ಕೊಡಗಿನಲ್ಲಿ ಯೋಧನ ಪ್ರತಿಮೆ; ರಾಷ್ಟ್ರ ಲಾಂಛನ ನಿರ್ಮಾಣ
ಕೊಡಗಿನ ಕಾವೇರಿ ಜನ್ಮಭೂಮಿ ಟ್ರಸ್ಟ್ ಚೇರಂಗಾಲದ ತಳಾರಬಾಣೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 10ನೇ ವರ್ಷದ ತವರೂರ ಕೂಟದ ನೆನಪಲ್ಲಿ ಈ ಪುತ್ಥಳಿಯನ್ನು ನಿರ್ಮಿಸಿದೆ.
ಮಡಿಕೇರಿ: ರಾಷ್ಟ್ರದ ಗಡಿಗಳನ್ನು ಪ್ರಾಣದ ಹಂಗು ತೊರೆದು ರಕ್ಷಿಸುವ ಸೈನಿಕನ ಪೂರ್ಣ ಪ್ರಮಾಣದ ಯೋಧನ ಪ್ರತಿಮೆಯನ್ನು ಹೊಂದಿದ ಯುದ್ಧ ಸ್ಮಾರಕ ಮತ್ತು ರಾಷ್ಟ್ರ ಲಾಂಛನ ಸ್ತಂಭವನ್ನು ತಲಕಾವೇರಿ ಬಳಿಯ ಚೇರಂಗಾಲ ಗ್ರಾಮದಲ್ಲಿ ನಿರ್ಮಿಸಲಾಗಿದೆ.
ಇದನ್ನು ಕೊಡಗಿನ ಕಾವೇರಿ ಜನ್ಮಭೂಮಿ ಟ್ರಸ್ಟ್ ಚೇರಂಗಾಲದ ತಳಾರಬಾಣೆಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ 10ನೇ ವರ್ಷದ ತವರೂರ ಕೂಟದ ನೆನಪಲ್ಲಿ ನಿರ್ಮಿಸಿದೆ.

ಯುದ್ಧ ಸ್ಮಾರಕದ ಸೈನಿಕನ ಪ್ರತಿಮೆಯನ್ನು ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ, ರಾಷ್ಟ್ರ ಲಾಂಛನ ಸ್ತಂಭವನ್ನು ಟೊಯೋಟೋ ಕಿರ್ಲೋಸ್ಕರ್ ಸಂಸ್ಥೆಯ ಮಾಜಿ ಉಪ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಕೆ. ಸ್ವಾಮಿ ಅವರು ಇತ್ತೀಚೆಗೆ ಲೋಕಾರ್ಪಣೆಗೊಳಿಸಿದರು.
ನಿವೃತ್ತ ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ ಮಾತನಾಡಿ ಯುದ್ಧ ಸಂದರ್ಭದಲ್ಲಿ ಮಾತ್ರ ದೇವರು, ಯೋಧರನ್ನು ನಾವು ಜ್ಞಾಪಿಸಿಕೊಳ್ಳುತ್ತೇವೆ. ಆ ನಂತರ ದೇವರನ್ನು ಹಾಗೂ ಯೋಧರನ್ನು ಮರೆಯುತ್ತೇವೆಂದು ವಿಷಾದಿಸಿದರಲ್ಲದೆ, ಇಂತಹ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ನಾವು ಮುನ್ನಡೆಯಬೇಕಾಗಿದೆ. ಈ ಪರಿಸ್ಥಿತಿಗಳಲ್ಲೂ ಸೈನ್ಯದ ಮೂರು ವಿಭಾಗಗಳನ್ನು ಪ್ರತಿನಿಧಿಸುವ ಯೋಧನ ಸ್ಮಾರಕವನ್ನು ಗ್ರಾಮೀಣ ಪ್ರದೇಶದಲ್ಲಿ ಸ್ಥಾಪಿಸಿದಕ್ಕೆ ಶ್ಲಾಘಿಸಿದರು.

ಕಾವೇರಿ ಜನಿಸಿದ ಕೊಡಗಿನಲ್ಲಿ ಭತ್ತದ ಗದ್ದೆಗಳು ಇದೀಗ ಮನೆ ನಿವೇಶನಗಳಾಗುವ ಮೂಲಕ ಪರಿಸರಕ್ಕೆ ಮಾರಕವುಂಟಾಗುತ್ತಿದೆ. ಇಷ್ಟು ಸಾಕಾಗದೆ ಇದೀಗ ರೈಲ್ವೆ, ಚತುಷ್ಪಥ ರಸ್ತೆಗಳಂತಹ ಯೋಜನೆಗಳು ಬರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು, ಇವುಗಳ ನಡುವೆ ಮುಂದಿನ ಪೀಳಿಗೆಗೆ ಕೊಡಗಿನ ಪರಿಸರವನ್ನು ರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ ಕಿವಿ ಮಾತು ಹೇಳಿದರು.

ಲೆಫ್ಟಿನೆಂಟ್ ಜನರಲ್ ಕದಂಬಿ, ಮಡಿಕೇರಿ ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಮಡಿಕೇರಿ ತಾಪಂ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಉದ್ಯಮಿ ರಮೇಶ್ ಜಿ. ಪಾಟೀಲ್, ಕಾವೇರಿ ಜನ್ಮಭೂಮಿ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಂ.ಸಿ. ರವಿ ಕುಮಾರ್ ಇನ್ನಿತರರು ಇದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications