ಮಡಿಕೇರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ ತೀರ್ಥೋದ್ಭವಕ್ಕೆ ಸಿದ್ಧತೆ

By ಮಡಿಕೆರಿ ಪ್ರತಿನಿಧಿ
|
Google Oneindia Kannada News

ಕೊಡಗು, ಅಕ್ಟೋಬರ್ 17: ಜೀವನದಿ ಕಾವೇರಿ ಉಗಮ ಸ್ಥಾನ ಕೊಡಗಿನ ತಲಕಾವೇರಿಯಲ್ಲಿ ಇಂದು ಮಧ್ಯರಾತ್ರಿ 12.59ಕ್ಕೆ ತೀರ್ಥೋದ್ಭವವಾಗಲಿದ್ದು, ಭಕ್ತರು ಈ ಪವಿತ್ರ ದೃಶ್ಯಕ್ಕೆ ಸಾಕ್ಷಿಯಾಗಲು ಕೊಡಗಿನತ್ತ ಧಾವಿಸುತ್ತಿದ್ದಾರೆ.

ತಲಕಾವೇರಿಯಲ್ಲಿ ಅಕ್ಟೋಬರ್ 18ರಂದು ಕಾವೇರಿ ತೀರ್ಥೋದ್ಭವತಲಕಾವೇರಿಯಲ್ಲಿ ಅಕ್ಟೋಬರ್ 18ರಂದು ಕಾವೇರಿ ತೀರ್ಥೋದ್ಭವ

ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಹಲವೆಡೆಯಿಂದ ಜನರು ಕೊಡಗಿಗೆ ಆಗಮಿಸಿದ್ದಾರೆ. ಇಂದು ಸಂಜೆ ಮಹಾಮಂಗಳಾರತಿ ನಂತರ ಭಕ್ತರಿಗೆ ಕ್ಷೇತ್ರಕ್ಕೆ ಪ್ರವೇಶ ಸಿಗಲಿದೆ. ಸಂಜೆ ವೇಳೆಗೆ ಸಾವಿರಾರು ಭಕ್ತರು ತೀರ್ಥೋದ್ಭವ ನೋಡಲು ಬರಲಿದ್ದಾರೆ. ತೀರ್ಥೋದ್ಭವದ ನಂತರ ನಾನಾ ಪೂಜಾ ಕೈಂಕರ್ಯಗಳು ನಡೆಯಲಿವೆ. ಈ ಸಂದರ್ಭ ಭಗಂಡೇಶ್ವರನಿಗೆ ಪೂಜೆ ಸಲ್ಲಿಸಲಾಗುವುದು.

Teerthodbhava At Talakaveri Today Midnight

ಹೊರರಾಜ್ಯದ, ದೇಶದ ನಾನಾ ಕಡೆಗಳಿಂದ ಭಕ್ತರು ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಆಗಮಿಸಲಿದ್ದಾರೆ. ತಲಕಾವೇರಿಯಲ್ಲಿ ಭದ್ರತೆಗಾಗಿ ಸಿಸಿಟಿವಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ದಾರಿ ದೀಪಗಳು, ಎಲ್ಇಡಿ ಬಲ್ಬ್​ಗಳನ್ನು ಅಳವಡಿಸಲಾಗಿದೆ. ಈ ಬಾರಿ ಮಧ್ಯರಾತ್ರಿ ತೀರ್ಥ ಉದ್ಭವಿಸುವುದರಿಂದ ಜನರ ಸಂಖ್ಯೆ ಕಡಿಮೆಯಿರುವ ಅಂದಾಜಿದೆ. ತೀರ್ಥೊದ್ಭವದ ನಂತರ ತಲಕಾವೇರಿಯಲ್ಲಿ 1 ತಿಂಗಳ ಕಾಲ ಜಾತ್ರೆ ನಡೆಯಲಿದೆ.

English summary
Teerthodbhava will happen at midnight 12.59 at Talakavari, the birthplace of river Kaveri today.Tourists are coming to madikeri to see this special event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X