ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವಕ್ಕೆ ಸಿದ್ಧತೆ
ಕೊಡಗು, ಅಕ್ಟೋಬರ್ 17: ಜೀವನದಿ ಕಾವೇರಿ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ 12.59ಕ್ಕೆ ತೀರ್ಥೋದ್ಭವವಾಗಲಿದ್ದು, ಭಕ್ತರು ಈ ಪವಿತ್ರ ದೃಶ್ಯಕ್ಕೆ ಸಾಕ್ಷಿಯಾಗಲು ಕೊಡಗಿನತ್ತ ಧಾವಿಸುತ್ತಿದ್ದಾರೆ.
ತಲಕಾವೇರಿಯಲ್ಲಿ ಅಕ್ಟೋಬರ್ 18ರಂದು ಕಾವೇರಿ ತೀರ್ಥೋದ್ಭವ
ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಹಲವೆಡೆಯಿಂದ ಜನರು ಕೊಡಗಿಗೆ ಆಗಮಿಸಿದ್ದಾರೆ. ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ಸಂಜೆ ವೇಳೆಗೆ ಸಾವಿರಾರು ಭಕ್ತರು ತೀರ್ಥೋದ್ಭವ ನೋಡಲು ಬರಲಿದ್ದಾರೆ. ತೀರ್ಥೋದ್ಭವದ ನಂತರ ನಾನಾ ಪೂಜಾ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಲಾಗುವುದು.
ಹೊರರಾಜ್ಯದ, ದೇಶದ ನಾನಾ ಕಡೆಗಳಿಂದ ಭಕ್ತರು ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಲಿದ್ದಾರೆ. ತಲಕಾವೇರಿಯಲ್ಲಿ ಭದ್ರತೆಗಾಗಿ ಸಿಸಿಟಿವಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ದಾರಿ ದೀಪಗಳು, ಎಲ್ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ. ಈ ಬಾರಿ ಮಧ್ಯರಾತ್ರಿ ತೀರ್ಥ ಉದ್ಭವಿಸುವುದರಿಂದ ಜನರ ಸಂಖ್ಯೆ ಕಡಿಮೆಯಿರುವ ಅಂದಾಜಿದೆ. ತೀರ್ಥೊದ್ಭವದ ನಂತರ ತಲಕಾವೇರಿಯಲ್ಲಿ 1 ತಿಂಗಳ ಕಾಲ ಜಾತ್ರೆ ನಡೆಯಲಿದೆ.