗಿನಲ್ಲಿ ನಡೆದು ಹಲವರು ಆಸ್ತಿಪಾಸ್ತಿ ಕಳೆದುಕೊಂಡರಲ್ಲದೆ, ಜೀವ ಹಾನಿಯೂ ಸಂಭವಿಸಿತು. ಇದೀಗ ಮತ್ತೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪವನ್ನು ಎದುರಿಸಲು ಎಲ್ಲ ರೀತಿಯಲ್ಲೂ ಸನ್ನದ್ಧವಾಗಿರಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಈ ನಡುವೆ ಪೊಲೀಸ್ ಇಲಾಖೆಯಿಂದಲೂ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ವಿಪತ್ತನ್ನು ಎದುರಿಸುವ ಸಂಬಂಧ ಕಾರ್ಯಾಗಾರ ನಡೆಸಲಾಗುತ್ತಿದ್ದು, ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ಥರನ್ನು ಸ್ಥಳಾಂತರ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಒಂದು ವಾರಗಳ ಕಾಲ ತರಬೇತಿಯನ್ನು ನೀಡಲಾಗುತ್ತಿದೆ.

ಈ ಕುರಿತಂತೆ ಮಾತನಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅನಿರೀಕ್ಷಿತವಾಗಿ ಬರುವ ವಿಪತ್ತನ್ನು ಸಮಯ ಪ್ರಜ್ಞೆಯಿಂದ ಎದುರಿಸಬೇಕು. ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷ ಸಂಭವಿಸಿದ ದುರಂತವನ್ನು ಅರಿತುಕೊಂಡು ಈ ವರ್ಷ ಸಾಕಷ್ಟು ಸಿದ್ಧತೆ ಮಾಡಿಕೊಳ್ಳಬೇಕಿದೆ. ಆ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ 15 ಮಂದಿ ಪೊಲೀಸ್ ಸಿಬ್ಬಂದಿಗಳ ಮೂರು ತಂಡವನ್ನು ರಚಿಸಲಾಗಿದೆ. ಹಾಗೆಯೇ ಡಿಎಆರ್ನ ಒಂದು ತಂಡ ಸೇರಿದಂತೆ ಒಟ್ಟು 60 ಜನ ಸಿಬ್ಬಂದಿಗಳ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಉಪಸ್ಥಿತರಿದ್ದು, ಜಾಯ್ ಬೆಂಗಳೂರಿನ ಟೀಂ ಸೃಷ್ಠಿ ಅಡ್ವೆಂಚರ್ಸ್ ಸಂಸ್ಥೆಯ ತಜ್ಞರಾದ ಸಂತೋಷ್, ಅಕ್ಷಿತಾ ಮತ್ತು ಅನಘಾ ಹಾಗೂ ಪೂನಾದ ಆರ್.ಟಿ.ಜಿಯೋ ಮತ್ತು ಪರಿಸರ ಸಮನ್ವಯ ಸಂಸ್ಥೆಯ ಭೂವಿಜ್ಞಾನಿ ರೆನಿ ಥಾಮಸ್ ಅವರ ತಜ್ಞರ ತಂಡ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಿದ್ದಾರೆ.
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications