ಕೇರಳ, ಕೊಡಗು ಪ್ರವಾಹ ಪೀಡಿತರ ನೆರವಿಗೆ ಶ್ರೀ ರವಿಶಂಕರ್ ಗುರೂಜಿ
ಬೆಂಗಳೂರು, ಆಗಸ್ಟ್22: ಪ್ರವಾಹ ಪೀಡಿತ ಕೊಡಗು ಜನರ ನೆರವಿಗೆ ಆರ್ಟ್ ಆಫ್ ಲಿವಿಂಗ್ ಮುಂದಾಗಿದೆ.ಭಾರತದ ಎಲ್ಲಾ ಕಡೆಗಳಿಂದಲೂ 60 ಲಾರಿಗಳಲ್ಲಿ ಪರಿಹಾರ ವಸ್ತುಗಳನ್ನು ಕೇರಳಕ್ಕೆ ಕಳುಹಿಸಿದೆ.
ಕೊಡಗಿಗೂ ಇದೇ ರೀತಿಯ ಪರಿಹಾರ ವಸ್ತುಗಳನ್ನು ಆರ್ಟ್ ಆಫ್ ಲಿವಿಂಗ್ ವತಿಯಿಂದ ಕಳುಹಿಸಿಕೊಡಲು ವೇಗವಾಗಿ ಸಿದ್ಧತೆ ಮಾಡಲಾಗುತ್ತಿದೆ. ಇದರಲ್ಲಿ 9.35 ಕೋಟಿಗಳಷ್ಟು ಬೆಲೆಬಾಳುವ 500 ಟನ್ಗಳಷ್ಟು ಅತ್ಯಗತ್ಯ ವಸ್ತುಗಳಾದ ಬಟ್ಟೆಗಳು, ಔಷಧಿಗಳು, ಆಹಾರ, ನೀರು, ಶೌಚದ ವಸ್ತುಗಳು ಸೇರಿವೆ.
ಆರ್ಟ್ ಆಫ್ ಲಿವಿಂಗ್ ನ 100ಕ್ಕಿಂತಲೂ ಹೆಚ್ಚು ಯುವ ಸೇವಕರಾದ ಯುವಾಚಾರ್ಯರು ಎಡೆಬಿಡದೆ ಹಗಲು ಇರುಳು ಕೇರಳದಲ್ಲಿ ಸೇವೆ ಮಾಡುತ್ತಿದ್ದಾರೆ ಮತ್ತು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು 500 ಟನ್ಗಳಷ್ಟು ಪರಿಹಾರ ವಸ್ತುಗಳನ್ನು ಒಳಗೊಂಡ 60 ಲಾರಿಗಳನ್ನು ಕೇರಳಕ್ಕೆ ಕಳುಹಿಸಿಕೊಟ್ಟಿದೆ.

ಇವುಗಳನ್ನು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಕೇಂದ್ರ, ಚೆನ್ನೈ, ಹೈದರಾಬಾದ್, ನಾಗ್ಪುರ್, ಕೊಲ್ಕತ್ತಾ ಇನ್ನಿತರೆ ಸ್ಥಳಗಳಿಂದ ಕಳುಹಿಸಿಕೊಡಲಾಗಿದೆ. ಕೊಡಗು ಜಿಲ್ಲೆಯೂ ಅಪಾರ ಹಾನಿಯಿಂದ ತತ್ತರಿಸಿ ಹೋಗಿರುವ ಹಿನ್ನೆಲೆಯಲ್ಲಿ ಜನರಿಗೆ ಆಸರೆಯನ್ನು ಒದಗಿಸಲು ಭರದಿಂದ ಪರಿಹಾರ ವಸ್ತುಗಳನ್ನು ಶೇಖರಿಸಲಾಗುತ್ತಿದೆ . ಮಳೆ ಇದೀಗ ಕಡಿಮೆಯಾಗಿರುವುದರಿಂದ ಆರ್ಟ್ ಆಫ್ ಲಿವಿಂಗ್ ನ ಸ್ವಯಂಸೇವಕರು ಅಲ್ಲಿಗೆ ತೆರಳಿ ಪುನರ್ವಸತಿ ಕಾರ್ಯ ದಲ್ಲಿ ಕೈಜೋಡಿಸಲಿದ್ದಾರೆ.
ಪ್ರಾಣಹಾನಿ ಮತ್ತು ಅಪಾರ ಆಸ್ತಿಪಾಸ್ತಿಗಳ ನಷ್ಟದ ಹಿನ್ನೆಲೆಯಲ್ಲಿ ಸ್ವಯಂಸೇವಕರು ಕೇರಳದ 14 ಜಿಲ್ಲೆಗಳಲ್ಲೂ ಕಾರ್ಯಪ್ರವೃತ್ತರಾಗಿ 50,000ಕ್ಕಿಂತಲೂ ಹೆಚ್ಚು ಜನರನ್ನು ತಲುಪಿರುವುದಲ್ಲದೆ ಅವರನ್ನು ಸುರಕ್ಷಿತವಾದ ಸ್ಥಳಗಳಿಗೆ ಕೊಂಡೊಯ್ಯಲಾಗಿದೆ. ಅವರೆಲ್ಲರಿಗೂ ಊಟ, ನೀರು, ಬಟ್ಟೆ, ಮತ್ತಿನ್ನಿತರ ಅಗತ್ಯ ಸೌಲಭ್ಯಗಳನ್ನು ನೀಡಲಾಗುತ್ತಿದೆ. ವಾರವಿಡೀ ಉಭಯ ರಾಜ್ಯಗಳ ಭಾಧಿತ ಪ್ರದೇಶಗಳಿಗೆ ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲಾಗುವುದು. ಇದಕ್ಕಾಗಿ ಬೆಂಗಳೂರು ನಗರದ ಹಲವೆಡೆ ಶೇಖರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ ಕೈಜೋಡಿಸಲು ಬಯಸುವವರು tiny.cc/floodreliefಗೆ ಭೇಟಿ ನೀಡಬಹುದು ಅಥವಾ ಕೆಳಗಿನ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications