ಕೊಡಗಿನಲ್ಲಿ ತಗ್ಗಿದ ಮಳೆ, ಭರ್ತಿಯಾಗದ ಹಾರಂಗಿ ಜಲಾಶಯ...
ಮಡಿಕೇರಿ, ಜುಲೈ 14: ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಣೆಯಾದ ಬೆನ್ನಲ್ಲೇ ಮಳೆಯ ಆರ್ಭಟ ತಗ್ಗಿದ್ದು, ಹಾರಂಗಿ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಇಳಿಕೆಯಾಗಿರುವುದರಿಂದ ಸದ್ಯಕ್ಕೆ ಭರ್ತಿಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ.
ಕಳೆದ ಕೆಲವು ದಿನಗಳ ಹಿಂದೆ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಇದರಿಂದ ಜಲಾಶಯದ ಒಳ ಹರಿವು ಹೆಚ್ಚಾಗಿತ್ತಲ್ಲದೇ, ನೀರಿನ ಮಟ್ಟದಲ್ಲಿಯೂ ಏರಿಕೆ ಕಂಡು ಬಂದಿತ್ತು. ಒಂದು ವೇಳೆ ಮಳೆ ಅದೇ ರೀತಿಯಲ್ಲಿ ಮುಂದುವರೆದಿದ್ದರೆ ಹಾರಂಗಿ ಜಲಾಶಯ ಇಷ್ಟರಲ್ಲಿಯೇ ಭರ್ತಿಯಾಗುತ್ತಿತ್ತು.
ಮಡಿಕೇರಿ ಮತ್ತು ಸೋಮವಾರಪೇಟೆಯ ಕೆಲವು ಭಾಗಗಳಲ್ಲಿ ಸುರಿವ ಮಳೆ ನೀರು ನೇರವಾಗಿ ಹರಿದು ಹಾರಂಗಿ ಜಲಾಶಯವನ್ನು ಸೇರುತ್ತಿದ್ದು, ಈಗ ಮಡಿಕೇರಿಯಲ್ಲಿ ಮಳೆ ಸುರಿಯದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದು ಬರುತ್ತಿಲ್ಲ.

ಗರಿಷ್ಠ 2,859 ಅಡಿ ಎತ್ತರದ ಹಾರಂಗಿ ಜಲಾಶಯದಲ್ಲಿ ಸದ್ಯ 2851.24 ಅಡಿಯಷ್ಟು ನೀರಿದ್ದು, ಭರ್ತಿಯಾಗಲು ಕೇವಲ 9 ಅಡಿಯಷ್ಟು ಬಾಕಿಯಿದೆ. ಒಳ ಹರಿವು ಕಡಿಮೆಯಾಗಿದ್ದು, ಕೇವಲ 917 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಈ ಪೈಕಿ 300 ಕ್ಯೂಸೆಕ್ ನೀರನ್ನು ನಾಲೆಗೆ ಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 2818.35 ಅಡಿಯಷ್ಟು ನೀರಿದ್ದುದನ್ನು ಸ್ಮರಿಸಬಹುದಾಗಿದೆ.
ಇದೀಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದ್ದು, ಒಂದು ದಿನದ ಅವಧಿಯಲ್ಲಿ ಸರಾಸರಿ 9.05 ಮಿ.ಮೀ ನಷ್ಟು ಮಳೆ ಸುರಿದಿದೆ. ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿವರೆಗೆ 595.14 ಮಿ.ಮೀ ಮಳೆ ಬಂದಿದೆ. ಇದು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ತುಸು ಹೆಚ್ಚು ಎನ್ನಬಹುದು.

ಭಾರೀ ಮಳೆ ಸುರಿಯುವ ಭಾಗಮಂಡಲದಲ್ಲಿಯೂ ಮಳೆಯ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಇದರಿಂದ ಕಾವೇರಿ ನದಿಯಲ್ಲಿ ನೀರು ಹರಿಯುವಿಕೆಯ ರಭಸ ಕಡಿಮೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಮಡಿಕೇರಿ ತಾಲೂಕಿನಲ್ಲಿ 935.62 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 506.24 ಮಿ.ಮೀ. ಸೋಮವಾರಪೇಟೆ ತಾಲೂಕಿನಲ್ಲಿ 343.55 ಮಿ.ಮೀ. ಮಳೆ ಸುರಿದಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ












Click it and Unblock the Notifications