ಕೊರೊನಾ ಮುಕ್ತ ಗ್ರಾಮ ಪಂಚಾಯತ್ಗೆ 5 ಲಕ್ಷ ರೂ.
ಮಡಿಕೇರಿ, ಮೇ 22: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ 'ಕೊರೊನಾ ಮುಕ್ತ ಗ್ರಾಮ' ಮಾಡುವ ಗ್ರಾ.ಪಂಗೆ ಶಾಸಕರ ನಿಧಿಯಡಿ 5 ಲಕ್ಷ ರೂ ನೀಡಲಾಗುವುದು ಎಂದು ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರು ಪ್ರಕಟಿಸಿದ್ದಾರೆ.
ಮಡಿಕೇರಿ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ, ಅಲ್ಲಿನ ಕೋವಿಡ್- 19 ಸೋಂಕಿತರಿಗೆ ""ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗುತ್ತಿದೆ, ಜೊತೆಗೆ ಸಾವಿನ ಪ್ರಮಾಣವು ಇಳಿಮುಖವಾಗುತ್ತಿದೆ. ಆದರೆ ಇಷ್ಟಕ್ಕೆ ಸಮಾಧಾನ ಪಡದೆ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಲಾಕ್ಡೌನ್ನ್ನು ಮುಂದುವರೆಸುವುದು ಒಳ್ಳೆಯದು'' ಎಂದು ಎಂ.ಪಿ ಅಪ್ಪಚ್ಚು ರಂಜನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೆಲವು ಸುಧಾರಣೆ ಮತ್ತು ಬದಲಾವಣೆ ಮಾಡಲಾಗಿದೆ. ತಜ್ಞ ವೈದ್ಯರು, ಶ್ರುಶ್ರೂಷಕರು, ಇತರೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೊಡಗು ಜಿಲ್ಲೆಯ ಹೊರಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೊಡಗು ಜಿಲ್ಲೆಯ ಹಲವು ವೈದ್ಯರು ತವರು ಜಿಲ್ಲೆಗೆ ಆಗಮಿಸಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾದ ಸೋಂಕಿತರ ಮೊಬೈಲ್ ಮತ್ತು ಹಣ ಕಳೆದಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಸಂಬಂಧಪಟ್ಟವರು ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.

ಕೋವಿಡ್-19 ಮಹಾಮಾರಿ ಇಂದಿಗೆ ಅಥವಾ ನಾಳೆಗೆ ತೊಲಗುವುದಿಲ್ಲ, ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ಜ್ವರ, ಕೆಮ್ಮು, ನೆಗಡಿ, ತಲೆನೋವು ಇತರೆ ತೊಂದರೆ ಉಂಟಾದಲ್ಲಿ ತಕ್ಷಣವೇ ಹತ್ತಿರದ ವೈದ್ಯರನ್ನು ಭೇಟಿ ಮಾಡಿ ಆರೋಗ್ಯ ಪರೀಕ್ಷಿಸಿಕೊಳ್ಳಬೇಕು. ಆದರೆ ಆತಂಕಕ್ಕೆ ತುತ್ತಾಗಬಾರದು ಎಂದು ಮನವಿ ಮಾಡಿದರು.
ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಿದಾಗ ಮಾತ್ರ ಕೋವಿಡ್- 19 ದೂರ ಇರಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ, ಸೋಂಕಿತರು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಾಗಿ ಔಷಧಿ ಪಡೆಯಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಸಲಹೆ ನೀಡಿದರು.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿರುವ ಸೋಂಕಿತರಿಗೆ ಪೂರೈಕೆಯಾಗುವ ಆಹಾರ ತಯಾರಿಸುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಶಾಸಕರು, ಅಲ್ಲಿನ ವ್ಯವಸ್ಥೆಯನ್ನು ಗಮನಿಸಿದರು. ಸಾಂಬಾರು ಸವಿದ ಶಾಸಕರು ಉತ್ತಮ ಗುಣಮಟ್ಟದ ಆಹಾರವನ್ನು ಕಾಲಮಿತಿಯೊಳಗೆ ಬಿಸಿಯಾಗಿ ಒದಗಿಸಬೇಕು. ನಿಯಮಿತವಾಗಿ ಆಹಾರ ಪೂರೈಸಿದ್ದಲ್ಲಿ ಮಾನಸಿಕವಾಗಿ ಸೋಂಕಿತರು ನೆಮ್ಮದಿಯಾಗಿ ಇರಲು ಸಾಧ್ಯವೆಂದರು.

Recommended Video
ಆಹಾರ ತಯಾರಿಸುವಾಗ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಅಡುಗೆ ಮಾಡಬೇಕು. ಸ್ವಚ್ಛತೆ ಕಾಪಾಡಬೇಕು. ಆಹಾರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಗಮನಹರಿಸಬೇಕು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications