"ಭಾಗಮಂಡಲ-ತಲಕಾವೇರಿ ಪವಿತ್ರ ಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ"
ಮಡಿಕೇರಿ. ಸೆಪ್ಟೆಂಬರ್ 13: ಭಾಗಮಂಡಲ ಹಾಗೂ ತಲಕಾವೇರಿ ತೀರ್ಥಕ್ಷೇತ್ರಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಧಾರ್ಮಿಕ ಕ್ಷೇತ್ರವನ್ನಾಗಿ ಮಾತ್ರ ಪರಿಗಣಿಸಿ ಆದೇಶ ಹೊರಡಿಸಲು ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ಕೊಡವ ಸಮಾಜಗಳ ಒಕ್ಕೂಟದ ಮಹಾಸಭೆಯಲ್ಲಿ ನಿರ್ಧರಿಸಲಾಗಿದೆ.
ಬಾಳುಗೋಡು ಕೊಡವ ಸಮಾಜದಲ್ಲಿ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
ಸಭೆಯಲ್ಲಿ ಕೊಡಗಿನ ಭಾಗಮಂಡಲ ಹಾಗೂ ತಲಕಾವೇರಿ ಪುಣ್ಯಕ್ಷೇತ್ರಗಳಲ್ಲಿ ಯಾವುದೇ ಕಾರಣಕ್ಕೂ ಮೋಜು-ಮಸ್ತಿಗೆ ಅವಕಾಶ ನೀಡಬಾರದು, ಇದು ಪ್ರವಾಸಿ ತಾಣವಲ್ಲ ಎಂಬ ಬಗ್ಗೆ ಸರಕಾರಕ್ಕೆ ಮನವಿ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಯಿತು.

ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಒಕ್ಕೂಟದ ನೇತೃತ್ವದಲ್ಲಿ ನಿಯೋಗ ತೆರಳಿ ಈ ಸ್ಥಾನವನ್ನು ಧಾರ್ಮಿಕ ಕ್ಷೇತ್ರವನ್ನಾಗಿಯೇ ಉಳಿಸಲು ಶ್ರಮಿಸುವಂತೆ ಮನವಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ ಕಾವೇರಿ ಸಂಕ್ರಮಣಕ್ಕಿಂತ ಮುಂಚಿತವಾಗಿ ಕೊಡಗಿನಲ್ಲಿರುವ ಎಲ್ಲಾ ಜನಾಂಗದ ಮುಖಂಡರ ಸಭೆ ಕರೆದು ಒಮ್ಮತದ ತೀರ್ಮಾನವನ್ನು ಕೈಗೊಳ್ಳುವಂತೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು.
ಕೊಡಗಿನ ಎಲ್ಲಾ ಜನಾಂಗದವರ ಮುಖಂಡರ ಸಭೆ ನಡೆಸಿ ಅಭಿಪ್ರಾಯ ಪಡೆಯುವುದರೊಂದಿಗೆ ಧಾರ್ಮಿಕ ಕ್ಷೇತ್ರದಿಂದ 8 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೆಸಾರ್ಟ್, ಹೋಂಸ್ಟೆಗಳಿಗೆ ಅವಕಾಶ ನೀಡದಿರಲು ಒತ್ತಾಯಿಸಲು ನಿರ್ಧರಿಸಲಾಯಿತು.

ಕೋವಿಡ್-19 ಮಹಾಮಾರಿಯಿಂದ ಕೊಡಗು ಜಿಲ್ಲೆಯ ಜನತೆ ಸಂಕಷ್ಟದಲ್ಲಿದ್ದು, ಮದುವೆ, ಸಭೆ-ಸಮಾರಂಭಗಳು ಮುಂದೂಡಲ್ಪಟ್ಟಿದೆ. ಆದ್ದರಿಂದ ಮುಂದಿನ ದಿನದಲ್ಲಿ ಸಮಾಜದ ಬಾಡಿಗೆಯನ್ನು ಕಡಿಮೆ ಮಾಡಿ ಜನತೆಗೆ ಸಹಕಾರ ನೀಡಲು ತೀರ್ಮಾನಿಸಲಾಯಿತು. ಜೊತೆಗೆ ಕೋವಿಡ್ ಹಿನ್ನೆಲೆ ಪ್ರತಿವರ್ಷ ನಡೆಸಿಕೊಂಡು ಬರಲಾಗುತ್ತಿದ್ದ ಕೊಡವ ನಮ್ಮೆ (ಹಬ್ಬ)ಯನ್ನು ಈ ವರ್ಷ ನಡೆಸದಿರಲು ಸಭೆಯಲ್ಲಿ ನಿರ್ಧರಿಸಲಾಯಿತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications