ಹಾರಂಗಿ-ಕಾವೇರಿ ಹೂಳೆತ್ತಲು 130 ಕೋಟಿ ರೂ. ವೆಚ್ಚದ ಯೋಜನೆ: ಸಚಿವ ಜಾರಕಿಹೊಳಿ
ಮಡಿಕೇರಿ, ಸೆಪ್ಟೆಂಬರ್ 23: ಕೊಡಗು ಜಿಲ್ಲೆಯಲ್ಲಿ 2018ನೇ ಸಾಲಿನಲ್ಲಿ ಉಂಟಾದ ಜಲಪ್ರಳಯದಿಂದ ಹಾರಂಗಿ ಹಿನ್ನೀರಿನಲ್ಲಿ ಮತ್ತು ಮಾದಾಪುರ ಹಟ್ಟಿಹೊಳೆ ಹಾಗೂ ಕಾವೇರಿ ಹೊಳೆಯಲ್ಲಿ ತುಂಬಿರುವ ಹೂಳು ತೆಗೆಯಲು 130.33 ಕೋಟಿ ರೂ. ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಕ್ರಿಯೆ ಪರಿಶೀಲನೆಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಡಿಕೇರಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಾರಂಗಿ ಜಲಾಶಯಕ್ಕೆ ಹೂಳು ತುಂಬುವುದನ್ನು ತಡೆಗಟ್ಟುವ ಸಲುವಾಗಿ ಜಲಾನಯನ ಪ್ರದೇಶ, ನದಿ ಪಾತ್ರದ ಪುನಶ್ಚೇತನ ಹಾಗೂ ರಕ್ಷಣಾತ್ಮಕ ಕಾಮಗಾರಿಯ 130.33 ಕೋಟಿ ರೂ. ಮೊತ್ತದ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡುವ ಪ್ರಕ್ರಿಯೆ ಪರಿಶೀಲನೆಯಲ್ಲಿದೆ.
ಕಾವೇರಿ ಹೊಳೆಯಲ್ಲಿ ತುಂಬಿರುವ ಹೂಳು ತೆಗೆಯಲು 2019-20ನೇ ಸಾಲಿನಲ್ಲಿ ಜಿಲ್ಲಾಧಿಕಾರಿಗಳು ಎನ್.ಡಿ.ಆರ್.ಎಫ್ ಮೂಲಕ 88 ಲಕ್ಷ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಪ್ರಸ್ತುತ ನದಿಯಲ್ಲಿ ಪ್ರವಾಹ ಇರುವ ಕಾರಣ ಮಳೆಗಾಲ ಮುಗಿದ ಕೂಡಲೇ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದರು.

ಹೇಮಾವತಿ ಹಿನ್ನೀರು ಸಂತ್ರಸ್ತರಿಗೆ ಮೂಲಸೌಕರ್ಯ ನೀಡಲಾಗುತ್ತಿದೆ. ಅಂತೆಯೇ ಕೊಡ್ಲಿಪೇಟೆ ಹೋಬಳಿಯಲ್ಲಿನ ಹೇಮಾವತಿ ಹಿನ್ನೀರಿನಿಂದ ಭೂಮಿ ಕಳೆದುಕೊಂಡ 25 ಗ್ರಾಮಗಳ ರೈತರ 1,865 ಎಕರೆ ಪ್ರದೇಶದ ಜಮೀನು ಹೇಮಾವತಿ ಹಿನ್ನೀರಿನಿಂದ ಮುಳುಗಡೆಗೊಂಡ ಕಾರಣ, ಆ ರೈತರಿಗೆ ಪರಿಹಾರವಾಗಿ ಬದಲಿ ಜಮೀನನ್ನು ನೀಡಲಾಗಿದೆ.
ಹಾಗೆಯೇ ಆ 25 ಗ್ರಾಮಗಳ ನಾಗರಿಕರಿಗೆ ಗ್ರಾಮಗಳಲ್ಲಿನ ಅಗತ್ಯ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ ನಿರ್ಮಾಣ, ಸಮುದಾಯ ಭವನ, ಧಾರ್ಮಿಕ ಪೂಜಾ ಕೇಂದ್ರಗಳ ನಿರ್ಮಾಣ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು 2010-11 ನೇ ಸಾಲಿನಿಂದಲೇ ಕಲ್ಪಿಸಲಾಗುತ್ತಿದೆ. 2018-19 ನೇ ಸಾಲಿನವರೆಗೆ ಒಟ್ಟು 83.45 ಕೋಟಿ ರು. ಮೊತ್ತದ ಕಾಮಗಾರಿಗಳನ್ನು ಜಾರಿಗೊಳಿಸಲಾಗಿದೆ ಎಂದು ವಿವರಿಸಿದರು.

2019-20 ಸಾಲಿನಲ್ಲಿ ಕೊಡ್ಲಿಪೇಟೆ ಹೋಬಳಿಯ 25 ಗ್ರಾಮಗಳಲ್ಲಿ ಮೂಲಸೌಲಭ್ಯ ಕಲ್ಪಿಸುವ ಕಾಮಗಾರಿಗಳಿಗಾಗಿ 34.53 ಕೋಟಿ ರು.ಗಳಿಗೆ ಅನುಮೋದನೆ ನೀಡಲಾಗಿದ್ದು. ಈ ಪೈಕಿ 16.53 ಕೋಟಿ ರು. ಮೊತ್ತದ ಕಾಮಗಾರಿಗಳು ಪೂರ್ಣಗೊಳ್ಳುವ ಹಂತದಲ್ಲಿವೆ. ಉಳಿದ 18 ಕೋಟಿ ರೂ. ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲಿವೆ ಎಂದು ಸಚಿವರು ಉತ್ತರಿಸಿದರು.
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications