Kodagu Rain: ಕೊಡಗಿನಲ್ಲಿ ಆಶಾದಾಯಕ ಮುಂಗಾರಿನ ಮುನ್ಸೂಚನೆ
ಮಡಿಕೇರಿ, ಮೇ 18: ಕಾವೇರಿ ತವರು ಕೊಡಗಿನಲ್ಲಿ ಮುಂಗಾರು ಆಶಾದಾಯಕವಾದರೆ ಕಾವೇರಿ ಕಣಿವೆ ಸಮೃದ್ಧಿಯಾಗಿ ಜನ ನೆಮ್ಮದಿಯುಸಿರು ಬಿಡಲು ಸಾಧ್ಯವಾಗುತ್ತದೆ. ಹೀಗಾಗಿ ಮುಂಗಾರು ಮಳೆ ಆರಂಭವಾಯಿತೆಂದರೆ ಎಲ್ಲರ ಚಿತ್ತ ಕೊಡಗಿನತ್ತ ನೆಡುತ್ತದೆ. ಮತ್ತು ಮಳೆ ಉತ್ತಮವಾಗಿ ಆಗಲಿ ಎಂದು ಬಯಸುತ್ತಾರೆ. ಈ ಬಾರಿಯ ಪೂರ್ವ ಮುಂಗಾರು ಮಳೆ ಸುರಿಯುತ್ತಿರುವುದನ್ನು ಗಮನಿಸಿದರೆ ಈ ಬಾರಿ ಆಶಾದಾಯಕ ಮುಂಗಾರಿನ ಮುನ್ಸೂಚನೆ ಕಾಣುತ್ತಿದೆ.
ಈ ಬಾರಿ ಬೇಸಿಗೆಯಲ್ಲಿ ಮಳೆ ಸುರಿಯಲೇ ಇಲ್ಲ. ಇಡೀ ಜಿಲ್ಲೆಯಲ್ಲಿ ಕೆಲವು ಭಾಗದಲ್ಲಿ ಮಾತ್ರ ಮಳೆ ಸುರಿದಿತ್ತು. ಸಾಮಾನ್ಯವಾಗಿ ಜನವರಿ ಫೆಬ್ರವರಿ ತಿಂಗಳಲ್ಲಿ ಸುರಿಯಬೇಕಾಗಿದ್ದ ಮಳೆ ಮೇ ತಿಂಗಳಾದರೂ ಸಮರ್ಪಕವಾಗಿ ಸುರಿದಿರಲಿಲ್ಲ. ಆದರೆ ಮೇ ಮೊದಲ ವಾರದಲ್ಲಿ ಮಳೆ ಆರಂಭವಾಗಿದ್ದು, ಜಿಲ್ಲೆಯಾದ್ಯಂತ ಉತ್ತಮವಾಗಿ ಸುರಿಯುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಬತ್ತಿದ ಕಾವೇರಿ ನದಿಯಲ್ಲಿ ನೀರಿನ ಹರಿವು ಆರಂಭವಾಗಿದೆ. ಜತೆಗೆ ಕೆರೆ ಕಟ್ಟೆಗಳು, ಬಾವಿಗಳಲ್ಲಿ ಅಂತರ್ಜಲ ಸುಧಾರಿಸಲು ಆರಂಭಿಸಿದೆ. ಪಾತಾಳ ಕಂಡಿದ್ದ ಚಿಕ್ಲಿಹೊಳೆ ಮತ್ತು ಹಾರಂಗಿ ಜಲಾಶಯದಲ್ಲಿ ನೀರಿನ ಪ್ರಮಾಣ ನಿಧಾನವಾಗಿ ಹೆಚ್ಚಾಗುತ್ತಿದೆ.

ಇನ್ನು ಜಿಲ್ಲೆಗೊಂದು ಸುತ್ತು ಹೊಡೆದರೆ ಬಿಸಿಲಿಗೆ ಬಾಡಿ ಹೋಗಿದ್ದ ಕಾಫಿ ತೋಟಗಳು ಹಸಿರಿನಿಂದ ಕಂಗೊಳಿಸುತ್ತಿವೆ. ಅರಣ್ಯಗಳಿಗೂ ಜೀವಕಳೆ ಬಂದಿದೆ. ಇದೀಗ ಉತ್ತಮವಾಗಿಯೇ ಮಳೆ ಸುರಿಯುತ್ತಿರುವ ಕಾರಣ ಮುಂದಿನ ಮುಂಗಾರು ಕೂಡ ಆಶಾದಾಯಕ ಎಂಟ್ರಿ ಕೊಡಬಹುದು ಎಂಬ ನಿರೀಕ್ಷೆ ಜಿಲ್ಲೆಯ ಜನರದ್ದಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಳೆ ತಡವಾಗಿ ಆರಂಭವಾದರೂ ಉತ್ತಮವಾಗಿ ಮಳೆ ಸುರಿಯುತ್ತಿರುವುದು ಖುಷಿಯ ವಿಚಾರವಾಗಿದೆ.
ಕಳೆದ ವರ್ಷಕ್ಕಿಂತ 48.26 ಮಿ.ಮೀ ಹೆಚ್ಚು ಮಳೆ
ಕೊಡಗಿನಲ್ಲಿ ಮಳೆ ಉತ್ತಮವಾಗಿ ಸುರಿದು ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದರೆ ಕೊಡಗಿನಿಂದ ಬೆಂಗಳೂರಿನ ತನಕ ಜನ ನೆಮ್ಮದಿಯುಸಿರು ಬಿಡಲು ಸಾಧ್ಯವಾಗುತ್ತದೆ. ರೈತರು ಕೂಡ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ. ಜನವರಿಯಿಂದ ಇಲ್ಲಿ ತನಕ ಸುರಿದ ಮಳೆಯ ಪ್ರಮಾಣವನ್ನು ಗಮನಿಸಿದರೆ ತಡವಾದರೂ ಉತ್ತಮವಾಗಿಯೇ ಮಳೆ ಸುರಿಯುತ್ತಿರುವುದು ಕಾಣಿಸುತ್ತಿದೆ. ಜತೆಗೆ ಕಳೆದ ವರ್ಷಕ್ಕಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಮಳೆಯಾಗಿರುವುದು ಕಂಡು ಬರುತ್ತಿದೆ.

ಜನವರಿಯಿಂದ ಇಲ್ಲಿ ತನಕ ಮಳೆ ಎಷ್ಟು ಸುರಿದಿದೆ ಎಂಬುದನ್ನು ನೋಡಿದ್ದೇ ಆದರೆ ಶನಿವಾರದ(ಮೇ18) ತನಕ 162.84 ಮಿ.ಮೀ, ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 114.58 ಮಿ.ಮೀ ಮಳೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ 48.26 ಮಿ.ಮೀ ಮಳೆ ಜಾಸ್ತಿಯಾಗಿದೆ. ಈ ನಡುವೆ ಜೂನ್ ತಿಂಗಳ ಮೊದಲ ವಾರದಲ್ಲಿ ಮಾನ್ಸೂನ್ ಕೇರಳಕ್ಕೆ ಕಾಲಿಡಲಿದ್ದು, ಜಿಲ್ಲೆಯಲ್ಲೂ ಮುಂಗಾರು ಆರಂಭವಾಗಲಿದೆ ಎಂಬ ನಿರೀಕ್ಷೆಯಿದೆ.
ಜಲಾಶಯಗಳಲ್ಲಿ ಒಳ ಹರಿವು ಹೆಚ್ಚಳ
ಶನಿವಾರದ ತನಕ ಒಂದು ದಿನದ ಅವಧಿಯಲ್ಲಿ ಜಿಲ್ಲೆಯಲ್ಲಿ ಸರಾಸರಿ ಮಳೆ 12.10 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲ್ಲೂಕಿನಲ್ಲಿ 7.05 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ 17.20 ಮಿ.ಮೀ. ಪೊನ್ನಂಪೇಟೆ ತಾಲ್ಲೂಕಿನಲ್ಲಿ 16.11 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ 12.95 ಮಿ.ಮೀ. ಕುಶಾಲನಗರ ತಾಲ್ಲೂಕಿನಲ್ಲಿ 7.20 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು 26 ಮಿ.ಮೀ ಮಳೆ ಶಾಂತಳ್ಳಿಯಲ್ಲಿ ಸುರಿದಿದೆ.
ಮಳೆಯಾಗುತ್ತಿರುವ ಕಾರಣ ಹಾರಂಗಿ ಜಲಾಶಯದತ್ತ ನೀರು ಹರಿದು ಬರುತ್ತಿರುವುದರಿಂದ ಗರಿಷ್ಠ 2,859 ಅಡಿಗಳ ಜಲಾಶಯದಲ್ಲಿ ಸದ್ಯ 2822.98 ಅಡಿಗಳಷ್ಟು ನೀರಿದೆ. ಕಳೆದ ವರ್ಷ ಇದೇ ದಿನ 2819.75 ಅಡಿಗಳಷ್ಟು ನೀರಿತ್ತು. ಸದ್ಯ ಒಳಹರಿವು 308 ಕ್ಯುಸೆಕ್ ನಷ್ಟಿದ್ದರೆ, ಹೊರ ಹರಿವು 200 ಕ್ಯುಸೆಕ್ ನಷ್ಟಿದೆ. ಒಟ್ಟಾರೆ ಮಳೆ ಜಿಲ್ಲೆಯಲ್ಲಿ ಉತ್ತಮವಾಗಿ ಸುರಿಯುತ್ತಿದ್ದು, ಹೀಗೆಯೇ ಮುಂದುವರೆದರೆ ಸಾಕೆಂದು ಜನ ಪ್ರಾರ್ಥಿಸುತ್ತಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ -
Bengaluru Water: ಬೆಂಗಳೂರು ಕೆಸಿ, ಎಚ್ ಎನ್ ವ್ಯಾಲಿ ನೀರಿನಿಂದ ಅಪಾಯವಿಲ್ಲ: ಸಚಿವ ಭೋಸರಾಜು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications