ಸುಂಟಿಕೊಪ್ಪ ಸರಕಾರಿ ಶಾಲೆ ಅಂದರೆ ಓಪನ್ ಬಾರು, ಮಜಾ ಜೋರು!
ಮಡಿಕೇರಿ, ಜನವರಿ 30: ಕೆಲವು ಪುಂಡ-ಪೋಕರಿಗಳು ಮದ್ಯಪಾನ, ಧೂಮಪಾನಕ್ಕಾಗಿ ರಾತ್ರಿ ಹೊತ್ತು ಸರಕಾರಿ ಶಾಲೆಯನ್ನು ಬಳಸಿಕೊಂಡು, ಇಡೀ ವಾತಾವರಣವನ್ನೇ ಗಬ್ಬೆಬ್ಬಿಸುತ್ತಿರುವ ಘಟನೆ ಸುಂಟಿಕೊಪ್ಪ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಊರುಗಳಲ್ಲಿ ಸಾಮಾನ್ಯವಾಗಿ ಇಂತಹ ಪುಂಡರಿರುತ್ತಾರೆ. ಸರಕಾರಿ ಕಚೇರಿ, ಶಾಲಾ- ಕಾಲೇಜುಗಳನ್ನೇ ಅಡ್ಡೆಯಾಗಿಸಿಕೊಂಡು, ರಾತ್ರಿಯಾಯಿತೆಂದರೆ ಮದ್ಯ, ಸಿಗರೇಟ್ ಸೇವಿಸಿ, ಇಡೀ ವಾತಾವರಣವನ್ನೇ ಗಲೀಜು ಮಾಡಿ ಹೋಗುತ್ತಾರೆ. ಮಾರನೆ ದಿನ ಶಾಲಾ ಮಕ್ಕಳು ಮದ್ಯದ ಬಾಟಲಿ, ಸಿಗರೇಟ್ ತುಂಡುಗಳನ್ನು ತೆಗೆದು ಸ್ವಚ್ಛಗೊಳಿಸಬೇಕಾಗುತ್ತದೆ.

ಜನವರಿ 26ರಂದು ಇಡೀ ದೇಶ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿದ್ದರೆ, ಸುಂಟಿಕೊಪ್ಪದಲ್ಲಿ ಪುಂಡ- ಪೋಕರಿಗಳು ದೇವಾಲಯದಂತಿರುವ ಶಾಲೆಯಲ್ಲೇ ಮದ್ಯ ಸೇವಿಸಿ, ಪಾರ್ಟಿ ಮಾಡಿದ್ದಾರೆ. ಹೆಂಡದ ಅಮಲಿನಲ್ಲಿ ಶಾಲೆಯ ಕೊಠಡಿ ಬಾಗಿಲು- ಕಿಟಕಿ ಒಡೆದು ಗಾಜನ್ನು ಪುಡಿ ಮಾಡಿ, ಮಜಾ ಉಡಾಯಿಸಿದ್ದಾರೆ.
ಒಂದು ಕಡೆ ಸುಂಟಿಕೊಪ್ಪ ಆಟೋರಿಕ್ಷಾ ಮತ್ತು ಚಾಲಕರ ಸಂಘದಿಂದ ಗಣರಾಜ್ಯೋತ್ಸವದ ಅಂಗವಾಗಿ ರಾತ್ರಿ ವೇಳೆ ಅದ್ದೂರಿಯ ಡ್ಯಾನ್ಸ್ ಮೇಳ ನಡೆಯುತ್ತಿತ್ತು. ಮತ್ತೊಂದೆಡೆ ಕೆಲವು ಕಿಡಿಗೇಡಿಗಳು ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಉಲುಗುಲಿ ರಸ್ತೆಯಲ್ಲಿರುವ ಸರಕಾರಿ ಪದವಿ ಪೂರ್ವ ಕಾಲೇಜಿನ ನಿರ್ಜನ ಪ್ರದೇಶಕ್ಕೆ ದಾಳಿಯಿಟ್ಟು, ಕಟ್ಟಡದ ಕಿಟಕಿ ಗಾಜುಗಳನ್ನು ನಾಶಪಡಿಸಿದ್ದಾರೆ.
ಅಲ್ಲೇ ಮದ್ಯ ಸೇವನೆ ಮಾಡಿ, ಬಾಟಲಿ, ಉಪ್ಪಿನಕಾಯಿ ಅಲ್ಲೇ ಎಸೆದಿದ್ದಾರೆ. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications