ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಿಯಲು ಹಣ ಕೊಟ್ಟಿಲ್ಲವೆಂದು ಮಡಿಕೇರಿಯಲ್ಲಿ ತಂದೆಯನ್ನೇ ಕೊಲೆಗೈದ ಮಗ

By ಮಡಿಕೇರಿ ಪ್ರತಿನಿಧಿ
|
Google Oneindia Kannada News

ಮಡಿಕೇರಿ, ಜನವರಿ 19: ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ, ತನಗೆ ಕುಡಿಯಲು ಹಣ ನೀಡಲಿಲ್ಲವೆಂದು ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.

ಸೋಮವಾರಪೇಟೆ ಸಮೀಪದ ಗೋಣಿಮರೂರು ಗ್ರಾಮದಲ್ಲಿ ಲೋಕೇಶ ಎಂಬಾತ ತನಗೆ ಕುಡಿಯಲು ಹಣ ನೀಡಬೇಕೆಂದು ತಂದೆ ತಾಯಿ ಮೇಲೆ ಹಲ್ಲೆ ಮಾಡಿದ್ದು, ತಂದೆ ಸಾವನ್ನಪ್ಪಿದ್ದಾರೆ.

ಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಗೆ ಗಲ್ಲು ಶಿಕ್ಷೆ

ಜೇನುಕುರುಬರ ಕರಿಯಪ್ಪ (46) ಎಂಬುವವರೇ ಮಗನಿಂದ ಹತ್ಯೆಗೀಡಾದ ದುರ್ದೈವಿ. ತಾಯಿ ಲೀಲಾ ಎಂಬುವವರು ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 Son Murdered His Father For Not Giving Money To Drink Alcohol In Madikeri

ಆರೋಪಿ ಲೋಕೇಶ್ ಶುಕ್ರವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದು ತಂದೆ ತಾಯಿ ಬಳಿ ಕುಡಿಯಲು ಹಣಕ್ಕಾಗಿ ಪೀಡಿಸಿದ್ದಾನೆ. ಆದರೆ ಹಣ ಕೊಡಲು ಅವರು ಒಪ್ಪದಿದ್ದಾಗ ಮರದ ತುಂಡಿನಿಂದ ಇಬ್ಬರ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ತಂದೆ ಕರಿಯಪ್ಪರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಯಿ ಲೀಲಾ ಅವರನ್ನು ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಸೇರಿಸಲಾಗಿದೆ.

ಒಂದು ಕೊಲೆ ಯತ್ನ: ಹಿಂದಿನ ಆರು ಪ್ರಕರಣಗಳು ರೀ ಓಪನ್ಒಂದು ಕೊಲೆ ಯತ್ನ: ಹಿಂದಿನ ಆರು ಪ್ರಕರಣಗಳು ರೀ ಓಪನ್

ಘಟನೆ ನಂತರ ತಲೆಮರೆಸಿಕೊಂಡಿದ್ದ ಲೋಕೇಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

English summary
Person killed his father for not giving money to drink alcohol. This incident happened in Gonimarooru village near somavarapete in madikeri
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X