ಮಡಿಕೇರಿ ಹೋಂ ಸ್ಟೇ ದಂಧೆಗೆ ಬೀಳಲಿದೆ ಮೂಗುದಾರ!
ಮಡಿಕೇರಿ, ಜುಲೈ 20: ಕೊಡಗಿನಲ್ಲಿ ಹೆಚ್ಚುತ್ತಿರುವ ಹೋಂಸ್ಟೇ ಏಜೆಂಟರ ದಬ್ಬಾಳಿಕೆ ಮತ್ತು ಅಕ್ರಮ ಚಟುವಟಿಕೆಗಳ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಮಡಿಕೇರಿ ಎಸ್ಪಿ ರಾಜೇಂದ್ರ ಪ್ರಸಾದ್ ಮುಂದಾಗಿದ್ದಾರೆ.
ಮಡಿಕೇರಿಗೆ ಗೆ ಆಗಮಿಸುವ ಪ್ರವಾಸಿಗರ ವಾಹನಗಳನ್ನು ಅಡ್ಡಗಟ್ಟಿ ಕೆಲವು ಹೋಂಸ್ಟೇ ಏಜೆಂಟ್ಗಳು ದಬ್ಬಾಳಿಕೆ ನಡೆಸುತ್ತಿದ್ದು ಇದಕ್ಕೆಲ್ಲ ಶೀಘ್ರವೇ ಕಡಿವಾಣ ಹಾಕಲಾಗುವುದಾಗಿ ಅವರು ಹೇಳಿದ್ದಾರೆ.

ಮಡಿಕೇರಿ ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ನಗರದ ರೋಟರಿ ಸಭಾಂಗಣದಲ್ಲಿ ಜುಲೈ 19 ರಂದು ನಡೆದ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೋಂಸ್ಟೇ ವ್ಯವಸ್ಥೆಗಳು ಹಾದಿ ತಪ್ಪುತ್ತಿರುವುದನ್ನು ಉಲ್ಲೇಖಿಸದರಲ್ಲದೆ, ಕೊಡಗಿನ ಸಂಸ್ಕೃತಿ ಹಾಗೂ ಆಹಾರ ಪದ್ಧತಿಯನ್ನು ಪರಿಚಯಿಸುವ ಮೂಲಕ ಪ್ರವಾಸಿಗರಿಗೆ ಉತ್ತಮ ಆತಿಥ್ಯವನ್ನು ನೀಡುವ ವ್ಯವಸ್ಥೆಯಾಗಿ ಗಮನ ಸೆಳೆಯಬೇಕಾಗಿದ್ದ ಹೋಂಸ್ಟೇಗಳು ಇಂದು ವ್ಯಾಪಾರೀಕರಣಗೊಂಡಿವೆ, ಅಲ್ಲದೆ ಅನೈತಿಕ ಚಟುವಟಿಕೆಗಳಿಗೆ ದಾರಿ ಮಾಡಿಕೊಡುತ್ತಿರುವುದು ಆತಂಕಕಾರಿಯಾಗಿದೆ. ಇದಕ್ಕೆ ಕಡಿವಾಣ ಹಾಕದೆ ಹೋದರೆ ಉಳಿಗಾಲವಿಲ್ಲ ಎಂದ ಅವರು ತಮ್ಮ ವಾಹನವನ್ನು ತಡೆದ ಬಗ್ಗೆಯೂ ವಿವರಿಸಿದರು.
ರಾತ್ರಿ 12 ಗಂಟೆ ಸುಮಾರಿಗೆ ನಗರದ ಕಾರ್ಯಪ್ಪ ವೃತ್ತದ ಬಳಿ ನಾನು ಹಾಗೂ ಸ್ನೇಹಿತ ಖಾಸಗಿ ಕಾರಿನಲ್ಲಿ ಬರುತ್ತಿರುವಾಗ ಹೋಂ ಸ್ಟೇ ಮಾಲೀಕರು ವಾಹನವನ್ನು ತಡೆದಿದ್ದಾರೆ. ಹೋಂಸ್ಟೇ ಬೇಕೆ ಎಂದು ವಿಚಾರಿಸಿ ಅಬ್ಬಿಫಾಲ್ಸ್ ಬಳಿಯಲ್ಲಿರುವ ಹೋ ಸ್ಟೇಗೆ ಆಹ್ವಾನಿಸಿದ್ದಾರೆ. ಮಧ್ಯರಾತ್ರಿಯಲ್ಲಿ ವಾಹನಕ್ಕೆ ಅಡ್ಡಹಾಕಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ತಾನು ಎಸ್ಪಿ ಎಂದು ತಿಳಿದಾಗ ಆತ ಅಲ್ಲಿಂದ ತೆರಳಿದ್ದಾನೆ.

ಮಧ್ಯ ರಾತ್ರಿಯಲ್ಲಿ ಕೂಡ ಹೋಂ ಸ್ಟೇ ಏಜೆಂಟ್ ದಂಧೆ ನಡೆಯುತ್ತಿದ್ದು, ಪ್ರವಾಸಿಗರಿಗೆ ಕಿರಿ ಕಿರಿ ಎನಿಸಿದೆ. ಈ ರೀತಿಯ ಬೆಳವಣಿಗೆಗಳು ತಪ್ಪು ಸಂದೇಶವನ್ನು ರವಾನಿಸುತ್ತಿದ್ದು, ಕೊಡಗಿನ ಗೌರವಕ್ಕೆ ಧಕ್ಕೆಯಾಗುತ್ತಿದೆ. ಈಗಾಗಲೇ ವೆಬ್ಸೈಟ್ ಮೂಲಕ ನಡೆಯುತ್ತಿದ್ದ ಹೆಣ್ಣು ಮಕ್ಕಳ ದಂಧೆ ಮತ್ತು ಹನಿ ಟ್ರ್ಯಾಪ್ ಗಳಂತಹ ಪ್ರಕರಣಗಳಿಗೆ ಕಡಿವಾಣ ಹಾಕಲಾಗಿದೆ. ಇನ್ನು ಮುಂದೆ ಹೋಂಸ್ಟೇ ಏಜೆಂಟ್ ದಂಧೆ ವಿರುದ್ಧವೂ ದೂರು ದಾಖಲಿಸಿಕೊಂಡು ಕಠಿಣ ಕ್ರಮ ಕೈಗೊಳ್ಳುವ ಮೂಲಕ ದಂಧೆಗೆ ಕಡಿವಾಣ ಹಾಕಲಾಗುವುದೆಂದು ಎಸ್ಪಿ ಭರವಸೆ ನೀಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications