ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಯೋಧ್ಯೆ ರಾಮಮಂದಿರ ಕಟ್ಟುಕಥೆ; ಪ್ರಚೋದನಾಕಾರಿ ಭಿತ್ತಿ ಪತ್ರ ಕಂಡಿದ್ದೆಲ್ಲಿ?

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ನವೆಂಬರ್ 20: ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ನವೆಂಬರ್‌ 10ರಂದು ಸುಪ್ರೀಂ ಕೋರ್ಟು ಐತಿಹಾಸಿಕ ತೀರ್ಪನ್ನು ನೀಡಿದ್ದು, ದೇಶಾದ್ಯಂತ ವಿವಿಧ ಧಾರ್ಮಿಕ ಮುಖಂಡರು ಈ ತೀರ್ಪನ್ನು ಸ್ವಾಗತಿಸಿದರು. ದೇಶದಲ್ಲಿ ಕೋಮು ಸೌಹಾರ್ದತೆ ಬೆಸೆಯುವ ತೀರ್ಪು ಎಂದು ಶ್ಲಾಘಿಸಿದರು.

ಹರಿಹರಕ್ಕೂ ಅಯೋಧ್ಯೆ ಶ್ರೀರಾಮನಿಗೂ ಏನು ನಂಟು? ಪರಿಶೀಲನೆ ಶುರುಹರಿಹರಕ್ಕೂ ಅಯೋಧ್ಯೆ ಶ್ರೀರಾಮನಿಗೂ ಏನು ನಂಟು? ಪರಿಶೀಲನೆ ಶುರು

ಆದರೆ ಸುಂಟಿಕೊಪ್ಪದಲ್ಲಿ ಸಂಘಟನೆಯೊಂದು ಸಮಾಜದ ಶಾಂತಿ ಕದಡುವ ಉದ್ದೇಶದಿಂದ ತೀರ್ಪನ್ನು ವಿರೋಧಿಸುವಂತೆ ಕರೆ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.

Poster Opposing Ayodhya Verdict Circulated In Suntikoppa

ಕರಪತ್ರದ ಮೂಲಕ ಮನವಿ ಮಾಡಿದ್ದು, ಅದರಲ್ಲಿ ಬಾಬ್ರಿ ಮಸೀದಿ ತೀರ್ಪಿನಲ್ಲಿ ನ್ಯಾಯವನ್ನು ನಿರಾಕರಿಸಲಾಗಿದೆ, ವಿವಾದಿತ ಸ್ಥಳದಲ್ಲಿ ಯಾವುದೇ ಮಂದಿರ ಇರಲಿಲ್ಲ, ಅದು ಕಟ್ಟು ಕಥೆ ಎಂದು ಪ್ರತಿಪಾದಿಸಲಾಗಿದೆ. ಈ ಭಿತ್ತಿ ಪತ್ರಗಳನ್ನು ಸೋಮವಾರ ರಾತ್ರಿ ಸುಂಟಿಕೊಪ್ಪದ ಬಸ್‌ ತಂಗುದಾಣ ಮತ್ತು ಪಟ್ಟಣ ಪಂಚಾಯ್ತಿ ಕಚೇರಿಯ ಗೋಡೆಗಳ ಮೇಲೆ ಅಂಟಿಸಲಾಗಿದ್ದು, ವಿಷಯ ತಿಳಿದ ಕೂಡಲೇ ಸುಂಟಿಕೊಪ್ಪ ಗ್ರಾಮ ಪಂಚಾಯ್ತಿ ದೂರು ದಾಖಲಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತಿದ್ದಾರೆ.

English summary
An investigation has started in suntikoppa of madikeri regarding a poster calling for opposing the Ayodhya verdict aimed at disturbing the peace of the society
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X