ಸುಂಟಿಕೊಪ್ಪ ಸರಕಾರಿ ಶಾಲೆ ಅಂದರೆ ಓಪನ್ ಬಾರು, ಮಜಾ ಜೋರು!
ಮಡಿಕೇರಿ, ಜನವರಿ 30: ಕೆಲವು ಪುಂಡ-ಪೋಕರಿಗಳು ಮದ್ಯಪಾನ, ಧೂಮಪಾನಕ್ಕಾಗಿ ರಾತ್ರಿ ಹೊತ್ತು ಸರಕಾರಿ ಶಾಲೆಯನ್ನು ಬಳಸಿಕೊಂಡು, ಇಡೀ ವಾತಾವರಣವನ್ನೇ ಗಬ್ಬೆಬ್ಬಿಸುತ್ತಿರುವ ಘಟನೆ ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಊರುಗಳಲ್ಲಿ ಸಾಮಾನ್ಯವಾಗಿ ಇಂತಹ ಪುಂಡರಿರುತ್ತಾರೆ. ಸರಕಾರಿ ಕಚೇರಿ, ಶಾಲಾ- ಕಾಲೇಜುಗಳನ್ನೇ ಅಡ್ಡೆಯಾಗಿಸಿಕೊಂಡು, ರಾತ್ರಿಯಾಯಿತೆಂದರೆ ಮದ್ಯ, ಸಿಗರೇಟ್ ಸೇವಿಸಿ, ಇಡೀ ವಾತಾವರಣವನ್ನೇ ಗಲೀಜು ಮಾಡಿ ಹೋಗುತ್ತಾರೆ. ಮಾರನೆ ದಿನ ಶಾಲಾ ಮಕ್ಕಳು ಮದ್ಯದ ಬಾಟಲಿ, ಸಿಗರೇಟ್ ತುಂಡುಗಳನ್ನು ತೆಗೆದು ಸ್ವಚ್ಛಗೊಳಿಸಬೇಕಾಗುತ್ತದೆ.

ಜನವರಿ 26ರಂದು ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿದ್ದರೆ, ಸುಂಟಿಕೊಪ್ಪದಲ್ಲಿ ಪುಂಡ- ಪೋಕರಿಗಳು ದೇವಾಲಯದಂತಿರುವ ಶಾಲೆಯಲ್ಲೇ ಮದ್ಯ ಸೇವಿಸಿ, ಪಾರ್ಟಿ ಮಾಡಿದ್ದಾರೆ. ಹೆಂಡದ ಅಮಲಿನಲ್ಲಿ ಶಾಲೆಯ ಕೊಠಡಿ ಬಾಗಿಲು- ಕಿಟಕಿ ಒಡೆದು ಗಾಜನ್ನು ಪುಡಿ ಮಾಡಿ, ಮಜಾ ಉಡಾಯಿಸಿದ್ದಾರೆ.
ಒಂದು ಕಡೆ ಸುಂಟಿಕೊಪ್ಪ ಆಟೋರಿಕ್ಷಾ ಮತ್ತು ಚಾಲಕರ ಸಂಘದಿಂದ ಗಣರಾಜ್ಯೋತ್ಸವದ ಅಂಗವಾಗಿ ರಾತ್ರಿ ವೇಳೆ ಅದ್ದೂರಿಯ ಡ್ಯಾನ್ಸ್ ಮೇಳ ನಡೆಯುತ್ತಿತ್ತು. ಮತ್ತೊಂದೆಡೆ ಕೆಲವು ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಉಲುಗುಲಿ ರಸ್ತೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ನಿರ್ಜನ ಪ್ರದೇಶಕ್ಕೆ ದಾಳಿಯಿಟ್ಟು, ಕಟ್ಟಡದ ಕಿಟಕಿ ಗಾಜುಗಳನ್ನು ನಾಶಪಡಿಸಿದ್ದಾರೆ.
ಅಲ್ಲೇ ಮದ್ಯ ಸೇವನೆ ಮಾಡಿ, ಬಾಟಲಿ, ಉಪ್ಪಿನಕಾಯಿ ಅಲ್ಲೇ ಎಸೆದಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications